ಶಾಂತಿನಗರದಿಂದ ಮೇಯರ್ ಬಿಜೆಪಿ ಅಭ್ಯರ್ಥಿ?

ಬಿಜೆಪಿ ಮೂಲಗಳ ಮಾಹಿತಿ ಪ್ರಕಾರ ಮೇಯರ್ ವೆಂಕಟೇಶಮೂರ್ತಿ ಅವರಿಗೆ ಶಾಂತಿನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಹೈ ಕಮಾಂಡ್ ನಾಯಕರು ಮೇಯರ್ ಸ್ಪರ್ಧೆಗೆ ಅಸ್ತು ಎಂದಿದ್ದು, ಇಂದು ಸಂಜೆ ಅಥವ ನಾಳೆ ಬಿಡುಗಡೆಗೊಳ್ಳಲು ಬಿಜೆಪಿ ಪಟ್ಟಿಯಲ್ಲಿ ವೆಂಕಟೇಶಮೂರ್ತಿ ಅವರ ಹೆಸರು ಪ್ರಕಟಗೊಳ್ಳಲಿದೆ.
ಮೇಯರ್ ವೆಂಕಟೇಶಮೂರ್ತಿ ಅವರ ಅಧಿಕಾರವಧಿ ಏಪ್ರಿಲ್ 26ಕ್ಕೆ ಕೊನೆಗೊಳ್ಳಲಿದೆ. ಮೇಯರ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಹಿಂದಿನಿಂದಲೂ ಕೇಳಿಬಂದಿತ್ತು. ಯಶವಂತಪುರ, ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂಬ ಸುದ್ದಿಗಳು ಹರಡಿತ್ತು.
ಆದರೆ, ಭಾನುವಾರ ಬೆಜಪಿ ಕೆಚೇರಿಯಲ್ಲಿ ನಡೆಯುತ್ತಿರುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಮೇಯರ್ ವೆಂಕಟೇಶಮೂರ್ತಿ ಅವರಿಗೆ ಶಾಂತಿನಗರದ ಕ್ಷೇತ್ರದಿಂದ ಟಿಕೆಟ್ ನೀಡಲು ಒಪ್ಪಿಗೆ ನೀಡಿದ್ದಾರೆ. ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹ್ಯಾರೀಸ್ ಅವರನ್ನು ಸೋಲಿಸಿ, ಕ್ಷೇತ್ರ ವಶಪಡಿಸಿಕೊಳ್ಳುವುದು ಬಿಜೆಪಿ ಚಿಂತನೆ.
ಅಶೋಕ್ ಪ್ರಭಾವ : ಮೇಯರ್ ವೆಂಕಟೇಶಮೂರ್ತಿ ಅವರಿಗೆ ಟಿಕೆಟ್ ದೊರಕುವಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವ ಆರ್.ಅಶೋಕ್ ಎಂಬುದು ಗುಟ್ಟಾಗಿ ಉಳಿದಿಲ್ಲ. ಆರ್.ಅಶೋಕ್ ಅವರು ಆಪ್ತರಾಗಿರುವ ವೆಂಕಟೇಶಮೂರ್ತಿ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಕೊನೆಗೂ ಅಶೋಕ್ ಯಶಸ್ವಿಯಾಗಿದ್ದಾರೆ.
ಕ್ಷೇತ್ರ ಬದಲು : ಮೇಯರ್ ಅವರ ಸ್ವ ಕ್ಷೇತ್ರ ಕತ್ರಿಗುಪ್ಪೆ ಅವರು ಹತ್ತಿರದ ವಿಧಾನಸಭಾ ಕ್ಷೇತ್ರವಾದ ಪದ್ಮನಾಭ ನಗರ ಅಥವ ಬಸವನಗುಡಿಯಿಂದ ಸ್ಪರ್ಧಿಸಬೇಕಾಗಿತ್ತು. ಆದರೆ, ಅಶೋಕ್ ಮತ್ತು ರವಿ ಸುಬ್ರಮಣ್ಯ ಅವರಿಂದಾಗಿ ವೆಂಕಟೇಶ ಮೂರ್ತಿ ಅವರಿಗೆ ಆ ಕ್ಷೇತ್ರಗಳು ದೊರಕಿಲ್ಲ.
ಆದ್ದರಿಂದ ಶಾಂತಿನಗರ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮೇಯರ್ ಗೆ ಬೆಂಬಲ ನೀಡುತ್ತಾರೋ? ಅಥವ ಮತ್ತೊಂದು ಬಂಡಾಯ ಹುಟ್ಟು ಹಾಕುತ್ತಾರೋ? ಎಂದು ಕಾದು ನೋಡಬೇಕು.
ಎಲ್ಲಾ ಪಕ್ಷಗಳ ಕೆಲವು ಬಿಬಿಎಂಪಿ ಸದಸ್ಯರು ಟಿಕೆಟ್ ಬಯಸಿ ಪಕ್ಷದ ನಾಯಕರ ಮೇಲೆ ಪ್ರಭಾವ ತಂದಿದ್ದರು ಅವರಿಗೆ ಟಿಕೆಟ್ ದೊರೆಯುವ ಬಗ್ಗೆ ಯಾವುದೇ ಪಕ್ಷಗಳು ಮಾತನಾಡುತ್ತಿಲ್ಲ. ಒಟ್ಟಿನಲ್ಲಿ ಮೇಯರ್ ಇಂದಿನ ಕಾರ್ಪೋರೇಟರ್ ಮುಂದಿನ ಶಾಸಕ ಎಂಬ ಮಾತು ನಿಜವಾಗಿಸಲು ಹೊರಟಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications