ಮಾಲೂರು : ಬಿಜೆಪಿಗೆ ಲಡ್ಡು ಕೊಟ್ಟು ನಕ್ಕ ಶೆಟ್ಟರು

ಬಿಜೆಪಿ ಅಂತಿಮ ಪಟ್ಟಿಯಲ್ಲಿ ಮಾಲೂರು ಕ್ಷೇತ್ರದಿಂದ ವೆಂಕಟೇಶ್ ಗೌಡ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿತ್ತು. ಆದರೆ, ಕೃಷ್ಣಯ್ಯ ಶೆಟ್ಟಿ ಅವರು ನಾಮಪತ್ರ ಸಲ್ಲಿಸದಂತೆ ಮಾಡಿ, ಬಿಜೆಪಿಗೆ ಸರಿಯಾದ ಲಡ್ಡು ಕೊಟ್ಟಿದ್ದಾರೆ.(ಬಿಜೆಪಿ ಅಂತಿಮ ಪಟ್ಟಿ)
ಘೋಷಿತ ಅಭ್ಯರ್ಥಿ ನಾಮಪತ್ರ ಸಲ್ಲಿಸದೇ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಾರೆ. ಕೃಷ್ಣಯ್ಯ ಶೆಟ್ಟಿ ಮತ್ತು ವೆಂಕಟೇಶ್ ಗೌಡ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಆಗಿದ್ದೇನು : ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದಿಲ್ಲ ಎಂಬ ನಿಯಮದಂತೆ ಜೈಲು ಶಿಕ್ಷೆ ಅನುಭವಿಸಿ ಬಂದ ಕೃಷ್ಣಯ್ಯ ಶೆಟ್ಟಿಗೆ ಟಿಕೆಟ್ ನೀಡಬಾರದು ಎಂದು ಪಕ್ಷದ ನಾಯಕರು ತೀರ್ಮಾನಿಸಿದರು.
ನಿಮಗೆ ಟಿಕೆಟ್ ನೀಡಲು ಸಾಧ್ಯವಿಲ್ಲ. ನೀವು ಸೂಚಿಸಿದ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡುತ್ತೇವೆ ಎಂದು ಬಿಜೆಪಿ ಘೋಷಿಸಿತು. ಇದರಿಂದ ಬಂಡಾಯದ ಕಹಳೆ ಮೊಳಗಿಸಿದ ಕೃಷ್ಣಯ್ಯ ಶೆಟ್ಟಿ ಬಿಜೆಪಿಗೆ ರಾಜೀನಾಮೆ ನೀಡಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದರು.
ನಂತರ ಬಿಜೆಪಿ ಮೂರನೇ ಪಟ್ಟಿಯಲ್ಲಿ ವೆಂಕಟೇಶ್ ಗೌಡ ಅವರಿಗೆ ಟಿಕೆಟ್ ನೀಡಿತು. ಕೃಷ್ಣಯ್ಯ ಶೆಟ್ಟಿ ಆಪ್ತ ವಲಯದ ಸದಸ್ಯರಾದ ಗೌಡರು ಬಿ ಫಾರಂ ಕೈಯಲ್ಲಿದ್ದರೂ ನಾಮಪತ್ರ ಸಲ್ಲಿಸದೇ ತಟಸ್ಥವಾಗಿ ಉಳಿದರು. ಇದರ ಹಿಂದೆ ಕೃಷ್ಣಯ್ಯ ಶೆಟ್ಟಿ ಕೈವಾಡವಿರುವುದು ಪಕ್ಷದ ಅಧ್ಯಕ್ಷರ ಕೋಪಕ್ಕೆ ಕಾರಣವಾಗಿದೆ.
ಕೃಷ್ಣಯ್ಯ ಶೆಟ್ಟಿ ಪಕ್ಷದ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆಯೂ ಅಂಗೀಕಾರವಾಗಿಲ್ಲ. ಆದ್ದರಿಂದ ಅವರನ್ನು ಬಂಡಾಯ ಅಭ್ಯರ್ಥಿ ಎಂದು ಪರಿಗಣಿಸಿ ಕ್ರಮ ಜರುಗಿಸಲು ಪಕ್ಷ ಸಜ್ಜಾಗಿದೆ. ಬಿ ಫಾರಂ ಪಡೆದ ವೆಂಕಟೇಶ್ ಗೌಡ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಬಿಜೆಪಿ ಟಿಕೆಟ್ ದೊರೆಯದ ಕೃಷ್ಣಯ್ಯ ಶೆಟ್ಟಿ ತಮ್ಮ ಆಪ್ತನಿಗೆ ತಟಸ್ಥವಾಗಿರುವಂತೆ ಸೂಚಿಸಿ ಬಿಜೆಪಿಗೆ ಸರಿಯಾದ ಶಾಕ್ ನೀಡಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆ ಎಂದಿದ್ದ ಬಿಜೆಪಿ ನಾಯಕರಿಗೆ ಮಾಲೂರು ಮುಖಭಂಗ ಉಂಟುಮಾಡಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications