ತಾಕತ್ತಿದ್ರೆ ಸದಾನಂದ ಗೌಡ ನನ್ನ ಎದುರು ನಿಲ್ಲಲಿ

ಬುಧವಾರ(ಏ.17)ಕಾಂಗ್ರೆಸ್ ಪಕ್ಷದ ಬಿ ಫಾರಂ ಪಡೆದು ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಪುತ್ತೂರಿನ ಜೈನ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯ ಕರ್ತರ ಸಭೆಯಲ್ಲಿ ಶಕುಂತಳಾ ಶೆಟ್ಟಿ ಮಾತನಾಡಿದರು.
ಭ್ರಷ್ಟತನ, ಚುಂಬನ, ನರ್ತನ, ಆಲಿಂಗನ ವೀಕ್ಷಣೆಯಲ್ಲಿ ತಲ್ಲೀನರಾಗಿರುವ ಬಿಜೆಪಿ ಪಕ್ಷದ ನಾಯಕರಿಗೆ ನಮ್ಮ ಬಗ್ಗೆ ಆರೋಪ ಮಾಡುವ ನೈತಿಕ ಹಕ್ಕಿಲ್ಲ. ಆರೆಸ್ಸೆಸ್ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಬೆಳೆದ ನಾಯಕರು ಇಂದು ಪಕ್ಷದ ಅಕ್ರಮಗಳನ್ನು ಕಂಡು ಮೌನವಾಗಿದ್ದಾರೆ.
ನನ್ನ ಸ್ವಾಭಿಮಾನ ಹಾಗೂ ನೈತಿಕತೆಯನ್ನು ಬೆಂಬಲಿಸಿ ಕಾಂಗ್ರೆಸ್ ನನಗೆ ಅವಕಾಶ ನೀಡಿದೆ. ಬಿಜೆಪಿಯಲ್ಲಿ ಕಳೆದು ಕೊಂಡಿರುವುದನ್ನು ಪಡೆದುಕೊಳ್ಳುವ ಉದ್ದೇಶದಿಂದ ಸ್ಪರ್ಧಾ ಕಣದಲ್ಲಿದ್ದೇನೆ. ಡಿ.ವಿ. ಸದಾನಂದ ಗೌಡರು ತನ್ನ ವಿರುದ್ಧ ಇತರ ಅಭ್ಯರ್ಥಿಯನ್ನು ನಿಲ್ಲಿಸಿ ಬಲಿ ಪಶು ಮಾಡಿದ್ದಾರೆ. ತಾಕತ್ತಿದ್ದರೆ ಅವರು ತನ್ನೆದುರು ಸ್ಪರ್ಧಿಸಿ ನೋಡಬೇಕಿತ್ತು ಎಂದು ಸವಾಲು ಹಾಕಿದರು.
ಕಾಂಗ್ರೆಸ್ ಪಕ್ಷ ತನಗೆ ಅವಕಾಶ ಮಾಡಿ ಕೊಡುವ ಮೂಲಕ ತತ್ವ, ನ್ಯಾಯ ಮತ್ತು ಧರ್ಮಕ್ಕೆ ಬೆಲೆ ನೀಡಿದೆ. ಆದರೆ ಇಲ್ಲಿ ಕಾಂಗ್ರೆಸ್ ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಗೆಲ್ಲುವ ಬಗ್ಗೆ ಅತಿಯಾದ ಆತ್ಮವಿಶ್ವಾಸ ಬೇಡ. ಪ್ರಯತ್ನ ಮಾಡಿ ನಾವು ಗೆಲುವು ಸಾಧಿಸಬೇಕಾಗಿದೆ ಎಂದ ಶೆಟ್ಟಿ ಅವರು ಹೇಳಿದರು.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಶಕುಂತಳಾ ಶೆಟ್ಟಿ ಅವರೇ ನಮ್ಮೆಲ್ಲರ ಸರ್ವ ಸಮ್ಮತ ನಾಯಕಿಯಾಗಿದ್ದಾರೆ. ನಮ್ಮ ಅಭ್ಯರ್ಥಿಯಾದ ಶಕುಂತಳಾ ಶೆಟ್ಟಿರನ್ನು ಗೆಲ್ಲಿಸುವ ಮೂಲಕ ಇಲ್ಲಿ ಕಾಂಗ್ರೆಸ್ ಗೆಲ್ಲಿಸುವುದೇ ನಮ್ಮ ಹೋರಾಟ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಇದೆ ಸಂದರ್ಭದಲ್ಲಿ ಹೇಳಿದರು.
ಶಕುಂತಳಾ ಶೆಟ್ಟಿ ಅವರು 2004ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಯಭೇರಿ ಬಾರಿಸಿದ್ದರು. 2008ರಲ್ಲಿ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿತ್ತು. ರಾಜಕೀಯ ಗುರು ಉರಿಮಜಲು ರಾಮ್ ಭಟ್ ಸೇರಿದಂತೆ ಹಲವಾರು ಮುಖಂಡರು ಡಿವಿ ಸದಾನಂದ ಗೌಡ ಸೇರಿದಂತೆ ಹಿರಿಯ ನಾಯಕರ ಮೇಲೆ ಮುನಿಸುಗೊಂಡಿದ್ದರು. ಆದರೆ, ಬಂಡಾಯ ಅಭ್ಯರ್ಥಿಯಾಗಿ ನಿಂತಿದ್ದ ಶಕುಂತಳಾ ಅವರು ಮಲ್ಲಿಕಾ ಪ್ರಸಾದ್ ವಿರುದ್ಧ ಸೋಲು ಅನುಭವಿಸಿದ್ದರು.
ನಂತರ ಶಕುಂತಳಾ ಶೆಟ್ಟಿ ಅವರಿಗೆ ಕೆಜೆಪಿ ಹಾಗೂ ಜೆಡಿಎಸ್ ಆಫರ್ ಬಂದಿತ್ತು. ಆದರೆ, ಕೊನೆಗೆ ಕಾಂಗ್ರೆಸ್ ನಿಂದ ಬಿ ಫಾರಂ ಪಡೆದು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯ ಅಧಿಕೃತ ಅಭ್ಯರ್ಥಿ ಸಂಜೀವ ಎಂ ಅವರು ಇವರಿಗೆ ಪ್ರಬಲ ಸ್ಪರ್ಧಿಯಾಗಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications