ಮನೆಗೊಂದು ಸೊಳ್ಳೆಪರದೆ, ವಾಟಾಳ್ ಭರವಸೆ !

ಭಾನುವಾರ ಬೆಂಗಳೂರಿನಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್, ಚುನಾವಣೆಗಾಗಿ ತಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿ ನವ ಕರ್ನಾಟಕ ನಿರ್ಮಾಣಕ್ಕೆ ಆದ್ಯತ ನೀಡಲಾಗಿದೆ. ಚಾಮರಾಜನಗರ ಸೇರಿದಂತೆ ವಿವಿಧ ಗಡಿ ಪ್ರದೇಶಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಯೋಜನೆ ರೂಪಿಸಲಾಗಿದೆ ಎಂದು ವಾಟಾಳ್ ನಾಗರಾಜ್ ಹೇಳಿದರು.
ರಾಜ್ಯದಲ್ಲಿ ಗೃಹ ಕೈಗಾರಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುವುದು. ಬಡವರ ಮತ್ತು ಶ್ರಮಿಕರಿಗೆ ಉತ್ತಮ ಸೌಲಭ್ಯ ಒದಗಿಸಿಕೊಡುವುದು ಕನ್ನಡ ಚಳವಳಿ ವಾಟಾಳ್ ಪಕ್ಷದ ಪ್ರಮುಖ ಧ್ಯೇಯವಾಗಿದೆ ಎಂದರು
25 ಅಭ್ಯರ್ಥಿಗಳು : ವಿಧಾನಸಭೆ ಚುನಾವಣೆಗೆ ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ 25 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಅವರು ತಿಳಿಸಿದರು. ಚಾಮರಾಜನಗರ ಕ್ಷೇತ್ರದಿಂದ ತಾವು ಸ್ಪರ್ಧಿಸುವಾಗಿ ವಾಟಾಳ್ ನಾಗರಾಜ್ ಹೇಳಿದರು.
ಪ್ರಣಾಳಿಕೆಯ ಮುಖ್ಯಾಂಶಗಳು
* ಪ್ರತಿ ಜಿಲ್ಲೆಗಳಲ್ಲೂ ಕನ್ನಡ ಸಾಹಿತಿಗಳ ಪ್ರತಿಮೆ ಸ್ಥಾಪನೆ
* ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ
* ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್
* ಹೊಸ ಜಿಲ್ಲೆಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಅನುದಾನ
* ಬಡ ಹೆಣ್ಣುಮಕ್ಕಳ ವಿವಾಹಕ್ಕೆ 50 ಸಾವಿರ ಸಹಾಯಧನ
* ಪ್ರತಿ ಮನೆಗೂ ಸೊಳ್ಳೆಪರದೆ ವಿತರಣೆ
* ಕನ್ನಡ ಸಂಸ್ಕೃತಿ-ಸಾಹಿತ್ಯ ಉಳಿಸಲು ಪ್ರತ್ಯೇಕ ಯೋಜನೆ
* ಗ್ರಾಮ ಪಂಚಾಯಿತಿಯಿಂದ ವಿಧಾನಸೌಧದವರೆಗೆ ಕನ್ನಡದಲ್ಲೇ ಆಡಳಿತ
* ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ಸರ್ಕಾರಿ ಉದ್ಯೋಗದಲ್ಲಿ ಆದ್ಯತೆ
* ಪ್ರತಿ ಜಿಲ್ಲೆಗಳಲ್ಲೂ ಕನ್ನಡ ಭವನ ನಿರ್ಮಾಣ
* ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಹೋರಾಟ
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications