ಸ್ಫೋಟ: ಗಾಯಾಳುಗಳ ಪೈಕಿ ರಕ್ಷಿತಾ ಸ್ಥಿತಿ ಗಂಭೀರ
ಬೆಂಗಳೂರು, ಏ.19: ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ನಿನ್ನೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡವರಿಗೆ ಸರ್ಕಾರದ ವತಿಯಿಂದಲೇ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಶೆಟ್ಟರ್ ಅವರು ಭರವಸೆ ನೀಡಿದ್ದಾರೆ.
ಗಾಯಗೊಂಡವರ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಗುರುವಾರ(ಏ.18) ಆಸ್ಪತ್ರೆಗಳಿಗೆ ಭೇಟಿ ನೀಡಿದರು. ಬಾಂಬ್ ಸ್ಪೋಟದಿಂದ ಗಾಯಗೊಂಡವರು ಪ್ರಾಣಾಪಯದಿಂದ ಪಾರಾಗಿದ್ದಾರೆ. ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಸ್ಫೋಟದಿಂದ ಜಖಂಗೊಂಡ ವಾಹನ, ಮನೆ ಹಾಗೂ ಅಂಗಡಿಗಳ ಮಾಲೀಕರಿಗೂ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದರು.
ರಕ್ಷಿತಾ ಸ್ಥಿತಿ ಗಂಭೀರ: ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿ ರಕ್ಷಿತಾ ಸ್ಥಿತಿ ಬಿಗಡಾಯಿಸಿದೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿರುವ , ಅರಮನೆ ನಗರ ಬಿಬಿಎಂಪಿ ಸದಸ್ಯ ಡಾ. ಶಿವಪ್ರಸಾದ್ ಅವರು ರಕ್ಷಿತಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಅವರ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿರುವುದರಿಂದ ಸ್ಥಿತಿ ಬಿಗಡಾಯಿಸಿದೆ ಎಂದಿದ್ದಾರೆ.
ಆದರೂ ಸೂಕ್ತ ಚಿಕಿತ್ಸೆ ನೀಡುವ ಮೂಲಕ ನೀರನ್ನು ಹೊರಗೆ ತೆಗೆಯಬಹುದಾಗಿದೆ. ರಕ್ಷಿತಾ ಪರಿಸ್ಥಿತಿ ಗಂಭೀರವಾಗಿದ್ದರೂ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡಿರುವ ಮತ್ತೊಬ್ಬ ವಿದ್ಯಾರ್ಥಿನಿ ಲಿಷಾಗೆ ಹೆಚ್ಚಿನ ಚಿಕಿತ್ಸೆಗಾಗಿ ಕೆ.ಸಿ.ಜನರಲ್ ಆಸ್ಪತ್ರೆಯಿಂದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಮತ್ತಿಬ್ಬರ ಕಿವಿಯ ತಮಟೆಗೆ ಹಾನಿಯಾಗಿದ್ದು, ಸದ್ಯ ಅವರಿಗೆ ಕೇಳಿಸುತ್ತಿಲ್ಲ. ಹಂತ ಹಂತವಾಗಿ ಚಿಕಿತ್ಸೆ ನೀಡುವ ಮೂಲಕ ಕಿವಿಯ ಸಮಸ್ಯೆಯಿಂದ ಗುಣಮುಖವಾಗಲಿದ್ದಾರೆ. ಈ ಸಂಬಂಧ ಅವರಿಗೆ ಸೂಕ್ತ ಚಿಕತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಇನ್ನುಳಿದ ಗಾಯಾಳುಗಳು ಚೇತರಿಸಿಕೊಂಡಿದ್ದಾರೆಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಕೆಸಿ ಜನರಲ್ ಆಸ್ಪತ್ರೆ, ವಿಠಲ್ ಮಲ್ಯ ಹಾಗೂ ನಿಮ್ಹಾನ್ಸ್ ನಲ್ಲಿ ದಾಖಲಾಗಿರುವ ಎಲ್ಲಾ ಸ್ಫೋಟ ಸಂತ್ರಸ್ಥ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಭರವಸೆಯನ್ನು ಬಿಜೆಪಿ ನಾಯಕರು ನೀಡಿದ್ದಾರೆ.
ಗಾಯಗೊಂಡವರು: ಮೇಲ್ನೊಟಕ್ಕೆ ಕೆಎಸ್ ಆರ್ಪಿ ಪೊಲೀಸರೇ ಟಾರ್ಗೆಟ್ ಎನ್ನಬಹುದು ಸುಮಾರು 8 ಜನ ಪೊಲೀಸರು ಸೇರಿದಂತೆ 19 ಮಂದಿ ಗಾಯಗೊಂಡಿದ್ದಾರೆ. ರಾಮೇಗೌಡ, ವೆಂಕಟಪ್ಪ, ವಿಶ್ವೇಶ್ವರಯ್ಯ, ನಾಗರಾಜ್, ನಾಗೇಶ್ವರ್, ರಂಜಿತಾ, ಜೇಡ್ರಪ್ಪ ಗಾಯಗೊಂಡಿರುವ ಪೊಲೀಸರು. ಗಾಯಗೊಂಡವರಲ್ಲಿ ಮೂವರಿಗೆ ಕಿವಿ ಕೇಳಿಸುತ್ತಿಲ್ಲ. ನಿಷಾ ಹಾಗೂ ರಕ್ಷಿತಾ ಎಂಬ ವಿದ್ಯಾರ್ಥಿನಿಯರು ಸಿಇಟಿ ಪರೀಕ್ಷೆ ಟ್ಯೂಷನ್ ಗೆ ತೆರಳುತ್ತಿದ್ದವರು ಸ್ಫೋಟಕ್ಕೆ ಸಿಲುಕಿದ್ದಾರೆ. ಉಳಿದಂತೆ ಬಾಲಕೃಷ್ಣ, ಸದೀನ್ ಷಾ ಎಂಬುವರು ಕೂಡಾ ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ













Click it and Unblock the Notifications