ದಕ್ಷ ಆಡಳಿತ ಸಮರ್ಥ ನಾಯಕತ್ವದ ಕಾಂಗ್ರೆಸ್ ಪ್ರಣಾಳಿಕೆ

ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಕ್ಷೇಂದ್ರ ರಕ್ಷಣಾ ಸಚಿವ ಎ.ಕೆ.ಆಂಟನಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮಶ್ವರ್, ವಿಪಕ್ಷ ನಾಯಕ ಸಿದ್ಧರಾಮಯ್ಯ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತೀಕಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಪ್ರಣಾಳಿಕೆಗಳ ಮುಂಖ್ಯಾಶಗಳು
* 2 ಲಕ್ಷ ರೂ.ವರೆಗಿನ ಕೃಷಿ ಸಾಲಕ್ಕೆ ಬಡ್ಡಿದರ ವಿನಾಯಿತಿ
* ಹಾಲು ಉತ್ಪಾದಕರಿಗೆ 4 ರೂ. ಪ್ರೋತ್ಸಾಹ ಧನ
* ಶೇ 3ರ ಬಡ್ಡಿದರದಲ್ಲಿ 5 ಲಕ್ಷ ಸಾಲದ ವರೆಗಿನ ಕೃಷಿ ಸಾಲ
* ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ
* ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ
* ಬೆಂಗಳೂರಿನ 5 ಭಾಗಗಳಲ್ಲಿ ಕಲಾಮಂದಿರ
* ಪ್ರತಿ ಜಿಲ್ಲೆಗೆ ಒಂದು ಮಹಿಳಾ ಕಾಲೇಜು
* ಬೆಂಗಳೂರಿನಲ್ಲಿ ಸುಸಜ್ಜಿತ ಫಿಲಂ ಸೊಸೈಟಿ ಸ್ಥಾಪನೆ
* ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಡಿಜಿಟಲ್ ನೋಟ್ ಬುಕ್
* ಬಳ್ಳಾರಿ, ಹಾಸನ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ
* ಗ್ರಾಮೀಣ ದೇವಾಲಯಗಳಿಗೆ ಮಾಸಿಕ 2 ಸಾವಿರ ಅನುದಾನ
* ರೈತರ ಪಂಪ್ ಸೆಟ್ ಗಳಿಗೆ 24 ಗಂಟೆ ವಿದ್ಯುತ್
* ಬೆಂಗಳೂರಿನಲ್ಲಿ ಕ್ರೀಡಾ ಸಮುಚ್ಛಯ, ಸಸ್ಯ ಕಾಶಿ ಉದ್ಯಾನವನ ನಿರ್ಮಾಣ
* ಬಿಬಿಎಂಪಿ ಆಡಳಿತ ವ್ಯವಸ್ಥೆಯ ವಿಕೇಂದ್ರಕರಣ ಯೋಜನೆ
* ಏಳನೇ ತರಗತಿವರೆಗೆ ಕನ್ನಡ ಕಡ್ಡಾಯ
* ಪ್ರತಿ ಜಿಲ್ಲೆಯಲ್ಲಿ ಮಹಿಳಾ ಬ್ಯಾಂಕ್ ಸ್ಥಾಪನೆ
* ನೂತನ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ
* ಹಿಂದುಳಿದ ವರ್ಗದವರ ಅಭಿವೃದ್ಧಿಗಾಗಿ ದೇವರಾಜ್ ಅರಸು ಫೌಂಡೇಷನ್ ಸ್ಥಾಪನೆ
* ಬಿಪಿಎಲ್ ಕಾರ್ಡ್ ದಾರರಿಗೆ ಒಂದು ಕೆಜೆಯಂತೆ ತಿಂಗಳಿಗೆ 30 ಕೆ.ಜೆ.ಅಕ್ಕಿ
* ಪ್ರಾಕೃತಿಕ ವಿಕೋಪ ನಿದಿಗೆ 1,500 ಕೋಟಿ ಹಣ
* ಭಯೋತ್ಪಾದನೆ ಸಂಬಂಧಿತ ಪ್ರಕರಣಗಳ ವಿಚಾರಣೆಗೆ ತ್ವರಿತ ಗತಿ ನ್ಯಾಯಾಲಯ
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications