ಭರ್ಜರಿ ಬೇಟೆ: ಬಾಂಬ್ ಸ್ಫೋಟದ ರೂವಾರಿಗಳ ಬಂಧನ
ಚೆನ್ನೈ, ಎ.23: ಇದು ನಿಜಕ್ಕೂ ಸ್ಫೋಟಕ ಸುದ್ದಿಯೇ. ಪ್ರಮುಖ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ಕಚೇರಿ ಎದುರು ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಬೆಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮಿಳುನಾಡು ಗುಪ್ತಚರ ದಳದ ಸಕಾಲಿಕ ನೆರವಿನೊಂದಿಗೆ ಈ ಬಂಧನ ಸಾಧ್ಯವಾಗಿದೆ. ಮೊಬೈಲ್ ಕರೆಗಳ ಜಾಡು ಹಿಡಿದ ಬೆಂಗಳೂರು ಪೊಲೀಸರು ಈ ಮಹತ್ವದ ಸಾಧನೆ ಮಾಡಿದ್ದಾರೆ.
ಚೆನ್ನೈನ ಹೂವಿನ ಮಾರುಕಟ್ಟೆಯಲ್ಲಿ ಅವಿತುಕೊಂಡಿದ್ದ ತಿರುನೆಲ್ವೇಲಿಯ ಬಶೀರ್ ಮತ್ತು ಬೆಂಗಳೂರಿನ ಪೀರ್ ಮೊಹಿದ್ದೀನ್ ಎಂಬಿಬ್ಬರು ಶಂಕಿತ ಆರೋಪಿಗಳನ್ನು ನಿನ್ನೆ ರಾತ್ರಿ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.

ಈ ಇಬ್ಬರು ಉಗ್ರರ ಬಂಧನದಿಂದ ಸ್ಫೋಟಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಪ್ರಾಥಮಿಕ ವಿಚಾರಣೆಯಿಂದ ಇವರಿಬ್ಬರೂ ನಿಷೇಧಿತ ಉಗ್ರ ಸಂಘಟನೆಗೆ ಸೇರಿದವರು ಎಂಬುದು ತಿಳಿದುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಗಮನಾರ್ಹವೆಂದರೆ, ಈ ಬಂಧನಗಳಿಗೂ ಮುನ್ನ ಸೋಮವಾರ ಮಧ್ಯಾಹ್ನ ಸ್ಫೋಟ ಕುರಿತು ಲೋಕಸಭೆಯಲ್ಲಿ ಹೇಳಿಕೆಯೊಂದನ್ನು ನೀಡಿದ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ, ಎಪ್ರಿಲ್ 17ರ ಈ ಉಗ್ರಗಾಮಿ ದಾಳಿಯಲ್ಲಿ ಇಂಡಿಯನ್ ಮುಜಾಹಿದೀನ್ (ಐಎಂ) ಕೈವಾಡವಿದೆಯೆಂದು ಅಧಿಕಾರಿಗಳು ತಿಳಿಸಿರುವುದಾಗಿ ಹೇಳಿದ್ದರು.
ಉಗ್ರಗಾಮಿ ದಾಳಿಯಲ್ಲಿ ಐಎಂ ಕಾರ್ಯಕರ್ತರು ಭಾಗಿಯಾಗಿರುವ ಶಂಕೆಯಿದೆ ಎಂದು ಕರ್ನಾಟಕ ಪೊಲೀಸರ ಜತೆ ಸ್ಫೋಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯೂ (ಎನ್ಐಎ) ಗೃಹ ಖಾತೆಗೆ ಮಾಹಿತಿ ನೀಡಿತ್ತು. ಸ್ಫೋಟದಲ್ಲಿ 11 ಪೊಲೀಸರ ಸಹಿತ 16 ಮಂದಿ ಗಾಯಗೊಂಡಿದ್ದರು.
ದೇಶದ ವಿವಿಧೆಡೆ ಬಾಂಬ್ ದಾಳಿಗೆ ಕಾರಣವಾಗಿರುವ ನಿಷೇಧಿತ ಉಗ್ರಗಾಮಿ ಗುಂಪು ಬೆಂಗಳೂರು ಸ್ಫೋಟಕ್ಕೂ ಕಾರಣವಾಗಿದೆಯೆಂದು ತೀರ್ಮಾನಕ್ಕೆ ಬರುವುದಕ್ಕೆ ಸ್ಫೋಟಕ್ಕೆ ಅನುಸರಿಸಲಾದ ಕಾರ್ಯವಿಧಾನ ಮತ್ತು ಬಳಸಲಾದ ಸ್ಫೋಟಕಗಳು ಪುರಾವೆ ನೀಡುತ್ತವೆ ಎಂದು ಎನ್ಐಎ ಅಂದಾಜಿಸಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications