ನಿರಾಣಿ ವಿರುದ್ಧ ಅಭ್ಯರ್ಥಿಯನ್ನೇ ನಿಲ್ಲಿಸದ ಕೆಜೆಪಿ

ಬಾಲಗಕೋಟೆ ಜಿಲ್ಲೆಯ ಬೀಳಗಿ ಕ್ಷೇತ್ರದಿಂದ ಮುರುಗೇಶ್ ನಿರಾಣಿ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಕೆಜೆಪಿ ಹೋಗುವ ಶಾಸಕರ ಪಟ್ಟಿಯ ಮೊದಲ ಸ್ಥಾನದಲ್ಲಿದ್ದ ನಿರಾಣಿ ಕೊನೆಗೂ ತಮ್ಮ ನಿರ್ಧಾರ ಬದಲಿಸಿ, ಬಿಜೆಪಿಯಲ್ಲೇ ಉಳಿದಿದ್ದರು.
ಕೊನೆ ಕ್ಷಣದಲ್ಲಿ ತಮಗೆ ಕೈ ಕೊಟ್ಟ ಬೆಂಬಲಿಗನ ವಿರುದ್ಧ ಸಿಟ್ಟಾದಗೇ ಯಡಿಯೂರಪ್ಪ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆಯೇ ಎಂಬ ಅನುಮಾನ ಪ್ರಾರಂಭವಾಗಿದೆ. ಮುರುಗೇಶ್ ನಿರಾಣಿ ವಿರುದ್ಧ ಕೆಜೆಪಿ ಅಭ್ಯರ್ಥಿಯನ್ನೆ ಕಣಕ್ಕಳಿಸದೇ ಯಡಿಯೂರಪ್ಪ ಬೆಂಬಲಿಗೆ ಬೆನ್ನು ತಟ್ಟಿದ್ದಾರೆ.
ಕೆಜೆಪಿ ಅಂತಿಮ ಪಟ್ಟಿ ಬಿಡುಗಡೆಗೊಂಡಾಗ ಬೀಳಗಿ ಕ್ಷೇತ್ರದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಅಂಗಡಿ ಅವರನ್ನು ಘೋಷಿಸಿ ಬಿ ಫಾರ್ಮ್ ನೀಡಲಾಗಿತ್ತು. ಆದರೆ, ಅನಾರೋಗ್ಯದ ಕಾರಣ ಅಂಗಡಿ ಕೆ.ಎಲ್.ಇ ಆಸ್ಪತ್ರೆಗೆ ದಾಖಲಾದವರು ನಾಮಪತ್ರ ಸಲ್ಲಿಸಸಿಲ್ಲ. (ಕೆಜೆಪಿ ಅಂತಿಮ ಪಟ್ಟಿ)
ಬಾಗಲಕೋಟೆಯ ಕುತ್ಬುದ್ದೀನ್ ಖಾಜಿ ತಾವು ಕೆಜೆಪಿ ಅಭ್ಯರ್ಥಿ ಎಂದು ನಾಮಪತ್ರ ಸಲ್ಲಿಸಿದರು. ಆದರೆ. ಬಿ ಫಾರ್ಮ್ ಇಲ್ಲದ ಕಾರಣ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಇದರಿಂದಾಗಿ ಬೀಳಗಿ ಕ್ಷೇತ್ರದಲ್ಲಿ ಕೆಜೆಪಿ ಅಭ್ಯರ್ಥಿಗಳೇ ಇಲ್ಲದಂತಾಗಿದೆ.
ಮುರುಗೇಶ್ ನಿರಾಣಿ ಎದುರು ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಿ ಯಡಿಯೂರಪ್ಪ ಪಾಠ ಕಲಿಸುತ್ತಾರೆ ಎಂದು ವಿಶ್ಲೇಷಿಸಲಾಗಿತ್ತು ಕೊನೆಯ ಕ್ಷಣದಲ್ಲಿ ಅಭ್ಯರ್ಥಿಗಳೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ಕಟ್ಟಾ ಶಿಷ್ಯನ ವಿರುದ್ಧ ಅಭ್ಯರ್ಥಿಯನ್ನು ನಿಲ್ಲಿಸದೇ ಯಡಿಯೂರಪ್ಪ ಪರೋಕ್ಷವಾಗಿ ನಿರಾಣಿಗೆ ಬೆಂಬಲ ಸೂಚಿಸಿದ್ದಾರೆ.
ಚುನಾವಣೆ ಬಹಿಷ್ಕಾರ ಬೆದರಿಕೆ : ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಜನರು ಎಚ್ಚರಿಗೆ ನೀಡಿದ್ದಾರೆ. ಕಳೆದ 9 ತಿಂಗಳ ಹಿಂದೆ ತಾಲೂಕಿನ ಪಿ.ಎಂ ಬುದ್ನಿ ಗ್ರಾಮದ ನಿವಾಸಿ ಭೂಸೇನಾ ಯೋಧ ಅಶೋಕ ಹನಮಂತ ಬಡಕಲಿ (28)ಯನ್ನು ಕಾಣೆಯಾಗಿದ್ದಾನೆ.
ಆದರೆ, ಇದುವರೆಗೂ ಅವರ ಪತ್ತೆಯಾಗಿಲ್ಲ. ಯೋಧನನ್ನು ಹುಡುಕಿ ಕೊಡುವಂತೆ ತಹಸೀಲ್ದಾರ್, ಜಿಲ್ಲಾಧಿಕಾರಿ, ರಾಜ್ಯಪಾಲ ಮತ್ತು ರಾಷ್ಟ್ರಪತಿ ಅವರಿಗೆ ಸಲ್ಲಿಸಿದ ಮನವಿಗೆ ಯಾರು ಸ್ಪಂದಿಸಿಲ್ಲ ಆದ್ದರಿಂದ ಚುಣಾವಣೆ ಬಹಿಷ್ಕಾರ ಮಾಡುತ್ತೇವೆ ಎಂದು ತಾಲೂಕಿನ ಜನರು ತಹಸೀಲ್ದಾರಿಗೆ ಗುರುವಾರ ಪತ್ರದ ಮೂಲಕ ತಿಳಿಸಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications