ನಿರಾಣಿ ವಿರುದ್ಧ ಅಭ್ಯರ್ಥಿಯನ್ನೇ ನಿಲ್ಲಿಸದ ಕೆಜೆಪಿ

ಬಾಲಗಕೋಟೆ ಜಿಲ್ಲೆಯ ಬೀಳಗಿ ಕ್ಷೇತ್ರದಿಂದ ಮುರುಗೇಶ್ ನಿರಾಣಿ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಕೆಜೆಪಿ ಹೋಗುವ ಶಾಸಕರ ಪಟ್ಟಿಯ ಮೊದಲ ಸ್ಥಾನದಲ್ಲಿದ್ದ ನಿರಾಣಿ ಕೊನೆಗೂ ತಮ್ಮ ನಿರ್ಧಾರ ಬದಲಿಸಿ, ಬಿಜೆಪಿಯಲ್ಲೇ ಉಳಿದಿದ್ದರು.
ಕೊನೆ ಕ್ಷಣದಲ್ಲಿ ತಮಗೆ ಕೈ ಕೊಟ್ಟ ಬೆಂಬಲಿಗನ ವಿರುದ್ಧ ಸಿಟ್ಟಾದಗೇ ಯಡಿಯೂರಪ್ಪ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆಯೇ ಎಂಬ ಅನುಮಾನ ಪ್ರಾರಂಭವಾಗಿದೆ. ಮುರುಗೇಶ್ ನಿರಾಣಿ ವಿರುದ್ಧ ಕೆಜೆಪಿ ಅಭ್ಯರ್ಥಿಯನ್ನೆ ಕಣಕ್ಕಳಿಸದೇ ಯಡಿಯೂರಪ್ಪ ಬೆಂಬಲಿಗೆ ಬೆನ್ನು ತಟ್ಟಿದ್ದಾರೆ.
ಕೆಜೆಪಿ ಅಂತಿಮ ಪಟ್ಟಿ ಬಿಡುಗಡೆಗೊಂಡಾಗ ಬೀಳಗಿ ಕ್ಷೇತ್ರದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಅಂಗಡಿ ಅವರನ್ನು ಘೋಷಿಸಿ ಬಿ ಫಾರ್ಮ್ ನೀಡಲಾಗಿತ್ತು. ಆದರೆ, ಅನಾರೋಗ್ಯದ ಕಾರಣ ಅಂಗಡಿ ಕೆ.ಎಲ್.ಇ ಆಸ್ಪತ್ರೆಗೆ ದಾಖಲಾದವರು ನಾಮಪತ್ರ ಸಲ್ಲಿಸಸಿಲ್ಲ. (ಕೆಜೆಪಿ ಅಂತಿಮ ಪಟ್ಟಿ)
ಬಾಗಲಕೋಟೆಯ ಕುತ್ಬುದ್ದೀನ್ ಖಾಜಿ ತಾವು ಕೆಜೆಪಿ ಅಭ್ಯರ್ಥಿ ಎಂದು ನಾಮಪತ್ರ ಸಲ್ಲಿಸಿದರು. ಆದರೆ. ಬಿ ಫಾರ್ಮ್ ಇಲ್ಲದ ಕಾರಣ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಇದರಿಂದಾಗಿ ಬೀಳಗಿ ಕ್ಷೇತ್ರದಲ್ಲಿ ಕೆಜೆಪಿ ಅಭ್ಯರ್ಥಿಗಳೇ ಇಲ್ಲದಂತಾಗಿದೆ.
ಮುರುಗೇಶ್ ನಿರಾಣಿ ಎದುರು ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಿ ಯಡಿಯೂರಪ್ಪ ಪಾಠ ಕಲಿಸುತ್ತಾರೆ ಎಂದು ವಿಶ್ಲೇಷಿಸಲಾಗಿತ್ತು ಕೊನೆಯ ಕ್ಷಣದಲ್ಲಿ ಅಭ್ಯರ್ಥಿಗಳೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ಕಟ್ಟಾ ಶಿಷ್ಯನ ವಿರುದ್ಧ ಅಭ್ಯರ್ಥಿಯನ್ನು ನಿಲ್ಲಿಸದೇ ಯಡಿಯೂರಪ್ಪ ಪರೋಕ್ಷವಾಗಿ ನಿರಾಣಿಗೆ ಬೆಂಬಲ ಸೂಚಿಸಿದ್ದಾರೆ.
ಚುನಾವಣೆ ಬಹಿಷ್ಕಾರ ಬೆದರಿಕೆ : ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಜನರು ಎಚ್ಚರಿಗೆ ನೀಡಿದ್ದಾರೆ. ಕಳೆದ 9 ತಿಂಗಳ ಹಿಂದೆ ತಾಲೂಕಿನ ಪಿ.ಎಂ ಬುದ್ನಿ ಗ್ರಾಮದ ನಿವಾಸಿ ಭೂಸೇನಾ ಯೋಧ ಅಶೋಕ ಹನಮಂತ ಬಡಕಲಿ (28)ಯನ್ನು ಕಾಣೆಯಾಗಿದ್ದಾನೆ.
ಆದರೆ, ಇದುವರೆಗೂ ಅವರ ಪತ್ತೆಯಾಗಿಲ್ಲ. ಯೋಧನನ್ನು ಹುಡುಕಿ ಕೊಡುವಂತೆ ತಹಸೀಲ್ದಾರ್, ಜಿಲ್ಲಾಧಿಕಾರಿ, ರಾಜ್ಯಪಾಲ ಮತ್ತು ರಾಷ್ಟ್ರಪತಿ ಅವರಿಗೆ ಸಲ್ಲಿಸಿದ ಮನವಿಗೆ ಯಾರು ಸ್ಪಂದಿಸಿಲ್ಲ ಆದ್ದರಿಂದ ಚುಣಾವಣೆ ಬಹಿಷ್ಕಾರ ಮಾಡುತ್ತೇವೆ ಎಂದು ತಾಲೂಕಿನ ಜನರು ತಹಸೀಲ್ದಾರಿಗೆ ಗುರುವಾರ ಪತ್ರದ ಮೂಲಕ ತಿಳಿಸಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications