ಮಾನವ ಕಂಪ್ಯೂಟರ್ ಶಕುಂತಲಾ ದೇವಿ ಇನ್ನಿಲ್ಲ

1939, ನವೆಂಬರ್ 4 ರಂದು ಬೆಂಗಳೂರಿನಲ್ಲಿ ಸಾಂಪ್ರದಾಯಿಕ ಬ್ರಾಹ್ಮಣ ಕುಟುಂಬದಲ್ಲಿ ಶಕುಂತಲಾ ದೇವಿ ಜನಿಸಿದ್ದರು. ದೇಗುಲದ ಅರ್ಚಕ ವೃತ್ತಿಗೆ ಸೇರದ ಅವರ ತಂದೆ ಸರ್ಕಸ್ ಸೇರಿದರು. ಮೂರು ವರ್ಷ ವಯಸ್ಸಿನಲ್ಲೇ ಶಕುಂತಲಾ ಅವರು ಇಸ್ಪೀಟ್ ಕಾರ್ಡ್ ಟ್ರಿಕ್ ಗೆ ಸಹಾಯಕರಾದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಆರನೇ ವರ್ಷದಲ್ಲೇ ತನ್ನ ಬುದ್ಧಿಮತ್ತೆಯಿಂದ ಎಲ್ಲರನ್ನು ಸೆಳೆದ ಶಕುಂತಲಾ ಅವರು ಅಂಕಗಣಿತ, ಬೀಜ ಗಣಿತದ ಕಠಿಣ ಲೆಕ್ಕಗಳನ್ನು ಸುಲಭವಾಗಿ ಪರಿಹರಿಸಿದರು.
ಮಾನವ ಕಂಪ್ಯೂಟರ್ ಎಂಬುದಾಗಿ ಹೆಸರು ಗಳಿಸಿರುವ ಬಾರತೀಯ ಗಣಿತ ತಜ್ಞೆ ಶಕುಂತಲಾ ದೇವಿ ಅವರು 1977 ರಲ್ಲಿ ಇವರು 201 ಅಂಕಿಗಳ 23 ನೇ ವರ್ಗಮೂಲವನ್ನು ಕೇವಲ 50 ಸೆಕೆಂಡುಗಳಲ್ಲಿ ಲೆಕ್ಕಹಾಕಿ ಹೇಳಿದರು. ಇದೇ ಲೆಕ್ಕವನ್ನು ಮಾಡಲು ಕಂಪ್ಯೂಟರ್ ಯುನಿವ್ಯಾಕ್ 1108 ಒಂದು ನಿಮಿಷಕ್ಕೂ ಹೆಚ್ಚು ಸಮಯ ತೆಗೆದುಕೊಂಡಿತು.
1980ರಲ್ಲಿ ಲಂಡನ್ನಿನಲ್ಲಿ 13 ಅಂಕಿಗಳಿದ್ದ ಸಂಖ್ಯೆ(7,686,369,774,870 x 2,465,099,745,779 )ಗಳ ಗುಣಾಕರವನ್ನು ಮಾಡಿ ಕೇವಲ 28 ಸೆಕೆಂಡುಗಳಲ್ಲಿ ಉತ್ತರ ನೀಡಿದ್ದರು. ಈ ಗಣಿತ ವಿಕ್ರಮ 1995ರ ಗಿನ್ನಿಸ್ ಪುಸ್ತಕದಲ್ಲಿ ದಾಖಲೆಯಾಯಿತು.
ಗಿನ್ನಿಸ್ ದಾಖಲೆ ಹೊಂದಿದ್ದ ಶಕುಂತಲಾ ಅವರು ಗಣಿತದ ಅಂಕ ವಿನೋದ,ಲೆಕ್ಕಾಚಾರ, ಅಡುಗೆ ಬಗ್ಗೆ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. Puzzles to Puzzle You, Awaken the Genius in Your Child, Book of Numbers, In the Wonderland of Numbers, Perfect Murder and Astrology for You ಮುಂತಾದ ಪುಸ್ತಕಗಳನ್ನು ಹೆಸರಿಸಬಹುದು. ಶಕುಂತಲಾ ದೇವಿ ಅವರು ಎಲ್ಲರಂತೆ ಶಾಲೆ ಹೋಗಿ ಓದು ಕಲಿತವರಲ್ಲ ಎಂಬುದು ವಿಶೇಷ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications