ಶಾಂತಿನಗರದಿಂದ ಮೇಯರ್ ಬಿಜೆಪಿ ಅಭ್ಯರ್ಥಿ?

ಬಿಜೆಪಿ ಮೂಲಗಳ ಮಾಹಿತಿ ಪ್ರಕಾರ ಮೇಯರ್ ವೆಂಕಟೇಶಮೂರ್ತಿ ಅವರಿಗೆ ಶಾಂತಿನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಹೈ ಕಮಾಂಡ್ ನಾಯಕರು ಮೇಯರ್ ಸ್ಪರ್ಧೆಗೆ ಅಸ್ತು ಎಂದಿದ್ದು, ಇಂದು ಸಂಜೆ ಅಥವ ನಾಳೆ ಬಿಡುಗಡೆಗೊಳ್ಳಲು ಬಿಜೆಪಿ ಪಟ್ಟಿಯಲ್ಲಿ ವೆಂಕಟೇಶಮೂರ್ತಿ ಅವರ ಹೆಸರು ಪ್ರಕಟಗೊಳ್ಳಲಿದೆ.
ಮೇಯರ್ ವೆಂಕಟೇಶಮೂರ್ತಿ ಅವರ ಅಧಿಕಾರವಧಿ ಏಪ್ರಿಲ್ 26ಕ್ಕೆ ಕೊನೆಗೊಳ್ಳಲಿದೆ. ಮೇಯರ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಹಿಂದಿನಿಂದಲೂ ಕೇಳಿಬಂದಿತ್ತು. ಯಶವಂತಪುರ, ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂಬ ಸುದ್ದಿಗಳು ಹರಡಿತ್ತು.
ಆದರೆ, ಭಾನುವಾರ ಬೆಜಪಿ ಕೆಚೇರಿಯಲ್ಲಿ ನಡೆಯುತ್ತಿರುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಮೇಯರ್ ವೆಂಕಟೇಶಮೂರ್ತಿ ಅವರಿಗೆ ಶಾಂತಿನಗರದ ಕ್ಷೇತ್ರದಿಂದ ಟಿಕೆಟ್ ನೀಡಲು ಒಪ್ಪಿಗೆ ನೀಡಿದ್ದಾರೆ. ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹ್ಯಾರೀಸ್ ಅವರನ್ನು ಸೋಲಿಸಿ, ಕ್ಷೇತ್ರ ವಶಪಡಿಸಿಕೊಳ್ಳುವುದು ಬಿಜೆಪಿ ಚಿಂತನೆ.
ಅಶೋಕ್ ಪ್ರಭಾವ : ಮೇಯರ್ ವೆಂಕಟೇಶಮೂರ್ತಿ ಅವರಿಗೆ ಟಿಕೆಟ್ ದೊರಕುವಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವ ಆರ್.ಅಶೋಕ್ ಎಂಬುದು ಗುಟ್ಟಾಗಿ ಉಳಿದಿಲ್ಲ. ಆರ್.ಅಶೋಕ್ ಅವರು ಆಪ್ತರಾಗಿರುವ ವೆಂಕಟೇಶಮೂರ್ತಿ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಕೊನೆಗೂ ಅಶೋಕ್ ಯಶಸ್ವಿಯಾಗಿದ್ದಾರೆ.
ಕ್ಷೇತ್ರ ಬದಲು : ಮೇಯರ್ ಅವರ ಸ್ವ ಕ್ಷೇತ್ರ ಕತ್ರಿಗುಪ್ಪೆ ಅವರು ಹತ್ತಿರದ ವಿಧಾನಸಭಾ ಕ್ಷೇತ್ರವಾದ ಪದ್ಮನಾಭ ನಗರ ಅಥವ ಬಸವನಗುಡಿಯಿಂದ ಸ್ಪರ್ಧಿಸಬೇಕಾಗಿತ್ತು. ಆದರೆ, ಅಶೋಕ್ ಮತ್ತು ರವಿ ಸುಬ್ರಮಣ್ಯ ಅವರಿಂದಾಗಿ ವೆಂಕಟೇಶ ಮೂರ್ತಿ ಅವರಿಗೆ ಆ ಕ್ಷೇತ್ರಗಳು ದೊರಕಿಲ್ಲ.
ಆದ್ದರಿಂದ ಶಾಂತಿನಗರ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮೇಯರ್ ಗೆ ಬೆಂಬಲ ನೀಡುತ್ತಾರೋ? ಅಥವ ಮತ್ತೊಂದು ಬಂಡಾಯ ಹುಟ್ಟು ಹಾಕುತ್ತಾರೋ? ಎಂದು ಕಾದು ನೋಡಬೇಕು.
ಎಲ್ಲಾ ಪಕ್ಷಗಳ ಕೆಲವು ಬಿಬಿಎಂಪಿ ಸದಸ್ಯರು ಟಿಕೆಟ್ ಬಯಸಿ ಪಕ್ಷದ ನಾಯಕರ ಮೇಲೆ ಪ್ರಭಾವ ತಂದಿದ್ದರು ಅವರಿಗೆ ಟಿಕೆಟ್ ದೊರೆಯುವ ಬಗ್ಗೆ ಯಾವುದೇ ಪಕ್ಷಗಳು ಮಾತನಾಡುತ್ತಿಲ್ಲ. ಒಟ್ಟಿನಲ್ಲಿ ಮೇಯರ್ ಇಂದಿನ ಕಾರ್ಪೋರೇಟರ್ ಮುಂದಿನ ಶಾಸಕ ಎಂಬ ಮಾತು ನಿಜವಾಗಿಸಲು ಹೊರಟಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications