ಲೈಂಗಿಕ ಕಿರುಕುಳ : ಆಕಾಶವಾಣಿ ಅಧಿಕಾರಿ ಸಸ್ಪೆಂಡ್

ರೇಡಿಯೋ ಜಾಕಿಗಳಿಗೆ ಸತತವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಸಾರ ಭಾರತಿ ಆಧಿಕಾರಿಗಳು ಹೇಳಿದ್ದಾರೆ. ಆಕಾಶವಾಣಿಯ ಉಪ ಮಹಾ ನಿರ್ದೇಶಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಹಾಗೂ ಇನ್ನೊಬ್ಬ ಉನ್ನತ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ರೇಡಿಯೋ ಜಾಕಿಗಳು ಆಕಾಶವಾಣಿ ವೃತ್ತಿಪರರ ಒಕ್ಕೂಟ(AIRBPA)ಗೆ ಲಿಖಿತ ದೂರು ನೀಡಿದ್ದರು.
ಈ ಬಗ್ಗೆ ತನಿಖೆ ನಡೆಸಿದ ಪ್ರಸಾರ ಭಾರತಿಯ ನಿವೃತ್ತ ಬ್ರಿಗ್ರೇಡಿಯರ್ ವಿಎ ಎಂ ಹುಸೇನ್ ಅವರು ಪ್ರಸಾರ ಭಾರತಿ ಸಿಇಒ ಜವಹಾರ್ ಸಿರ್ಕಾರ್ ಅವರ ಅನುಮತಿ ಪಡೆದ ನಂತರ ಅಮಾನತು ಆದೇಶ ಹೊರಡಿಸಿದ್ದಾರೆ.
ಇದು ತುಂಬಾ ಸೂಕ್ಷ್ಮವಾದ ವಿಷಯ. ಸಾರ್ವಜನಿಕ ವಲಯದ ಸಂಸ್ಥೆಯಲ್ಲಿ ಈ ರೀತಿ ನಡವಳಿಕೆ ಖಂಡನೀಯ. ಈ ಕೃತ್ಯ ಎಸಗಿದವರು ಹಿರಿಯ ಅಧಿಕಾರಿಗಳು ಎಂಬುದು ಇನ್ನೂ ಶೋಚನೀಯ ಸಂಗತಿ. ತೆರಿಗೆ ಕಟ್ಟಿ ನಮ್ಮನ್ನು ಬೆಳೆಸುತ್ತಿರುವ ಸಾರ್ವಜನಿಕರಿಗೆ ನಾವು ಉತ್ತರಿಸಬೇಕಿದೆ ಎಂದು ಹುಸೇನ್ ಹೇಳಿದ್ದಾರೆ.
ತಕ್ಷಣದ ಅಮಾನತು ಆದೇಶದ ಜೊತೆಗೆ ಅವರ ಮುಂದಿನ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ಸೂಚಿಸಲಾಗಿದೆ. ತಾತ್ಕಾಲಿಕ ಹುದ್ದೆಗಾಗಿ ನೇಮಕವಾಗಿರುವ ಮಹಿಳಾ ಆರ್ ಜೆಗಳನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.
ಅನಗತ್ಯವಾಗಿ ಹತ್ತಿರ ಬರುವುದು, ಮೈ ಮುಟ್ಟುವುದು ರಾತ್ರಿ ಪಾಳಯದಲ್ಲಿ ಕೆಲಸ ನಿರ್ವಹಿಸುವಂತೆ ಒತ್ತಡ ಹೇರುವುದು ಇವೆ ಮುಂತಾದ ತಂತ್ರಗಳನ್ನು ಬಳಸಿದ ಅಧಿಕಾರಿಗಳಿಗೆ ಪ್ರಸಾರ ಭಾರತಿ ಛೀಮಾರಿ ಹಾಕಿದೆ. ಇಷ್ಟೆಲ್ಲ ನಡೆದರೂ ಏನೂ ಗೊತ್ತಿಲ್ಲದ್ದಂತೆ ಇದ್ದ ದೆಹಲಿ ಆಕಾಶವಾಣಿ ಎಫ್ ಎಂ ಕೇಂದ್ರದ ಮುಖ್ಯಸ್ಥರಿಗೆ ನೋಟಿಸ್ ಜಾರಿಯಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications