ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರೊಡ್ಯೂಸರ್, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಬಂಧನ

By Rajendra
|
Google Oneindia Kannada News

Munirathna arrest
ಕನ್ನಡ ಚಲನಚಿತ್ರಗಳ ನಿರ್ಮಾಪಕ ಹಾಗೂ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬುಧವಾರ (ಏ.17) ಮುನಿರತ್ನ ಅವರು ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಅಧಿಕಾರಿ ಜ್ಯೋತಿ ಅವರಿಗೆ ಧಮ್ಕಿ ಹಾಕಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಮುನಿರತ್ನ ಅವರು ಬುಧವಾರ ನಾಮಪತ್ರ ಸಲ್ಲಿಸಬೇಕಾದರೆ ಐದಕ್ಕಿಂತಲೂ ಹೆಚ್ಚು ಮಂದಿಯನ್ನು ತಮ್ಮ ಜೊತೆ ಕರೆದೊಯ್ದಿದ್ದರು. ಹಾಗೂ ಅವರು ಬಳಸಿದ್ದ ವಾಹನಕ್ಕೆ ಚುನಾವಣಾ ಆಯೋಗ ಪರವಾನಗಿ ನೀಡಿರಲಿಲ್ಲ ಎನ್ನಲಾಗಿದೆ.

ಇದನ್ನು ಪ್ರಶ್ನಿಸಿದ ಚುನಾವಣಾ ಅಧಿಕಾರಿ ಜ್ಯೋತಿ ಅವರಿಗೆ ಅವರು ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಮುನಿರತ್ನ ಅವರನ್ನು ರಾಜರಾಜೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ.

ಚುನಾವಣಾ ಅಧಿಕಾರಿಗೆ ಬೆದರಿಕೆ ಹಾಕಿರುವ ಆರೋಪ ಗಂಭೀರವಾಗಿದ್ದು ಅವರ ಮೇಲೆ ಆಯೋಗ ಏನು ಕ್ರಮಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕು. ಕಾಂಗ್ರೆಸ್ ಟಿಕೆಟ್ ಗಿಟ್ಟಿಸಲು ಮುನಿರತ್ನ ಅವರು ಬಹಳಷ್ಟು ಶ್ರಮಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Rajarajeshwari Nagar constituency congress candidate Munirathna arrested by police on Thursday (18th April). Returning office Jyothi alleges that, While he files nomination papers on Wednesday he treating to her. So she complaints against Munirathna to Chief Election Officer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X