ಹೈಟೆಕ್ ಪ್ರಚಾರ ಕಾರ್ಯದಲ್ಲಿ ಜೆಡಿಎಸ್ ಮುಂಚೂಣಿ

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಯುವಕರು ಮತ್ತು ನಗರ ಪ್ರದೇಶಗಳ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಇ-ಮೇಲ್, ಎಸ್ಎಂಎಸ್, ಎಫ್ಎಂ ರೆಡಿಯೋ, ಸಿನಿಮಾ ಮಂದಿರಗಳಲ್ಲಿ ಜೆಡಿಎಸ್ ಗೆ ಮತ ನೀಡಿ ಎಂಬ ಕೂಗು ಕೇಳಿಬರುತ್ತಿದೆ.
ಚುನಾವಣೆ ಘೋಷಣೆಯಾದ ತಕ್ಷಣ ವೆಬ್ ಸೈಟ್ ಮೂಲಕ ಪ್ರಚಾರ ಕಾರ್ಯ ಆರಂಭಿಸಿದ ಪಕ್ಷ ಈಗಾಗಲೇ ರಾಜ್ಯದ 2 ಕೋಟಿ ಮತದಾರರನ್ನು ತಲುಪಿದೆ. ಇ-ಮೇಲ್, ಎಸ್ಎಂಎಸ್, ಸಿನಿಮಾ ಮಂದಿರಗಳಲ್ಲಿ ಜನನಾಯಕ ಸಿ.ಡಿ.ಪ್ರದರ್ಶನ, ಮಾಧ್ಯಮಗಳಲ್ಲಿ ಜಾಹೀರಾತು ಹೀಗೆ ಜೆಡಿಎಸ್ ಹೈಟೆಕ್ ಪ್ರಚಾರ ಆರಂಭಿಸಿದೆ.
ಉಳಿದ ಪಕ್ಷಗಳು ರಾಷ್ಟ್ರೀಯ ನಾಯಕರು, ಸ್ಟಾರ್ ಪ್ರಚಾರಕರು ಎಂದು ಅವರ ಕಾರ್ಯ ಯೋಜನೆ ಸಿದ್ಧಪಡಿಸುವ ಹೊತ್ತಿಗೆ ಜೆಡಿಎಸ್ ಮತದಾರರ ಮನೆ ಬಾಗಿಲು ಪ್ರವೇಶಿಸಿದೆ. ದೂರವಾಣಿಯಲ್ಲಿ ಕುಮಾರಸ್ವಾಮಿ ಧ್ವನಿಮುದ್ರಿಕೆ ಇರುವ ಜಾಹೀರಾತು ಕರೆ ಬರುತ್ತಿದೆ.
ರಾಜ್ಯದ 900 ಸಿನಿಮಾ ಮಂದಿರದಲ್ಲಿ ವಿಶ್ರಾಂತಿ ಸಮಯದಲ್ಲಿ ಜನನಾಯಕ ಸಿಡಿ ಪ್ರದರ್ಶಿತವಾಗುತ್ತಿದೆ. 50 ಲಕ್ಷ ಇ-ಮೇಲ್ ಗಳಿಗೆ ಜೆಡಿಎಸ್ ಗೆ ಮತನೀಡಿ ಎಂಬ ಸಂದೇಶ ರವಾನೆಯಾಗಿದೆ. ಎಸ್ಎಂಎಸ್ ಜಾಹೀರಾತು ಆರಂಭವಾಗಿದೆ.
ಹೈಟೆಕ್ ಕಚೇರಿ : ಚುಣಾವಣೆಯ ಪ್ರಚಾರಕ್ಕಾಗಿಯೇ ಹೈಟೆಕ್ ಮಾಧ್ಯಮ ಕ್ಷೇಂದ್ರವನ್ನು ಜೆಡಿಎಸ್ ಪ್ರಾರಂಭಿಸಿದೆ. ಹದಿನೈದು ಮಂದಿಯ ತಂಡ ರಚಿಸಿ ಪ್ರಚಾರ ಕಾರ್ಯದ ಜವಾಬ್ದಾರಿ ವಹಿಸಿದೆ. ಅವರ ಉಸ್ತುವಾರಿಗಾಗಿ ಒಬ್ಬರನ್ನು ನೇಮಿಸಿದೆ.
ನಮ್ಮ ಪಕ್ಷದ ನಾಯಕರು ಪ್ರತಿ ಕ್ಷೇತ್ರಕ್ಕೂ ಸಾಗಿ ಪ್ರಚಾರ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಮೂಹ ಮಾಧ್ಯಮಗಳನ್ನು ಉಪಯೋಗಿಸಿಕೊಂಡು ಪ್ರಚಾರ ಮಾಡುತ್ತಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಗ್ರಾಮೀಣ ಭಾಗಕ್ಕೆ ಮಾತ್ರ ಜೆಡಿಎಸ್ ಸೀಮಿತ ಎಂಬ ಹಣೆಪಟ್ಟಿ ಕಳಚಿಟ್ಟು ಜೆಡಿಎಸ್ ಈ ಬಾರಿ ನಗರ ಮತ್ತು ಐಟಿ-ಬಿಟಿ ವಲಯದ ಜನರನ್ನು ಸೆಳೆಯಲು ಮುಂದಾಗಿದೆ. ಜೆಡಿಎಸ್ ಶ್ರಮ ಎಷ್ಟು ಫಲ ನೀಡಲಿದೆ ಎಂಬುದು ಮೇ 8ರಂದು ಬಹಿರಂಗಗೊಳ್ಳಲಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications