ಮಹಾಲಕ್ಷ್ಮೀ ಲೇಔಟ್ ನಲ್ಲಿ ಗುಂಡಿನ ಮೊರೆತ

ಶನಿವಾರ ರಾತ್ರಿ ಮಹಾಲಕ್ಷ್ಮೀ ಲೇಔಟ್ ನ ವಿಜಯ ಬಾರ್ ಮತ್ತು ರೆಸ್ಟೋರೆಂಟ್ ಮುಂಭಾಗದಲ್ಲಿ ರೌಡಿಗಳು ಗ್ಯಾಂಗ್ ವಾರ್ ಗೆ ಇಬ್ಬರು ಕೊಲೆಯಾಗಿದ್ದರು. ಭಾನುವಾರ ರಾತ್ರಿ ಪ್ರಕರಣದ ಆರೋಪಿ ಯುವರಾಜ್ ಅಲಿಯಾಸ್ ಪಾಪುವನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ಆತ ಹಲ್ಲೆಗೆ ಮುಂದಾದ.
ತಕ್ಷಣ ಯಶವಂತಪುರ ಠಾಣೆ ಇನ್ಸ್ಪೆಕ್ಟರ್ ಪುರುಷೋತ್ತಮ್ ಯುವರಾಜ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಆರೋಪಿ ಕಾಲುಗಳಿಗೆ ಗುಂಡು ತಗುಲಿದ್ದು, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಸಿನೀಮಯ ಕಾರ್ಯಚರಣೆ : ಶನಿವಾರ ರಾತ್ರಿ ನಡೆದ ಇಬ್ಬರ ಹತ್ಯೆ ಪ್ರಕರಣದ ಆರೋಪಿ ಯುವರಾಜ. ಬೈಕ್ನಲ್ಲಿ ಹೋಗುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆತನನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಮಹಾಲಕ್ಷ್ಮೀ ಬಡಾವಣೆಯ ಬಳಿ ಪೊಲೀಸರು ಬಂಧಿಸಲು ಯತ್ನಿಸಿದಾಗ ಪರಾರಿಯಾಗಿದ್ದಾನೆ.
ನಂತರ ಕಂಠೀರವ ಸ್ಟುಡಿಯೋ ಬಳಿ ಯುವರಾಜ್ ತನ್ನನ್ನು ಹಿಂಬಾಲಿಸುತ್ತಿದ್ದ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಲಗ್ಗೆರೆ ಮಾರ್ಗವಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಾಲಿಗೆ ಗುಂಡು ತಗುಲಿದ್ದರಿಂದ ಸುಲಭವಾಗಿ ಪೊಲೀಸರಿಗೆ ಸಿಕ್ಕಿಬಿದಿದ್ದಾನೆ.
ಕೊಲೆಯ ಹಿನ್ನೆಲೆ : ಶನಿವಾರ ರಾತ್ರಿ ಮಹಾಲಕ್ಷ್ಮೀ ಲೇಔಟ್ ನ ವಿಜಯ ಬಾರ್ ಮತ್ತು ರೆಸ್ಟೋರೆಂಟ್ ಗೆ ಬಾಬು ಹಾಗೂ ಧರಣೀಶ್ ತಮ್ಮ ಉಳಿದ ನಾಲ್ವರು ಸ್ನೇಹಿತರ ತೆರಳಿದ್ದರು. ರಾತ್ರಿ ಮದ್ಯ ಸೇವಿಸಿದ ನಂತರ ಆ ಆರು ಜನರ ನಡುವೆಯೇ ಜಗಳ ನಡೆದಿದೆ.
ಬಾರ್ ನಿಂದ ಹೊರಗೆ ಬಂದ ಇವರ ಮೇಲೆ ಹಳೆಯ ವೈರಿಗಳು ದಾಳಿ ನಡೆಸಿದ್ದಾರೆ. ಎರಡು ಗುಂಪುಗಳ ನಡುವೆ ಜಗಳ ನಡೆದಾಗ ಪರಿಮಳನಗರದ ಬಾಬು (26) ಹಾಗೂ ಸೋಮೇಶ್ವರ ನಗರದ ಧರಣೀಶ್ (24) ಕೊಲೆಯಾಗಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬಾರ್ ನ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿ ಮೂವರನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಯುವರಾಜ ಮಾತ್ರ ದೊರಕಿರಲಿಲ್ಲ. ಭಾನುವಾರ ರಾತ್ರಿ ಆತನನ್ನು ಬಂಧಿಸಲು ತೆರಳಿದಾಗ ಪ್ರತಿ ದಾಳಿ ನಡೆಸಿದ ಕಾರಣಕ್ಕಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications