ಬೆಂಗಳೂರಿನಲ್ಲೂ ಆಗಿದೆ ಕಿಡ್ನಾಪ್, ಮದ್ಯ, ಗ್ಯಾಂಗ್ ರೇಪ್

ಮೂವರು ದುಷ್ಕರ್ಮಿಗಳು 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿ, ಒಂಟಿ ಮನೆಯಲ್ಲಿ ಬಲವಂತವಾಗಿ ಮದ್ಯ ಕುಡಿಸಿ, ಸಾಮೂಹಿಕ ಅತ್ಯಾಚಾರವೆಸಗಿದ ಕುಕೃತ್ಯ ಭಾನುವಾರ ನಡೆದಿದೆ.
ಬಾಧಿತ ಯುವತಿಯನ್ನು ಒಬ್ಬ ಮಹಿಳೆ ಸೇಂಟ್ ಜಾನ್ಸ್ ಆಸ್ಪತ್ರೆ ಬಳಿ ಬಿಟ್ಟು ಹೋಗಿದ್ದು, ಬಳಿಕ ಆಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾನುವಾರ ಬೆಳಗ್ಗೆ ಏನಾಯ್ತು?:
ಬಾಧಿತ ಯುವತಿ ನಗರದ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಭಾನುವಾರ ಬೆಳಗ್ಗೆ ವಿದ್ಯಾರ್ಥಿನಿ ನಿಲಯದಿಂದ ಹೊರಟ ಅವರು ಬೆಳಗ್ಗೆ 9 ಗಂಟೆ ಹೊತ್ತಿಗೆ ಸೇಂಟ್ ಫಿಲೋಮಿನಾ ಆಸ್ಪತ್ರೆ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಅದೇ ವೇಳೆ, ಬಿಳಿ ಬಣ್ಣದ ಸ್ಕಾರ್ಪಿಯೊ ಕಾರಿನಲ್ಲಿ ಮೂವರು ದುಷ್ಕರ್ಮಿಗಳು ವಿಳಾಸ ಕೇಳುವ ನೆಪದಲ್ಲಿ ಯುವತಿಯೊಂದಿಗೆ ಮಾತನಾಡುತ್ತಲೇ ಆಕೆಯನ್ನು ಕಾರಿನೊಳಕ್ಕೆಳೆದುಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ.
ಮುಂದೆ ಆಕೆಯನ್ನು ನಿರ್ಜನ ಪ್ರದೇಶದಲ್ಲಿ ಒಂಟಿ ಮನೆಗೆ ಕರೆದೊಯ್ದು ಮನಬಂದಂತೆ ಥಳಿಸಿ, ಅಮಾನುಷವಾಗಿ ವರ್ತಿಸಿದ್ದಾರೆ. ಬಲವಂತವಾಗಿ ಮದ್ಯ ಕುಡಿಸಿದ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸಂಜೆ ಹೊತ್ತಿಗೆ ಆಕೆಗೆ ಪ್ರಜ್ಞೆ ಬಂದಿದೆ.
ಅದೇ ಮನೆಯಲ್ಲಿ ಕಾಣಿಸಿಕೊಂಡ ಮಹಿಳೆಯೊಬ್ಬರು, ನಗ್ನಾವಸ್ಥೆಯಲ್ಲಿದ್ದ ಆಕೆಗೆ ಬಟ್ಟೆ ತೊಡಿಸಿ ಸಂಜೆ ವೇಳೆಗೆ ಸೇಂಟ್ ಜಾನ್ಸ್ ವೈದ್ಯ ಕಾಲೇಜಿನ ಬಳಿ ಬಿಟ್ಟು ಹೋಗಿದ್ದಾರೆ. ಆಘಾತಕ್ಕೆ ಒಳಗಾಗಿದ್ದ ಆಕೆ ಸುಧಾರಿಸಿಕೊಂಡು ವಿದ್ಯಾರ್ಥಿನಿ ನಿಲಯ ತಲುಪಿದ್ದಾರೆ. ನಂತರ ವಿಷಯ ತಿಳಿದ ವಾರ್ಡನ್ ಆಕೆಯನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಿದರು ಎಂದು ಮೂಲಗಳು ತಿಳಿಸಿವೆ.
ಈ ನಡುವೆ ಯುವತಿಯ ಪೋಷಕರು ನಗರಕ್ಕೆ ಬಂದಿದ್ದು, ಆಕೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿಸಿಕೊಂಡಿದ್ದಾರೆ. ಯುವತಿಯ ಭವಿಷ್ಯದ ದೃಷ್ಟಿಯಿಂದ ಪ್ರಕರಣದ ತನಿಖೆಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications