ರಾಜಕೀಯ ಜನ್ಮ ನೀಡಿದ ಕ್ಷೇತ್ರ ಬಿಡೋದುಂಟೆ?

ಲೇಟೆಸ್ಟ್ ಸುದ್ದಿ: ಮಾವಿನಕೆರೆ ರಂಗನಾಥ, ಲಕ್ಷ್ಮಿನರಸಿಂಹ ಸ್ವಾಮಿ, ಆಂಜನೇಯಸ್ವಾಮಿ ದರ್ಶನ ಪಡೆದ ರೇವಣ್ಣ ದಂಪತಿಗಳು ಸೋಮವಾರ ಮಧ್ಯಾಹ್ನ ರಾಹುಕಾಲ ಮುಗಿಸಿಕೊಂಡು ಮೆರವಣಿಗೆ ನಡೆಸಿದರು. ಹೊಳೆ ನರಸೀಪುರದ ಜೆಡಿಎಸ್ ಅಭ್ಯರ್ಥಿಯಾಗಿ ರೇವಣ್ಣ ಅವರು ನಾಮಪತ್ರ ಸಲ್ಲಿಸಿದರು.
ಭಾನುವಾರ ಹೊಳೆನರಸೀಪುರ ಕ್ಷೇತ್ರದ ಕುಂದೂರು ಮಠದಲ್ಲಿ ನಡೆದ ಜೆಡಿಎಸ್ ಬಹಿರಂಗ ಸಭೆಯಲ್ಲಿ ಮಾತನಾಡಿದ ರೇವಣ್ಣ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ನನಗೆ ರಾಜಕೀಯ ಜನ್ಮ ನೀಡಿದ ಹೊಳೆನರಸೀಪುರ ಕ್ಷೇತ್ರ ಬಿಟ್ಟು ಬೇರಲ್ಲೂ ಹೋಗುವ ಮಾತೇ ಇಲ್ಲ. ರಾಜಕೀಯದಲ್ಲಿದ್ದರೆ ಅದು ಈ ಕ್ಷೇತ್ರದ ಜನತೆಯೊಂದಿಗೆ ಮಾತ್ರ ಎಂದು ರೇವಣ್ಣ ಹೇಳಿದರು.
ರೇವಣ್ಣ ಬಗ್ಗೆ ಹಬ್ಬಿದ್ದ ಸುದ್ದಿ: ಮಹಿಳೆಯಿಂದ ನಿಮಗೆ ಕಂಟಕವಿದೆ. ಹಾಗಾಗಿ ಪರಂಪರಾಗತ ಹೊಳೇನರಸೀಪುರವನ್ನು ಬಿಟ್ಟು ಪಕ್ಕದ ಶ್ರವಣಬೆಳಗೊಳ ಕ್ಷೇತ್ರ ಆಯ್ಕೆ ಮಾಡಿಕೊಳ್ಳಿ ಎಂದು ಜ್ಯೋತಿಷಿಗಳು ಸಲಹೆ ನೀಡಿದ್ದರಂತೆ. ಈ ಹಿಂದೆ ದೇವೇಗೌಡರು ಕೂಡಾ ಒಮ್ಮೆ ತೇಜಸ್ವಿನಿ ಎಂಬ ಮಹಿಳೆಯ ವಿರುದ್ಧ ಸೋತಿದ್ದು ರೇವಣ್ಣ ಅವರಿಗೆ ನೆನಪಿಗೆ ಬಂದು ಭೀತಿ ಕಾಡಿತ್ತಂತೆ.
ಹೊಳೇನರಸೀಪುರದಲ್ಲಿ ಕಾಂಗ್ರೆಸ್ಸಿನ ಅನುಪಮ ಮಹೇಶ್ ಅವರಿಗೆ (ದಿ. ಜಿ. ಪುಟ್ಟಸ್ವಾಮಿ ಗೌಡರ ಸೊಸೆ) ಮತ್ತೆ ಟಿಕೆಟ್ ಸಿಕ್ಕಿದೆ. ಯಾವುದೇ ಕಾರಣಕ್ಕೂ ಮಹಿಳೆಯ ಎದುರು ಕಣಕ್ಕೆ ಇಳಿಯಬೇಡಿ ಎಂದು ಸಲಹೆ ನೀಡಿ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಜ್ಯೋತಿಷಿ ಇಷ್ಟು ಭವಿಷ್ಯ ಹೇಳಿದ್ದೇ ತಡ ರೇವಣ್ಣ ಸ್ವಕುಟುಂಬ ಪರಿವಾರ ಸಮೇತರಾಗಿ ಶೃಂಗೇರಿ, ಕೊಲ್ಲೂರು ಕಡೆಗೆ ತೀರ್ಥಯಾತ್ರೆ ಹೋಗಿಬಂದರಂತೆ. ಹೋಮ ಹವನಗಳಲ್ಲೇ ವಿರೋಧಿಗಳನ್ನು ಸದೆಬಡಿಯುವ ಗೌಡರ ಕುಟುಂಬದ ರೇವಣ್ಣ ಅವರು ಅಲ್ಲೆಲ್ಲಾ ಚಂಡಿಕಾ ಹೋಮ ನಡೆಸಿದ್ದಾರೆ.
ಅದಾಗುತ್ತಿದ್ದಂತೆ ಶ್ರವಣಬೆಳಗೊಳದ ಜೆಡಿಎಸ್ ಅಭ್ಯರ್ಥಿ ಸಿಎನ್ ಬಾಲಕೃಷ್ಣ ಅವರಿಗೆ ಫೋನಾಯಿಸಿ, ಈ ಬಾರಿ ನಾನೇ ನಿನ್ನ ಕ್ಷೇತ್ರದಿಂದ ನಿಲ್ತಿದ್ದೀನಿ ಎಂದು ಬಾಲಕೃಷ್ಣಗೆ ಮಾತ್ರ ಕೇಳಿಸುವಂತೆ ಹೇಳಿದ್ದಾರೆ ಎಂಬ ಸುದ್ದಿ ಬಂದಿತ್ತು.
ಅದರೆ, ಎಲ್ಲಾ ಸುದ್ದಿಗಳನ್ನು ಬದಿಗೊತ್ತಿದ ರೇವಣ್ಣ ಅವರು ಹೊಳೆನರಸೀಪುರದಿಂದಲೇ ಸ್ಪರ್ಧಿಸುವುದಾಗಿ ಘೋಷಿಸಿರುವುದು ಅವರ ಅಭಿಮಾನಿಗಳಿಗೆ ಖುಷಿ ತಂದಿದೆ. ಆದರೆ, ಭವಾನಿ ರೇವಣ್ಣ ಸ್ಪರ್ಧೆ ಬಗ್ಗೆ ಗೊಂದಲ ಇನ್ನೂ ಮುಂದುವರೆದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications