ಬಿಜೆಪಿಗೆ ಬಿಸಿತುಪ್ಪವಾದ ಕಟ್ಟಾ, ಕೃಷ್ಣಯ್ಯ ಶೆಟ್ಟಿ

ಇಂತಹ ಇಕ್ಕಟ್ಟಿನ ಪರಿಸ್ಥತಿಗೆ ಸಿಲುಕಿರುವ ಮತ್ತೊಬ್ಬ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಕೆಜಿಎಫ್ ಶಾಸಕ ವೈ. ಸಂಪಂಗಿ ಬದಲಾಗಿ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವುದಾಗಿ ತೀರ್ಮಾನಿಸಿದೆ. ಆದರೆ, ಕಟ್ಟಾ ಮತ್ತು ಕೃಷ್ಣಯ್ಯ ಶೆಟ್ಟಿ ಕುಟುಂಬದವರಿಗೆ ಟಿಕೆಟ್ ನೀಡುವುದಾದದರೆ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಶನಿವಾರ ತಡರಾತ್ರಿಯವರೆಗೂ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಟ್ಟಾ ಮತ್ತು ಕೃಷ್ಣಯ್ಯ ಶೆಟ್ಟಿಗೆ ಟಿಕೆಟ್ ನೀಡಿಕೆ ಬಗ್ಗೆ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಇಂದು ಬೆಂಗಳೂರಿಗೆ ಆಗಮಿಸುವ ಬಿಜೆಪಿ ವರಿಷ್ಠ ಅರುಣ್ ಜೇಟ್ಲಿಯವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ.
ಆನಂದ್ ಸಿಂಗ್ ಗೆ ಟಿಕೆಟ್ : ಬಿಜೆಪಿ ತೊರೆದು ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದ ಹೊಸಪೇಟೆ ವಿಜಯನಗರ ಕ್ಷೇತ್ರದ ಶಾಸಕ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ನಿಲುವು ಬದಲಿಸಿದ್ದಾರೆ. ಶನಿವಾರ ಸಿಎಂ ಶೆಟ್ಟರ್ ಅವರನ್ನು ಭೇಟಿ ಮಾಡಿ ಪಕ್ಷದಲ್ಲೇ ಮುಂದುವರಿಯುತ್ತೇನೆ, ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಇಂದು ಬಿಡುಗಡೆಯಾಗಲಿರುವ ಬಿಜೆಪಿ ಅಂತಿಮ ಪಟ್ಟಿಯಲ್ಲಿ ಆನಂದ್ ಸಿಂಗ್ ಗೆ ಟಿಕೆಟ್ ದೊರೆಯುತ್ತದೆ ಎಂಬುದು ಪಕ್ಷದ ಮೂಲಗಳ ಮಾಹಿತಿ. ಬಳ್ಳಾರಿಯ ಸೋಮಶೇಖರ ರೆಡ್ಡಿ ಬಿಜೆಪಿಯಲ್ಲೇ ಮುಂದುವರಿಯುವ ಇಲ್ಲವೇ ಪಕ್ಷೇತರರಾಗಿ ಸ್ಪರ್ಧಿಸಲು ಆಲೋಚನೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
ಸುರೇಶ್ ಬಾಬು ಯೂ ಟರ್ನ್ : ಬಿಜೆಪಿಗೆ ರಾಜೀನಾಮೆ ನೀಡಿರುವ ಕಂಪ್ಲಿ ಶಾಸಕ ಸುರೇಶ್ಬಾಬು ಕೆಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಸುರೇಶ್ ಬಾಬು ಅವರಿಗೆ ಕಂಪ್ಲಿ ಕ್ಷೇತ್ರದಿಂದಲೇ ಬಿಎಸ್ಆರ್ ಕಾಂಗ್ರೆಸ್ ಟಿಕೆಟ್ ನೀಡಿದೆ. ಆದರೆ, ಅವರು ಪಕ್ಷ ಸೇರುವುದು ಅನುಮಾನ ಎಂದು ತಿಳಿದು ಬಂದಿದೆ.
ಬಿಎಸ್ಆರ್ ಗೆ ಸಂಕಷ್ಟ : ಸೋಮಶೇಖರ ರೆಡ್ಡಿ, ಸುರೇಶ್ ಬಾಬು, ನಟಿ ರಕ್ಷಿತಾ ಮುಂತಾದವರು ಪಕ್ಷ ಬಿಡುವ ಮಾತುಗಳನ್ನು ಆಡುತ್ತಿದ್ದಾರೆ. ಇದರಿಂದಾಗಿ ಶ್ರೀರಾಮುಲು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಬಿಜೆಪಿ ಜೊತೆ ವಿಲೀನದ ಮಾತುಕತೆ ನಡೆಸಲು ಶೆಟ್ಟರ್ ಭೇಟಿ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಏ.17 ಕೊನೆಯ ದಿನವಾಗಿದೆ ಆದರೆ, ಶಾಸಕರು ಯಾವ ಪಕ್ಷ ಸೇರಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಆದ್ದರಿಂದ ರಾಜ್ಯ ರಾಜಕೀಯ ಗೊಂದಲದ ಗೂಡಾಗಿದೆ.
ಎರಡು ದಿನಗಳಲ್ಲಿ ನಾಯಕರ ಪಕ್ಷ ಸೇರ್ಪಡೆ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಲಿದ್ದು, ನಂತರ ಯಾರು ಚುನಾವಣೆಗೆ ಯಾವ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಸ್ಪಷ್ಡವಾಗಲಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications