ವೋಟಿಗಾಗಿ ನೋಟು ಪಡೆದರೆ ಜೈಲು ಖಾಯಂ

ಕೇಂದ್ರ ಗೃಹ ಮಂತ್ರಾಲಯದ ಅನುಮತಿ ದೊರೆತರೆ ಈ ಕಾನೂನು ಶೀಘ್ರದಲ್ಲೇ ಜಾರಿಗೆ ಬರಲಿದೆ. ಮತದಾನಕ್ಕಾಗಿ ಆಮಿಷ ಒಡ್ಡುವವರ ಜೊತೆ ಹಣ ಮತ್ತು ಉಡುಗೊರೆ ಪಡೆಯುವರನ್ನು ಬಂಧಿಸಲು ಜಾಮೀನು ರಹಿತ ಅಧಿಕೃತ ಕಾನೂನು ಜಾರಿಯಾಗಲಿದೆ.
ಮತ ಹಣ ಮತ್ತು ಉಡುಗೊರೆ ಪಡೆಯುವುದು ಸದ್ಯ ಜಾಮೀನು ದೊರೆಯವ ಅಪರಾಧ. ಚುನಾವಣೆಗಳಲ್ಲಿ ಹಣದ ಪ್ರಾಬಲ್ಯ ಕಡಿಮೆಗೊಳಿಸುವ ಉದ್ದೇಶದಿಂದ ಇದನ್ನು ಜಾಮೀನುರಹಿತ ಎಂದು ಪರಿಗಣಿಸಿ ಕಾನೂನಿಗೆ ತಿದ್ದುಪಡಿ ತರಬೇಕೆಂಬುದು ಕೇಂದ್ರ ಚುನಾವಣಾ ಆಯೋಗದ ನಿಲುವು ಚಿಂತನೆ ನಡೆಸಿದೆ. ನೂತನ ಕಾನೂನಿನ ಶಿಫಾರಸ್ಸನ್ನು ಕೇಂದ್ರ ಗೃಹ ಮಂತ್ರಾಯಲಕ್ಕೆ ಕಳುಹಿಸಿದೆ.
ಚುನಾವಣಾ ಆಯೋಗದ ಕ್ರಮಕ್ಕೆ ಈಗಾಗಲೇ ಹತ್ತೊಂಬತ್ತು ರಾಜ್ಯಗಳು ಸಮ್ಮತಿ ಸೂಚಿಸಿದ್ದು, ಕೇಂದ್ರ ಗೃಹ ಮಂತ್ರಾಲಯ ಅಂತಿಮ ನಿರ್ಧಾರ ಮಾತ್ರ ಬಾಕಿ ಇದೆ. ಅಂತಿಮ ನಿರ್ಧಾರ ಹೊರಬಂದ ತಕ್ಷಣ ಕಾನೂನು ಜಾರಿಯಾಗಲಿದೆ.
ತಮಿಳುನಾಡು ಕಾರಣ : ಮತನೀಡಲು ಪ್ರತಿಫಲ ಪಡೆಯುವ ಜನರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಕಾರಣವಾಗಿರುವುದು ತಮಿಳುನಾಡು ರಾಜ್ಯ.2011ರಲ್ಲಿ ರಾಜ್ಯದಲ್ಲಿ ನಡೆದ ಚುನಾವಣೆಯಲ್ಲಿ ಉಡುಗೊರೆಗಳ ಮಹಾಪೂರವೇ ಹರಿದಿತ್ತು.
ಟಿವಿ, ಫ್ಯಾನ್, ವಾಷಿಂಗ್ ಮೆಷಿನ್, ಕುಕ್ಕರ್ ಮುಂತಾದ ಆರ್ಕಷಕ ವಸ್ತಗಳು ಮತದಾರರ ಮೆನ ಸೇರಿದ್ದವು. ಇವುಗಳನ್ನು ನೀಡಿದ್ದು, ರಾಜಕೀಯ ಪಕ್ಷಗಳು. ಯಾರು ಮತದಾರರಿಗೆ ಉಡುಗೊರೆ ಹಂಚುತ್ತಿದ್ದಾರೆ ಎಂದು ಪತ್ತೆ ಹಚ್ಚುವುದು ಆಯೋಗಕ್ಕೆ ದೊಡ್ಡ ಸವಾಲಾಗಿತ್ತು.
ಇದರಿಂದ ಎಚ್ಚೆತ್ತುಕೊಂಡ ಕೇಂದ್ರ ಚುನಾವಣಾ ಆಯೋಗ ಪ್ರತಿಫಲ ನೀಡುವವರು ಮಾತ್ರವಲ್ಲ, ಪಡೆಯುವವರ ಮೇಲೂ ಕ್ರಮ ಜರುಗಿಸಲು ಮುಂದಾಗಿದೆ. ಇದರಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬಹುದು ಎಂಬುದು ಆಯೋಗದ ಲೆಕ್ಕಾಚಾರ.
ಈ ಹಿನ್ನೆಲೆಯಲ್ಲಿ ಲಂಚ ನೀಡುವ ಮತ್ತು ಪಡೆಯುವ ಅಪರಾಧವನ್ನು ಜಾಮೀನುರಹಿತ ಅಪರಾಧವೆಂದು ಪರಿಗಣಿಸಿ ಭಾರತೀಯ ದಂಡ ಸಂಹಿತೆಗೆ ತಿದ್ದುಪಡಿ ತರುವಂತೆ ಕೇಂದ್ರ ಗೃಹ ಮಂತ್ರಾಲಯಕ್ಕೆ ಆಯೋಗ ಶಿಫಾರಸು ಮಾಡಿದೆ.
ಕೇಂದ್ರದಿಂದ ಅನುಮತಿ ದೊರೆತರೆ ಕರ್ನಾಟಕ ವಿಧಾನಸಭೆ ಚುನಾವಣೆಯಿಂದಲೇ ಈ ಕಾಯ್ದೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಒಂದು ಅಮೂಲ್ಯವಾದ ಮತಕ್ಕಾಗಿ ಆಮಿಷಗಳನ್ನು ಬಲಿಯಾಗದೇ ಪ್ರಾಮಾಣಿಕವಾಗಿ ಮತದಾನ ಮಾಡಿ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications