ಮಲ್ಲೇಶ್ವರಂ ಸ್ಪೋಟ ಇಬ್ಬರು ಶಂಕಿತರ ಬಂಧನ

ಮಲ್ಲೇಶ್ವರಂನಲ್ಲಿ ಬಾಂಬ್ ಸ್ಪೋಟಗೊಂಡ ಬೈಕ್ ಅನ್ನು ಬಂಧಿತ ಮುರುಗನ್ ಮತ್ತು ಅನ್ವರ್ ಪಾಷ ಎಂಬುವವರಿಂದ ಖರೀದಿಸಲಾಗಿತ್ತು ಎಂದು ಪೊಲೀಸರು ಶಂಕಿಸಿದ್ದಾರೆ. ಇವರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಗಿದೆ.
ಸ್ಫೋಟಕ್ಕೆ ಬಳಸಿದ ಸುಜುಕಿ ಬೈಕ್ ಅನ್ನು ಬಂಧಿತರು ಯಾರಿಗೆ ಮಾರಾಟ ಮಾಡಿದ್ದರು ಎಂದು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಬೈಕ್ ತಮಿಳುನಾಡಿಗೆ ಸೇರಿದ್ದು ಎಂಬ ಮಾಹಿತಿಯ ಮೇರೆಗೆ ಅಲ್ಲಿಗೆ ತೆರಳಿದ್ದ ಪೊಲೀಸರ ಒಂದು ತಂಡ ಇಬ್ಬರನ್ನು ವಶಕ್ಕೆ ಪಡೆದಿದೆ.
ಪರಿಹಾರ : ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರಿಗೆ ಸರ್ಕಾರ ಒಂದು ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಗೃಹ ಸಚಿವ ಆರ್.ಅಶೋಕ ಗುರುವಾರ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಉನ್ನತಮಟ್ಟದ ಸಭೆ ನಡೆಸಿದ ಬಳಿಕ ಗಾಯಾಳುಗಳಿಗೆ ಪರಿಹಾರ ಪ್ರಕಟಿಸಿದರು.
ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಲಾಲ್ ರುಕುಮ್ ಪಚಾವೋ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಬಿಪಿನ್ ಗೋಪಾಲಕೃಷ್ಣ, ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್, ಗುಪ್ತದಳದ ಐಜಿಪಿ ಗೋಪಾಲ್ ಬಿ.ಹೊಸೂರ್, ಜಂಟಿ ಪೊಲೀಸ್ ಆಯುಕ್ತ ಪ್ರಣವ್ ಮೊಹಾಂತಿ ಮುಂತಾದವರು ಭಾಗವಹಿಸಿದ್ದರು.
ಉಗ್ರರ ಕೈವಾಡ ಶಂಕೆ : ಬಾಂಬ್ ಸ್ಪೋಟ ಪ್ರಕರಣದಲ್ಲಿ ಉಗ್ರರ ಕೈವಾಡ ಇರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಈ ಬಗ್ಗೆ ತನಿಖೆ ನಡೆಸಲು ಬೆಂಗಳೂರು ಭಯೋತ್ಪಾದಕ ನಿಗ್ರಹ ದಳವೂ ಸೇರಿದಂತೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಎರಡು ಪ್ರತ್ಯೇಕ ತನಿಖಾ ತಂಡ ರಚಿಸಲಾಗಿದೆ ಎಂದು ಗೃಹ ಸಚಿವ ಅಶೋಕ್ ಹೇಳಿದ್ದಾರೆ.
ಪ್ರಕರಣದ ತನಿಖೆಗೆ ಕೇಂದ್ರೀಯ ತನಿಖಾ ದಳ (ಎನ್ಐಎ) ಸಹಕರಿಸುತ್ತಿದೆ. ಹೈದರಾಬಾದ್ನಲ್ಲಿ ನಡೆದ ಸ್ಫೋಟಕ್ಕೂ,ಈ ಪ್ರಕರಣಕ್ಕೂ ಸಾಕಷ್ಟು ಸಾಮ್ಯತೆ ಇದೆ. ಯಾವ ಸಂಘಟನೆ ಈ ಕೃತ್ಯ ಎಸಗಿದೆ ಎಂಬುದನ್ನು ತನಿಖೆ ನಂತರ ಬಹಿರಂಗ ಪಡಿಸಲಾಗುವುದು ಎಂದರು.
ಸಿದ್ದು, ವಿಶ್ವನಾಥ್ ಬಂಧಿಸಿ : ಬಾಂಬ್ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಕೈವಾಡವಿದೆ ಎಂದು ಹೇಳಿಕೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಸಂಸದ ಹೆಚ್.ವಿಶ್ವನಾಥ್ ಅವರನ್ನು ಬಂಧಿಸುವಂತೆ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಚುನಾವಣೆ ಲಾಭಕ್ಕಾಗಿ ಇಂತಹ ಹೇಳಿಕೆ ನೀಡುವ ಕಾಂಗ್ರೆಸ್ ನಾಯಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಮಲ್ಲೇಶ್ವರಂ ಸಹಜ ಸ್ಥಿತಿಗೆ : ಬಾಂಬ್ ಸ್ಪೋಟದ ನಂತರ ಜನರಿಲ್ಲದೇ ಖಾಲಿ ಹೊಡೆಯುತ್ತಿದ್ದ ಮಲ್ಲೇಶ್ವರಂನ ಸಂಪಿಗೆ ರಸ್ತೆ, ಮಂತ್ರಿ ಮಾಲ್ ಶ್ರುಕ್ರವಾರದಿಂದ ಸಹಜ ಸ್ಥಿತಿಗೆ ಮರಳಿದೆ. ಬಾಂಬ್ ಸ್ಪೋಟಿಸದ ಸ್ಥಳಕ್ಕೆ ಶುಕ್ರವಾರ ಸಹ ಹಲವಾರು ಜನ ಆಗಮಿಸಿ ಕುತೂಹಲದಿಂದ ವೀಕ್ಷಿಸಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications