ರಾಮನವಮಿ ಪಾನಕ ಸೇವಿಸಿದ ಬಾಲಕಿ ಸಾವು

ಮೈಸೂರು ರಸ್ತೆಯಲ್ಲಿರುವ ವಾಲ್ಮಿಕಿ ನಗರದ ಮಾರಮ್ಮ ದೇವಸ್ಥಾನದ ಬಳಿ ರಾಮನವಮಿ ಪ್ರಯುಕ್ತ ಶುಕ್ರವಾರ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಗಿತ್ತು. ಇದನ್ನು ಸೇವಿಸಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು ಅವರನ್ನು ಕೂಡ ವಾಣಿ ವಿಲಾಸ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಾನಿಕ ಸೇವಿಸಿದ ಹಲವಾರು ಮಂದಿ ಶುಕ್ರವಾರ ರಾತ್ರಿ ವಾಂತಿ ಮತ್ತು ಭೇದಿಯಿಂದ ನರಳಲು ಪ್ರಾರಂಭಿಸಿದ್ದಾರೆ. ಅವರನ್ನು ಕೂಡಲೆ ವಾಣಿ ವಿಲಾಸ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದವರು ಚೇತರಿಸಿಕೊಳ್ಳುತ್ತಿದ್ದರೆ, ಶ್ರೀರಾಮನವಮಿಯ ಮರುದಿನ ಶನಿವಾರ ಗಂಗಾ ಶ್ರೀರಾಮನ ಪಾದ ಸೇರಿದ್ದಾಳೆ.
ಶುಕ್ರವಾರ ಮಾತ್ರವಲ್ಲ ನಗರದಾದ್ಯಂತ ಶನಿವಾರ ಕೂಡ ಪಾನಕ ಮತ್ತು ಕೋಸಂಬರಿಗಳನ್ನು ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ. ಉಳಿದ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆದ ವರದಿಯಾಗಿಲ್ಲ. ಆದರೆ, ವಾಲ್ಮಿಕಿ ನಗರದಲ್ಲಿ ವಿತರಿಸಲಾದ ಪಾನಕ ಮತ್ತು ಮಜ್ಜಿಗೆ ಕಲುಷಿತ ನೀರಿನಿಂದ ತಯಾರಿಸಿರಬಹುದು ಎಂದು ಶಂಕಿಸಲಾಗಿದೆ.
ಶ್ರೀರಾಮನವಮಿ ಪ್ರಯುಕ್ತ ಪೆಂಡಾಲುಗಳನ್ನು ಹಾಕಿ ಬೇಸಿಗೆಯ ಬಿಸಿಲಿಗೆ ಬೆಂದ ಜನರು ತಣ್ಣಗಾಗಲು ಪಾನಕ, ಮಜ್ಜಿಗೆ, ಕೋಸಂಬರಿಗಳನ್ನು ವಿತರಿಸುವುದು ವಾಡಿಕೆ. ನಗರದೆಲ್ಲೆಡೆ ಜನರು ಮುಗಿಬಿದ್ದು ಪಾನಕ, ಮಜ್ಜಿಗೆ ಸೇವಿಸಿ ರಾಮನವಮಿಯನ್ನು ಆಚರಿಸಿದ್ದಾರೆ. ವಾಲ್ಮಿಕಿ ನಗರದ ಘಟನೆಗೆ ಸಂಬಂಧಿಸಿದಂತೆ ಯಾರನ್ನು ಪೊಲೀಸರು ಬಂಧಿಸಿಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications