ನರೇಂದ್ರ ಮೋದಿ ಮುಂದೆ, ರಾಜನಾಥ್ ಹಿಂದೆ!
ಬೆಂಗಳೂರು, ಏ. 24 : ಭಾರತೀಯ ಜನತಾ ಪಕ್ಷದ ಸರ್ವೋಚ್ಚ ನಾಯಕ ಯಾರು? ಬೆಂಗಳೂರಿನ ವಿಧಾನಸಭೆ ಕ್ಷೇತ್ರದಲ್ಲಿನ ಅಭ್ಯರ್ಥಿಗಳು ಯಾವ ಹಿರಿಯ ನಾಯಕನ ಹೆಸರನ್ನು ಮುಂದಿಟ್ಟುಕೊಂಡು ಪ್ರಚಾರ ಮುಂದುವರಿಸಿದ್ದಾರೆ? ಯಾವ ನಾಯಕನ ಚಿತ್ರವನ್ನು ಬಿಂಬಿಸಿದರೆ ತಾವು ಗೆಲ್ಲಬಹುದೆಂದು ಅನೇಕ ನಾಯಕರು ಲೆಕ್ಕಾಚಾರ ಹಾಕುತ್ತಿದ್ದಾರೆ?
ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ, ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅಂತ ನೀವು ಊಹಿಸಿದ್ದರೆ, ನಿಮ್ಮ ಊಹೆ ತಪ್ಪು. ರಾಜನಾಥ್ ಸಿಂಗ್ ಅವರ ಹೆಸರನ್ನು ಹಿಂದೆ ಹಾಕಿ, ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಎಂದೇ ಬಹುಪಾಲು ನಾಯಕರಿಂದ ಬಿಂಬಿತವಾಗಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಭಿತ್ತಿಪತ್ರಗಳಲ್ಲಿ ರಾರಾಜಿಸುತ್ತಿದ್ದಾರೆ.
ಇದು ನರೇಂದ್ರ ಮೋದಿ ಅವರ ಜನಪ್ರಿಯತೆಗೆ ಮತ್ತು ಅವರ ವರ್ಚಸ್ಸಿಗೆ ಹಿಡಿದ ಕನ್ನಡಿ ಎಂದರೂ ತಪ್ಪಾಗಲಾರದು. ಪ್ರತಿಷ್ಠಿತ ಕ್ಷೇತ್ರವಾಗಿರುವ ಪದ್ಮನಾಭನಗರದಲ್ಲಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಮತ್ತು ಶಿವಾಜಿನಗರದ ಬಿಜೆಪಿ ಅಭ್ಯರ್ಥಿ ನಿರ್ಮಲ್ ಸುರಾನಾ ಅವರು ಭಿತ್ತಿಪತ್ರದಲ್ಲಿ ನರೇಂದ್ರ ಮೋದಿ ಅವರಿಗೆ ಅಗ್ರಸ್ಥಾನ ನೀಡಿರುವುದು ಅಚ್ಚರಿ ಮೂಡಿಸುವುದರ ಜೊತೆ, ಮೋದಿ ಅವರನ್ನೇ ಪರೋಕ್ಷವಾಗಿ ಬೆಂಬಲಿಸುತ್ತಿದ್ದಾರೆ.

'ಪದ್ಮನಾಭನಗರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಈ ಬಾರಿ ನಿಮ್ಮ ಆಯ್ಕೆ ಬಿಜೆಪಿ ಅಭ್ಯರ್ಥಿಯಾದ ಆರ್ ಅಶೋಕ್ ಅವರಿಗೆ' ಎಂದು ಬರೆಸಲಾದ ಭಿತ್ತಿಪತ್ರದಲ್ಲಿ ಅತ್ಯುನ್ನತ ನಾಯಕರಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಹಿಡಿದು ಕರ್ನಾಟಕದ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರವರೆಗೆ ಅನೇಕ ನಾಯಕರ ಚಿತ್ರವನ್ನು ಮುದ್ರಿಸಲಾಗಿದೆ.
ಅದರಲ್ಲಿ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ ಅವರ ನಂತರದ ಸ್ಥಾನವನ್ನು ನರೇಂದ್ರ ಮೋದಿ ಅವರಿಗೆ ನೀಡಲಾಗಿದೆ. ಅವರ ಕೆಳಗಿನ ಸ್ಥಾನ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರು ಅಲಂಕರಿಸಿದ್ದಾರೆ. ನಿರ್ಮಲ್ ಸುರಾನಾ ಅವರು ಮುದ್ರಿಸಿರುವ ಭಿತ್ತಿಪತ್ರದಲ್ಲಿ ಕೇವಲ ನರೇಂದ್ರ ಮೋದಿ ಅವರು ಮಾತ್ರ ಸ್ಥಾನ ಪಡೆದಿದ್ದಾರೆ. ರಾಷ್ಟ್ರೀಯ ನಾಯಕರಿರಲಿ ರಾಜ್ಯದ ಉಳಿದ ನಾಯಕರನ್ನೂ ಅದರಲ್ಲಿ ಪರಿಗಣಿಸಲಾಗಿಲ್ಲ.
ನರೇಂದ್ರ ಮೋದಿ ಅವರು ಪ್ರಧಾನಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಬಿಂಬಿತವಾಗುತ್ತಾರಾ ಇಲ್ಲವಾ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಈ ಕುರಿತಂತೆ ಬಿಜೆಪಿ ಭಾರೀ ಜಿಜ್ಞಾಸೆಯಲ್ಲಿ ತೊಡಗಿದೆ. ಕೆಲವರು ಮೋದಿ ಅವರನ್ನು ಬಹಿರಂಗವಾಗಿ ಬೆಂಬಲಿಸುತ್ತಿದ್ದರೆ, ಕೆಲ ನಾಯಕರು ಅಡ್ವಾಣಿ ಅವರನ್ನು ಮುಂದಿಟ್ಟುಕೊಂಡಿದ್ದಾರೆ. ಈ ಜಟಾಪಟಿ ಇನ್ನೂ ಕೆಲ ಕಾಲ ಮುಂದುವರಿಯಬಹುದು.
ಈ ನಡುವೆ, ನರೇಂದ್ರ ಮೋದಿ ಅವರು ಒಂದು ದಿನದ ಮಟ್ಟಿಗೆ ರಾಜ್ಯದಲ್ಲಿ ಪ್ರಚಾರ ಮಾಡುವುದು ನಿಗದಿಯಾಗಿದೆ. ಮೋದಿ ಅವರು ಏ.28ರಂದು, ಭಾನುವಾರ ಬೆಂಗಳೂರಿನಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ. ಏ.28ರಂದು ಬಸವನಗುಡಿಯಲ್ಲಿರುವ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮೋದಿ ಅವರು ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಉಳಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ ಅವರು ಪ್ರಚಾರ ಕೈಗೊಳ್ಳುತ್ತಿದ್ದಾರೆ.
@oneindiakannada ನಮ್ ಏರಿಯಾ ಶಾಸಕ ನಂದೀಶ್ ರೆಡ್ಡಿ ನೂ ವಾಜಪೇಯಿ, ನರೇಂದ್ರ ಮೋದಿಯವರ ಭಾವಚಿತ್ರ ಮಾತ್ರ ಹಾಕ್ಕೊಂಡು ಪ್ರಚಾರ ಮಾಡ್ತಾ ಇದ್ದಾರೆ.
— Vinod(@vinod_gowda) April 24, 2013
ಪದ್ಮನಾಭನಗರ ಕ್ಷೇತ್ರದ ವಾರ್ಡುಗಳು : ಪದ್ಮನಾಭನಗರ, ಹೊಸಕೆರೆಹಳ್ಳಿ, ಗಣೇಶ್ ಮಂದಿರ ವಾರ್ಡ್, ಕರಿಸಂದ್ರ, ಯಡಿಯೂರು, ಬನಶಂಕರಿ ದೇವಸ್ಥಾನ ವಾರ್ಡ್, ಕುಮಾರಸ್ವಾಮಿ ಲೇಔಟ್, ಚಿಕ್ಕಲಸಂದ್ರ.
ಶಿವಾಜಿನಗರ ಕ್ಷೇತ್ರದ ವಾರ್ಡುಗಳು : ಶಿವಾಜಿನಗರ, ರಾಮಸ್ವಾಮಿ ಪಾಳ್ಯ, ಜಯಮಹಲ್, ಹಲಸೂರು, ಭಾರತಿನಗರ, ವಸಂತ ನಗರ, ಸಂಪಂಗಿರಾಮ ನಗರ
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications