Get Updates
Get notified of breaking news, exclusive insights, and must-see stories!

ಏಕ ಪಕ್ಷ ಅಧಿಕಾರ ಪಡೆಯಲ್ಲ : ಕೋಡಿ ಶ್ರೀಗಳು

Kodimutt Seer
ಮಂಗಳೂರು, ಏ. 18 : ಚುನಾವಣೆ ನಡೆದರೂ ರಾಜ್ಯದಲ್ಲಿ ಏಕ ಪಕ್ಷ ಅಧಿಕಾರ ಹಿಡಿಯುವುದಿಲ್ಲ. ನೂತನ ಸರ್ಕಾರ ಅಲ್ಪಕಾಲದಲ್ಲಿ ಬಿದ್ದು ಹೋಗಿ ಮರು ಚುನಾವಣೆ ನಡೆಸುವ ಸಾಧ್ಯತೆ ಇದೆ. ರಾಜ್ಯದಲ್ಲಿ 2020ರ ವರೆಗೆ ರಾಜಕೀಯ ಅಸ್ಥಿರತೆ ಮುಂದುವರಿಯಲಿದೆ ಎಂದು ಕೋಡಿಮಠ ಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಬುಧವಾರ ಮಂಗಳೂರಿನ ಸುರತ್ಕಲ್‌ ಭೇಟಿ ನೀಡಿದ್ದ ಸ್ವಾಮೀಜಿ ಮಾಧ್ಯಮಗಳೊಂದಿಗೆ ಮಾತನಾಡಿದರು, ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬುದನ್ನು ಹೇಳುವುದಿಲ್ಲ. ಆದರೆ, ಈ ಬಾರಿ ಅಚ್ಚರಿ ಚುನಾವಣಾ ಫಲಿತಾಂಶ ಬರಲಿದೆ. ಸಿದ್ದರಾಮಯ್ಯ, ಪರಮೇಶ್ವರ್, ಜಗದೀಶ್ ಶೆಟ್ಟರ್ ಅಥವಾ ಕುಮಾರಸ್ವಾಮಿ ಮುಖ್ಯಮಂತ್ರಿ ಹುದ್ದೆ ಪಡೆಯಲಿದ್ದಾರೆ ಎಂದು ಹೇಳಿದರು.

ಸರ್ಕಾರ ರಚನೆಯಲ್ಲಿ ಸಾಕಷ್ಟು ಗೊಂದಲಗಳು ಉಂಟಾಗಲಿವೆ. ಇಂತಹ ಗೊಂದಲದಿಂದ ರಚನೆಯಾದ ಸರ್ಕಾರ ಕೆಲವವೇ ದಿನಗಳಲ್ಲಿ ಬಿದ್ದು ಹೋಗಲಿದೆ. ರಾಜ್ಯದಲ್ಲಿ ಈ ಬಾರಿ ಸಮ್ಮಿಶ್ರ ಸರಕಾರ ರಚಿಸುವುದು ಸುಲಭವಾಗುವುದಿಲ್ಲ ಎಂದು ಸ್ವಾಮೀಜಿ ಹೇಳಿದರು.

ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ಮತ್ತೆ ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆಯೂ ನಡೆಯುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಜಾತಿ ಜಾತಿಗಳ ನಡುವಿನ ವೈಷಮ್ಯ ಹೆಚ್ಚಾಗಿದ್ದು, ಇದು ಚುನಾವಣೆ ಮೇಲೆಯೂ ಪ್ರಭಾವ ಬೀರಲಿದೆ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.

ಸ್ವಾಮೀಜಿಯ ಭವಿಷ್ಯದ ಅಂಶಗಳು

* ಹಣ, ಆಮಿಷಗಳಿಗೆ ಬಲಿಯಾದ ಮತದಾರ ಸ್ಪಷ್ಟ ತೀರ್ಪು ನೀಡಲು ವಿಫಲನಾಗುತ್ತಾನೆ
* ವಿಜಯ ನಾಮ ಸಂವತ್ಸರದಲ್ಲಿ ಮಳೆ ಬೆಳೆ ಚೆನ್ನಾಗಿ ಆಗಲಿದೆ
* ದಕ್ಷಿಣ ಕರಾವಳಿ ತೀರಗಳು ಮತ್ತು ಮಲೆನಾಡು ಹೆಚ್ಚು ಪ್ರಾಕೃತಿಕ ವಿಕೋಪಗಳಿಗೆ ತುತ್ತಾಗಲಿವೆ
* ಈ ಸಂವತ್ಸರದಲ್ಲಿ ಹೆಚ್ಚು ಅನಾಹುತಗಳು, ಅಪಘಾತಗಳು, ಸಾವು ನೋವುಗಳು ಸಂಭವಿಸಲಿವೆ

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+