ಖೇಣಿ, ಅಬ್ರಾಹಂ ನಡುವೆ ಬಿಗ್ ಫೈಟ್

ಇದುವರೆಗೂ ನ್ಯಾಯಾಲಯ ಮತ್ತು ಮಾಧ್ಯಗಳಲ್ಲಿ ನಡೆಯುತ್ತಿದ್ದ ಖೇಣಿ ಮತ್ತು ಅಬ್ರಾಹಂ ನಡುವಿನ ಕಾಳಗ ಈಗ ಚುನಾವಣೆಯಲ್ಲೂ ಮುಂದುವರೆದಿದೆ. ಬೀದರ್ ದಕ್ಷಿಣ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಇಂದು ಟಿ.ಜೆ.ಅಬ್ರಾಹಂ ನಾಮಪತ್ರ ಸಲ್ಲಿಸಲಿದ್ದಾರೆ.
ಮೂಲತಃ ಬೀದರ್ ನವರಾದ ಕರ್ನಾಟಕ ಮಕ್ಕಳ ಪಕ್ಷದ ಅಧ್ಯಕ್ಷ ಮತ್ತು ಉದ್ಯಮಿ ಅಶೋಕ್ ಖೇಣಿ ಬೀದರ್ ದಕ್ಷಿಣ ಕ್ಷೇತ್ರದಿಂದ ಚುನಾಣೆಗೆ ಸ್ಪರ್ಧಿಸುವುದಾದಿ ಘೋಷಿಸಿದ್ದರು. ಖೇಣಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಖೇಣಿ ವಿರುದ್ದ ಕಾನೂನು ಸಮರ ಸಾರಿರುವ ಟಿ.ಜೆ. ಅಬ್ರಾಹಂ ಸಹ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಇಬ್ಬರ ನಡುವಿನ ಕಾದಾಟದಿಂದಾಗಿ ಬೀದರ್ ದಕ್ಷಿಣ ಕ್ಷೇತ್ರ ಸ್ಟಾರ್ ಕ್ಷೇತ್ರವಾಗಿ ಬದಲಾವಣೆಯಾಗಲಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡುತ್ತೇನೆ ಎಂದು ಕರ್ನಾಟಕ ಮಕ್ಕಳ ಪಕ್ಷ ಸ್ಥಾಪಿಸಿರುವ ಖೇಣಿ, ನಡೆಸಿದ್ದಾರೆ ಎಂಬ ಆರೋಪಿಸುತ್ತಿರುವ ಹಗರಣಗಳನ್ನೇ ಜನರಿಗೆ ತಲುಪಿಸಿ ಮತ ಕೇಳಲು ಅಬ್ರಾಹಂ ನಿರ್ಧರಿಸಿದ್ದಾರೆ.
ವಿಭಿನ್ನ ಪ್ರಚಾರ : ಟಿ.ಜೆ.ಅಬ್ರಾಹಂ ವಿಭಿನ್ನ ರೀತಿಯ ಪ್ರಚಾರ ಕೈಗೊಳ್ಳಲಿದ್ದಾರೆ. ಚುನಾವಣೆಯಲ್ಲಿ ನನಗೆ ಮತ ನೀಡಿ ಎಂದು ಅಭ್ಯರ್ಥಿಗಳು ಕೇಳುವುದು ಸಹಜ. ಆದರೆ ಅಬ್ರಾಹಂ ನನಗೆ ಮತ ನೀಡದಿದ್ದರೂ ಓಕೆ. ಖೇಣಿ ಅವರಂತಹ ಭ್ರಷ್ಟರಿಗೆ ಮತ ನೀಡಬೇಡಿ ಎಂದು ಜನರಿಗೆ ಮನವಿ ಮಾಡಲಿದ್ದಾರೆ.
ಅಶೋಕ್ ಖೇಣಿ ಅಕ್ರಮವಾಗಿ ರೈತರ ಜಮೀನನ್ನು ಕಡಿಮೆ ಬೆಲೆಗೆ ಕೊಂಡುಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ನೈಸ್ ಯೋಜನೆಯಲ್ಲಿ ಅವ್ಯಹಾರ ನಡೆದಿದೆ. ಎಂದು ಅಹ್ರಾಹಂ ಲೋಕಾಯುಕ್ತದಿಂದ ಹಿಡಿದು ಸುಪ್ರೀಂ ಕೋರ್ಟ್ ವರೆಗೆ ಖೇಣಿ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.
ಉಭಯರ ನಡುವಿನ ಕಾನೂನು ಸಮರ ನ್ಯಾಯಾಲದಲ್ಲಿ ಅಂತ್ಯ ಕಾಣುವುದು ವಿಳಂಬವಾಗಬಹುದು. ಆದರೆ, ಜನತಾ ನ್ಯಾಯಾಲಯದಲ್ಲಿ ತೀರ್ಪು ತಕ್ಷಣ ಲಭಿಸಲಿದೆ. ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಯಾರಿಗೆ ನ್ಯಾಯ ದೊರಕುತ್ತದೆ ಎಂಬುದು, ಮೇ 8ರಂದು ಬಹಿರಂಗಗೊಳ್ಳಲಿದೆ.
ಕ್ಷೇತ್ರದಲ್ಲಿ ಎದುರಾಳಿಗಳಾರು
ಜೆಡಿಎಸ್ - ಬಂಡೆಪ್ಪ ಖಾಶೆಂಪುರ
ಕೆಜೆಪಿ - ಡಾ.ಶೈಲೇಂದ್ರ ಬೆಲ್ದಾಳೆ
ಕಾಂಗ್ರೆಸ್ - ಮೀನಾಕ್ಷಿ ಸಂಗ್ರಾಮ
ಬಿಜೆಪಿ - ಬಸವರಾಜ್ ಪಾಟೀಲ್ ಅಟ್ಟೂರು
ಬಿಎಸ್ ಪಿ - ಅಬ್ದುಲ್ ಮನ್ನಾನ್
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications