ದೆಹಲಿ ಹಸುಳೆಯ ಮೇಲೆ ಭೀಕರ ಅತ್ಯಾಚಾರ
ನವದೆಹಲಿ, ಏ.19: ರಾಜಧಾನಿ ದೆಹಲಿ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ವಿಶ್ವದ ಗಮನ ಸೆಳೆದಿದೆ. ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ರೇಪ್ ಪ್ರಕರಣದ ನಂತರ ಐದು ವರ್ಷದ ಹಸುಳೆ ಮೇಲಿನ ಅತ್ಯಾಚಾರ ಪ್ರಕರಣ ಜಗತ್ತನ್ನು ಬೆಚ್ಚಿ ಬೀಳಿಸಿದೆ. ಇಲ್ಲಿನ ಗಾಂಧೀನಗರ ಪ್ರದೇಶದಲ್ಲಿ 5ರ ಹರೆಯದ ಬಾಲಕಿಯೊಬ್ಬಳನ್ನು ನೆರೆಮನೆಯಾತ ಎರಡು ದಿನಗಳ ಕಾಲ ನಿರಂತರವಾಗಿ ಲೈಂಗಿಕ ಶೋಷಣೆಗೊಳಪಡಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಬಾಲಕಿಯನ್ನು ಕಿಡ್ನಾಪ್ ಮಾಡಿ ಭೀಕರವಾಗಿ ಅತ್ಯಾಚಾರ ಎಸಗಲಾಗಿದೆ.
ಮಾಧ್ಯಮಗಳ ವರದಿಗಳ ಪ್ರಕಾರ ಈ ಬಾಲಕಿ ಏಪ್ರಿಲ್ 15ರಂದು ಅಪಹರಣಕ್ಕೊಳಗಾಗಿದ್ದಳು. ಈಕೆಯನ್ನು ಅಪಹರಿಸಿದ ನೆರೆಮನೆಯಾತ ಎರಡು ದಿನಗಳ ಕಾಲ ಆಕೆಯನ್ನು ಅತ್ಯಾಚಾರಕ್ಕೊಳಪಡಿಸಿದ್ದಾನೆ. ಸುಮಾರು ನಾಲ್ಕು ದಿನಗಳ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ 30ರ ಹರೆಯದ ವ್ಯಕ್ತಿ ಬಾಲಕಿಯ ಮನೆಯಿರುವ ಕಟ್ಟಡದ ಕೆಳ ಅಂತಸ್ತಿನಲ್ಲಿ ವಾಸವಾಗಿದ್ದು, ಇದೀಗ ತಲೆಮರೆಸಿಕೊಂಡಿದ್ದಾನೆ. ಈತನ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲು ಪೊಲೀಸರು ನಿರಾಕರಿಸಿದ್ದಾರೆ.
ಬುಧವಾರ ರಾತ್ರಿ ಪಕ್ಕದ ಮನೆಯಿಂದ ಬಾಲಕಿಯ ಅಳು ಕೇಳಿಸಿದ್ದು, ಬಾಲಕಿಯ ಹೆತ್ತವರು ಆಕೆಯನ್ನು ದುಷ್ಕರ್ಮಿಯ ಕೈಯಿಂದ ರಕ್ಷಿಸಿದ್ದಾರೆ. ಕೆಲವೊಂದು ಮೂಲಗಳ ಪ್ರಕಾರ ಅತ್ಯಾಚಾರಕ್ಕೊಳಾದ ಬಾಲಕಿಯ ಕತ್ತು ಸೀಳಿದ್ದು, ಆಕೆಯ ಗುಪ್ತಾಂಗಗಳನ್ನೂ ಗಾಯಗೊಳಿಸಲಾಗಿದೆ. ಮರ್ಮಾಂಗದೊಳಗೆ 200 ಎಂಎಲ್ ಬಾಟಲ್ , ಎರಡು ಮೂರು ಮೊಂಬತ್ತಿಗಳನ್ನು ತುರುಕಿ ಗಾಯಗೊಳಿಸಲಾಗಿದೆ. ನನ್ನ ವೃತ್ತಿ ಜೀವನದಲ್ಲಿ ಇಂಥ ಪ್ರಕರಣವನ್ನು ನೋಡಿಲ್ಲ ಎಂದು ಸ್ವಾಮಿ ದಯಾನಂದ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಆರ್ ಕೆ ಬನ್ಸಾಲ್ ಹೇಳಿದ್ದಾರೆ.
ತೀವ್ರ ಅಸ್ವಸ್ಥಳಾಗಿರುವ ಬಾಲಕಿಯನ್ನು ಶಹ್ದಾರಾದಲ್ಲಿರುವ ಸ್ವಾಮಿ ದಯಾನಂದ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಇಷ್ಟೇ ಅಲ್ಲದೆ ತುಟಿ, ಕೆನ್ನೆ ಹಾಗೂ ಕತ್ತಿನ ಮೇಲೆ ಬಲವಾದ ಗಾಯಗಳಾಗಿದೆ. ರಕ್ತದೊತ್ತಡ ಇಳಿಮುಖವಾಗಿದೆ. ಆದರೆ, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ 48 ಗಂಟೆಗಳ ನಿಗಾ ವಎಂದು ವೈದ್ಯರು ಹೇಳಿದ್ದಾರೆ.
ಈ ಪ್ರಕರಣದ ಬಗ್ಗೆ ಪೊಲೀಸರು ಕೇಸು ದಾಖಲಿಸಿದ್ದು, ತಲೆಮರೆಸಿರುವ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಾರ್ವಜನಿಕರು ಘಟನೆಯನ್ನು ಖಂಡಿಸಿ ತೀವ್ರವಾದ ಪ್ರತಿಭಟನೆ ನಡೆಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications