ಸ್ಪೋಟದ ಹಿಂದೆ ಆರ್ಎಸ್ಎಸ್ ಕೈವಾಡ : ಎಚ್ ವಿಶ್ವನಾಥ್
ಬೆಂಗಳೂರು, ಏ 17: ಚುನಾವಣೆಯ ಹೊಸ್ತಿಲಲ್ಲಿ ನಗರದಲ್ಲಿ ನಡೆದ ಬಾಂಬ್ ಸ್ಫೋಟ ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಸ್ಪೋಟದ ಹಿಂದೆ ಸಂಘ ಪರಿವಾರದ ಕೈವಾಡದ ಶಂಕೆ ಮೂಡುತ್ತಿದೆ ಎಂದು ಮೈಸೂರು ಸಂಸದ ಎಚ್ ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಮಾಲೆಗಾಂವ್ ಸ್ಫೋಟದ ಮಾದರಿಯಲ್ಲೇ ಈ ಸ್ಫೋಟ ನಡೆದಿದೆ, ಅದೂ ಮಲ್ಲೇಶ್ವರಂ ಬಿಜೆಪಿ ಕಚೇರಿಯ ಸಮೀಪದಲ್ಲೇ ನಡೆದಿದ್ದು ಬಾಂಬ್ ಸ್ಪೋಟದ ಹಿಂದೆ RSS ಕೈವಾಡ ತಳ್ಳಿ ಹಾಕುವಂತಿಲ್ಲ ಎಂದು ವಿಶ್ವನಾಥ್ ಆರೋಪಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿಯೇ ಅಂದರೆ ಮೇ ಐದನೇ ತಾರೀಕಿನೊಳಗೆ ಈ ಕೃತ್ಯದ ತನಿಖೆ ಪೂರ್ಣಗೊಳಿಸಿ ರಾಜ್ಯದ ಜನತೆಗೆ ವಸ್ತುಸ್ಥಿತಿಯ ಸತ್ಯಾಸತ್ಯತೆಯನ್ನು ತಿಳಿಸಿ ಎಂದು ರಾಜ್ಯ ಸರ್ಕಾರಕ್ಕೆ ವಿಶ್ವನಾಥ್ ಸವಾಲೆಸೆದಿದ್ದಾರೆ.
ನಿಷ್ಪಕ್ಷಪಾತ ತನಿಖೆ ನಡೆದು ಉಗ್ರ ಚಟುವಟಿಕೆಗಳಿಗೆ ಪರೋಕ್ಷ ಸಹಕಾರ ನೀಡುತ್ತಿರುವ ಹಿಂದೂ ಮುಖವಾಡ ಧರಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಜ ಬಣ್ಣ ಬಯಲಾಗಲಿ ಎಂದು ವಿಶ್ವನಾಥ್ ಕಟು ಟೀಕಾಪ್ರಹಾರ ಮಾಡಿದ್ದಾರೆ.

ವಿಶ್ವನಾಥ್ ಟೀಕಾಪ್ರಹಾರ
ಬಿಜೆಪಿ ಸರಕಾರ ಜನರ ಮನಸಿನಿಂದ ಮಾಸಿ ಹೋಗಿದೆ. ಹೇಗಾದರೂ ಅಧಿಕಾರಲ್ಲಿ ಮುಂದುವರಿಯ ಬೇಕೆಂದು ಬಿಜೆಪಿ ತನ್ನ ಪರಿವಾರದ ಸಂಘಟನೆಗಳ ಇಂಥಹ ಕೃತ್ಯಗಳಿಗೆ ಮುಂದಾದರೆ ಅಶ್ಚರ್ಯ ಪಡಬೇಕಾಗಿಲ್ಲ.

ವಿಶ್ವನಾಥ್ ಟೀಕಾಪ್ರಹಾರ
ಅಮಾಯಕರ ಭಾವನೆ ಕೆರಳಿಸಿ ಅದರ ಜೊತೆ ಚೆಲ್ಲಾಟ ನಡೆಸಿ ಅನುಕಂಪದಿಂದ ಮತ ಪಡೆಯ ಬೇಕೆನ್ನುವ ಕೀಳು ರಾಜಕೀಯಕ್ಕೆ ಇಳಿಯಬೇಡಿ ಎಂದು ವಿಶ್ವನಾಥ್ ಬಿಜೆಪಿ ಸರಕಾರಕ್ಕೆ ಕಿವಿಮಾತನ್ನು ಹೇಳಿದ್ದಾರೆ.

RSS Vs ಕಾಂಗ್ರೆಸ್ : ಕೈ ನಾಯಕರ ಹೇಳಿಕೆಗಳ ಸ್ಯಾಂಪಲ್
02.11.10: ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಹಾಗೂ ಅದರ ಅಂಗ ಸಂಸ್ಥೆಗಳು ಭಯೋತ್ಪಾದನಾ ಕೃತ್ಯದಲ್ಲಿ ಭಾಗಿಯಾಗಿವೆ ಎಂದು ಅಂದಿನ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಆರೋಪಿಸಿದ್ದರು.

RSS Vs ಕಾಂಗ್ರೆಸ್ : ಕೈ ನಾಯಕರ ಹೇಳಿಕೆಗಳ ಸ್ಯಾಂಪಲ್
20.01.13: ಬಿಜೆಪಿ ಮತ್ತು ಆರೆಸ್ಸೆಸ್ ಹಿಂದೂ ಉಗ್ರವಾದಿಗಳ ತರಬೇತಿ ಕೇಂದ್ರಗಳಾಗಿದ್ದು, ವ್ಯವಸ್ಥಿತವಾಗಿ 'ಕೇಸರಿ ಭಯೋತ್ಪಾದನೆ' ಹರಡಲಾಗುತ್ತಿದೆ ಎಂದು ಕೇಂದ್ರ ಗೃಹಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದರು.

RSS Vs ಕಾಂಗ್ರೆಸ್ : ಕೈ ನಾಯಕರ ಹೇಳಿಕೆಗಳ ಸ್ಯಾಂಪಲ್
08.01.13: ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ತಾಲಿಬಾನ್ ಸಂಘಟನೆ ನಡುವೆ ಅಂಥಾ ವ್ಯತ್ಯಾಸ ಏನಿಲ್ಲ. ಎರಡೂ ಕೂಡಾ ಮೂಲಭೂತವಾದಿಗಳ ಗುಂಪು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಕಿಡಿ ಹಾರಿಸಿದ್ದರು..
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications