ಸ್ಪೋಟದ ಹಿಂದೆ ಆರ್ಎಸ್ಎಸ್ ಕೈವಾಡ : ಎಚ್ ವಿಶ್ವನಾಥ್
ಬೆಂಗಳೂರು, ಏ 17: ಚುನಾವಣೆಯ ಹೊಸ್ತಿಲಲ್ಲಿ ನಗರದಲ್ಲಿ ನಡೆದ ಬಾಂಬ್ ಸ್ಫೋಟ ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಸ್ಪೋಟದ ಹಿಂದೆ ಸಂಘ ಪರಿವಾರದ ಕೈವಾಡದ ಶಂಕೆ ಮೂಡುತ್ತಿದೆ ಎಂದು ಮೈಸೂರು ಸಂಸದ ಎಚ್ ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಮಾಲೆಗಾಂವ್ ಸ್ಫೋಟದ ಮಾದರಿಯಲ್ಲೇ ಈ ಸ್ಫೋಟ ನಡೆದಿದೆ, ಅದೂ ಮಲ್ಲೇಶ್ವರಂ ಬಿಜೆಪಿ ಕಚೇರಿಯ ಸಮೀಪದಲ್ಲೇ ನಡೆದಿದ್ದು ಬಾಂಬ್ ಸ್ಪೋಟದ ಹಿಂದೆ RSS ಕೈವಾಡ ತಳ್ಳಿ ಹಾಕುವಂತಿಲ್ಲ ಎಂದು ವಿಶ್ವನಾಥ್ ಆರೋಪಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿಯೇ ಅಂದರೆ ಮೇ ಐದನೇ ತಾರೀಕಿನೊಳಗೆ ಈ ಕೃತ್ಯದ ತನಿಖೆ ಪೂರ್ಣಗೊಳಿಸಿ ರಾಜ್ಯದ ಜನತೆಗೆ ವಸ್ತುಸ್ಥಿತಿಯ ಸತ್ಯಾಸತ್ಯತೆಯನ್ನು ತಿಳಿಸಿ ಎಂದು ರಾಜ್ಯ ಸರ್ಕಾರಕ್ಕೆ ವಿಶ್ವನಾಥ್ ಸವಾಲೆಸೆದಿದ್ದಾರೆ.
ನಿಷ್ಪಕ್ಷಪಾತ ತನಿಖೆ ನಡೆದು ಉಗ್ರ ಚಟುವಟಿಕೆಗಳಿಗೆ ಪರೋಕ್ಷ ಸಹಕಾರ ನೀಡುತ್ತಿರುವ ಹಿಂದೂ ಮುಖವಾಡ ಧರಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಜ ಬಣ್ಣ ಬಯಲಾಗಲಿ ಎಂದು ವಿಶ್ವನಾಥ್ ಕಟು ಟೀಕಾಪ್ರಹಾರ ಮಾಡಿದ್ದಾರೆ.

ವಿಶ್ವನಾಥ್ ಟೀಕಾಪ್ರಹಾರ
ಬಿಜೆಪಿ ಸರಕಾರ ಜನರ ಮನಸಿನಿಂದ ಮಾಸಿ ಹೋಗಿದೆ. ಹೇಗಾದರೂ ಅಧಿಕಾರಲ್ಲಿ ಮುಂದುವರಿಯ ಬೇಕೆಂದು ಬಿಜೆಪಿ ತನ್ನ ಪರಿವಾರದ ಸಂಘಟನೆಗಳ ಇಂಥಹ ಕೃತ್ಯಗಳಿಗೆ ಮುಂದಾದರೆ ಅಶ್ಚರ್ಯ ಪಡಬೇಕಾಗಿಲ್ಲ.

ವಿಶ್ವನಾಥ್ ಟೀಕಾಪ್ರಹಾರ
ಅಮಾಯಕರ ಭಾವನೆ ಕೆರಳಿಸಿ ಅದರ ಜೊತೆ ಚೆಲ್ಲಾಟ ನಡೆಸಿ ಅನುಕಂಪದಿಂದ ಮತ ಪಡೆಯ ಬೇಕೆನ್ನುವ ಕೀಳು ರಾಜಕೀಯಕ್ಕೆ ಇಳಿಯಬೇಡಿ ಎಂದು ವಿಶ್ವನಾಥ್ ಬಿಜೆಪಿ ಸರಕಾರಕ್ಕೆ ಕಿವಿಮಾತನ್ನು ಹೇಳಿದ್ದಾರೆ.

RSS Vs ಕಾಂಗ್ರೆಸ್ : ಕೈ ನಾಯಕರ ಹೇಳಿಕೆಗಳ ಸ್ಯಾಂಪಲ್
02.11.10: ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಹಾಗೂ ಅದರ ಅಂಗ ಸಂಸ್ಥೆಗಳು ಭಯೋತ್ಪಾದನಾ ಕೃತ್ಯದಲ್ಲಿ ಭಾಗಿಯಾಗಿವೆ ಎಂದು ಅಂದಿನ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಆರೋಪಿಸಿದ್ದರು.

RSS Vs ಕಾಂಗ್ರೆಸ್ : ಕೈ ನಾಯಕರ ಹೇಳಿಕೆಗಳ ಸ್ಯಾಂಪಲ್
20.01.13: ಬಿಜೆಪಿ ಮತ್ತು ಆರೆಸ್ಸೆಸ್ ಹಿಂದೂ ಉಗ್ರವಾದಿಗಳ ತರಬೇತಿ ಕೇಂದ್ರಗಳಾಗಿದ್ದು, ವ್ಯವಸ್ಥಿತವಾಗಿ 'ಕೇಸರಿ ಭಯೋತ್ಪಾದನೆ' ಹರಡಲಾಗುತ್ತಿದೆ ಎಂದು ಕೇಂದ್ರ ಗೃಹಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದರು.

RSS Vs ಕಾಂಗ್ರೆಸ್ : ಕೈ ನಾಯಕರ ಹೇಳಿಕೆಗಳ ಸ್ಯಾಂಪಲ್
08.01.13: ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ತಾಲಿಬಾನ್ ಸಂಘಟನೆ ನಡುವೆ ಅಂಥಾ ವ್ಯತ್ಯಾಸ ಏನಿಲ್ಲ. ಎರಡೂ ಕೂಡಾ ಮೂಲಭೂತವಾದಿಗಳ ಗುಂಪು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಕಿಡಿ ಹಾರಿಸಿದ್ದರು..
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications