ಕಪಾಳಕ್ಕೆ ಬಾರಿಸಿ ಅಡ್ವಾಣಿ ಕ್ಷಮೆಕೋರಿದ ಯಡಿಯೂರಪ್ಪ

ಸೋಮವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ್ ಕುಮಾರ್, ಯಡಿಯೂರಪ್ಪ ಅವರನ್ನು ಅಧಿಕಾರದಲ್ಲಿ ಮುಂದುವರಿಸಲು ಎಲ್.ಕೆ. ಅಡ್ವಾಣಿ ಅವರ ಮಕ್ಕಳು ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಿದ್ದರು.
ಧನಂಜಯ್ ಕುಮಾರ್ ಆರೋಪಕ್ಕೆ ಬಿಜೆಪಿ ನಾಯಕರಿಂದ ತೀವ್ರ ಖಂಡನೆ ವ್ಯಕ್ತವಾಯಿತು. ಶಿವಮೊಗ್ಗ ಜಿಲ್ಲೆಯ ಪ್ರವಾಸದಲ್ಲಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಧನಂಜಯ್ ಕುಮಾರ್ ಆರೋಪಗಳು ನಿರಾಧಾರ. ಬಿಜೆಪಿ ಎಂದಿಗೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ರಾಜ್ಯದಲ್ಲಿ ಜನಾರ್ದನ ರೆಡ್ಡಿ, ಯಡಿಯೂರಪ್ಪ ಇಲ್ಲದೇ ಈ ಬಾರಿ ಅಧಿಕಾರಕ್ಕೆ ಬರುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದರು.
ಸೋಮವಾರ ಸಂಜೆ ಗುಲ್ಬರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಅಡ್ವಾಣಿ ಅವರಿಗಾಗಲೀ, ಅವರ ಮಕ್ಕಳಿಗಾಗಲೀ ನಾನು ನಯಾ ಪೈಸೆ ನೀಡಿಲ್ಲ. ಧನಂಜಯಕುಮಾರ್ ಆರೋಪ ತಪ್ಪು ಗ್ರಹಿಕೆಯಿಂದ ಕೂಡಿದೆ.
ಇಂಥ ಆರೋಪ ಯಾರಿಗೂ ಶೋಭೆ ತರುವುದಿಲ್ಲ. ನಾನು ಸಿಎಂ ಆಗಿದ್ದಾಗ ಅಡ್ವಾಣಿ ಮಕ್ಕಳು ಭೇಟಿಯಾಗುತ್ತಿದ್ದುದು ನಿಜ. ಇದನ್ನೇ ಧನಂಜಯಕುಮಾರ್ ಅಪಾರ್ಥ ಮಾಡಿಕೊಂಡಿರಬಹುದು.
ಅಗ್ರಗಣ್ಯ ನಾಯಕರಾದ ಅಡ್ವಾಣಿ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದಕ್ಕೆ ನಾನು ಅಡ್ವಾಣಿ ಮತ್ತು ರಾಜ್ಯದ ಜನರ ಕ್ಷೆಮೆ ಕೇಳುತ್ತೇನೆ ಎಂದು ಸ್ಪಷ್ಟನೆ ನೀಡಿದರು.
ಮಾನನಷ್ಟ ಮೊಕದ್ದಮೆ : ಅಡ್ವಾಣಿಯಂತಹ ಹಿರಿಯ ನಾಯಕರ ಬಗ್ಗೆ ಧನಂಜಯಕುಮಾರ್ ಮಾಡಿರುವ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಧನಂಜಯ್ ಕುಮಾರ್ ವಿರುದ್ಧ ಮಾನನಕಷ್ಟ ಮೊಕದ್ದಮೆ ದೂರು ದಾಖಲಿಸಲು ಸಜ್ಜಾಗಿದೆ.
ಚುನಾವಣೆ ಸಮಯದಲ್ಲಿ ಇಂತಹ ಹೇಳಿಕೆ ನೀಡಿ ನೀತಿ ಸಂಹಿತಿ ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಆಯೋಗಕ್ಕೂ ದೂರು ನೀಡಿದೆ. ದೂರು ಪಡೆದಿರುವ ಮುಖ್ಯ ಚುನಾವಣಾಧಿಕಾರಿ, ಧನಂಜಯ ಕುಮಾರ್ ಹೇಳಿಕೆ ಸಂಬಂಧ ಬಿಜೆಪಿ ನಾಯಕರು ದೂರು ಸಲ್ಲಿಸಿದ್ದಾರೆ. ಅವರಿಗೆ ನೋಟಿಸ್ ನೀಡಿ, ನೀತಿ ಸಂಹಿತೆ ಉಲ್ಲಂಘಿಸಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. (ಬಿಎಸ್ವೈರಿಂದ ಅಡ್ವಾಣಿಗೆ ಕಿಕ್ ಬ್ಯಾಕ್: ಧನಂಜಯ್ ಕಿ(ರಿ)ಕ್ಕು)
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications