ಮಾನವ ಕಂಪ್ಯೂಟರ್ ಶಕುಂತಲಾ ದೇವಿ ಇನ್ನಿಲ್ಲ

1939, ನವೆಂಬರ್ 4 ರಂದು ಬೆಂಗಳೂರಿನಲ್ಲಿ ಸಾಂಪ್ರದಾಯಿಕ ಬ್ರಾಹ್ಮಣ ಕುಟುಂಬದಲ್ಲಿ ಶಕುಂತಲಾ ದೇವಿ ಜನಿಸಿದ್ದರು. ದೇಗುಲದ ಅರ್ಚಕ ವೃತ್ತಿಗೆ ಸೇರದ ಅವರ ತಂದೆ ಸರ್ಕಸ್ ಸೇರಿದರು. ಮೂರು ವರ್ಷ ವಯಸ್ಸಿನಲ್ಲೇ ಶಕುಂತಲಾ ಅವರು ಇಸ್ಪೀಟ್ ಕಾರ್ಡ್ ಟ್ರಿಕ್ ಗೆ ಸಹಾಯಕರಾದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಆರನೇ ವರ್ಷದಲ್ಲೇ ತನ್ನ ಬುದ್ಧಿಮತ್ತೆಯಿಂದ ಎಲ್ಲರನ್ನು ಸೆಳೆದ ಶಕುಂತಲಾ ಅವರು ಅಂಕಗಣಿತ, ಬೀಜ ಗಣಿತದ ಕಠಿಣ ಲೆಕ್ಕಗಳನ್ನು ಸುಲಭವಾಗಿ ಪರಿಹರಿಸಿದರು.
ಮಾನವ ಕಂಪ್ಯೂಟರ್ ಎಂಬುದಾಗಿ ಹೆಸರು ಗಳಿಸಿರುವ ಬಾರತೀಯ ಗಣಿತ ತಜ್ಞೆ ಶಕುಂತಲಾ ದೇವಿ ಅವರು 1977 ರಲ್ಲಿ ಇವರು 201 ಅಂಕಿಗಳ 23 ನೇ ವರ್ಗಮೂಲವನ್ನು ಕೇವಲ 50 ಸೆಕೆಂಡುಗಳಲ್ಲಿ ಲೆಕ್ಕಹಾಕಿ ಹೇಳಿದರು. ಇದೇ ಲೆಕ್ಕವನ್ನು ಮಾಡಲು ಕಂಪ್ಯೂಟರ್ ಯುನಿವ್ಯಾಕ್ 1108 ಒಂದು ನಿಮಿಷಕ್ಕೂ ಹೆಚ್ಚು ಸಮಯ ತೆಗೆದುಕೊಂಡಿತು.
1980ರಲ್ಲಿ ಲಂಡನ್ನಿನಲ್ಲಿ 13 ಅಂಕಿಗಳಿದ್ದ ಸಂಖ್ಯೆ(7,686,369,774,870 x 2,465,099,745,779 )ಗಳ ಗುಣಾಕರವನ್ನು ಮಾಡಿ ಕೇವಲ 28 ಸೆಕೆಂಡುಗಳಲ್ಲಿ ಉತ್ತರ ನೀಡಿದ್ದರು. ಈ ಗಣಿತ ವಿಕ್ರಮ 1995ರ ಗಿನ್ನಿಸ್ ಪುಸ್ತಕದಲ್ಲಿ ದಾಖಲೆಯಾಯಿತು.
ಗಿನ್ನಿಸ್ ದಾಖಲೆ ಹೊಂದಿದ್ದ ಶಕುಂತಲಾ ಅವರು ಗಣಿತದ ಅಂಕ ವಿನೋದ,ಲೆಕ್ಕಾಚಾರ, ಅಡುಗೆ ಬಗ್ಗೆ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. Puzzles to Puzzle You, Awaken the Genius in Your Child, Book of Numbers, In the Wonderland of Numbers, Perfect Murder and Astrology for You ಮುಂತಾದ ಪುಸ್ತಕಗಳನ್ನು ಹೆಸರಿಸಬಹುದು. ಶಕುಂತಲಾ ದೇವಿ ಅವರು ಎಲ್ಲರಂತೆ ಶಾಲೆ ಹೋಗಿ ಓದು ಕಲಿತವರಲ್ಲ ಎಂಬುದು ವಿಶೇಷ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications