ಹೈಟೆಕ್ ಪ್ರಚಾರ ಕಾರ್ಯದಲ್ಲಿ ಜೆಡಿಎಸ್ ಮುಂಚೂಣಿ

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಯುವಕರು ಮತ್ತು ನಗರ ಪ್ರದೇಶಗಳ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಇ-ಮೇಲ್, ಎಸ್ಎಂಎಸ್, ಎಫ್ಎಂ ರೆಡಿಯೋ, ಸಿನಿಮಾ ಮಂದಿರಗಳಲ್ಲಿ ಜೆಡಿಎಸ್ ಗೆ ಮತ ನೀಡಿ ಎಂಬ ಕೂಗು ಕೇಳಿಬರುತ್ತಿದೆ.
ಚುನಾವಣೆ ಘೋಷಣೆಯಾದ ತಕ್ಷಣ ವೆಬ್ ಸೈಟ್ ಮೂಲಕ ಪ್ರಚಾರ ಕಾರ್ಯ ಆರಂಭಿಸಿದ ಪಕ್ಷ ಈಗಾಗಲೇ ರಾಜ್ಯದ 2 ಕೋಟಿ ಮತದಾರರನ್ನು ತಲುಪಿದೆ. ಇ-ಮೇಲ್, ಎಸ್ಎಂಎಸ್, ಸಿನಿಮಾ ಮಂದಿರಗಳಲ್ಲಿ ಜನನಾಯಕ ಸಿ.ಡಿ.ಪ್ರದರ್ಶನ, ಮಾಧ್ಯಮಗಳಲ್ಲಿ ಜಾಹೀರಾತು ಹೀಗೆ ಜೆಡಿಎಸ್ ಹೈಟೆಕ್ ಪ್ರಚಾರ ಆರಂಭಿಸಿದೆ.
ಉಳಿದ ಪಕ್ಷಗಳು ರಾಷ್ಟ್ರೀಯ ನಾಯಕರು, ಸ್ಟಾರ್ ಪ್ರಚಾರಕರು ಎಂದು ಅವರ ಕಾರ್ಯ ಯೋಜನೆ ಸಿದ್ಧಪಡಿಸುವ ಹೊತ್ತಿಗೆ ಜೆಡಿಎಸ್ ಮತದಾರರ ಮನೆ ಬಾಗಿಲು ಪ್ರವೇಶಿಸಿದೆ. ದೂರವಾಣಿಯಲ್ಲಿ ಕುಮಾರಸ್ವಾಮಿ ಧ್ವನಿಮುದ್ರಿಕೆ ಇರುವ ಜಾಹೀರಾತು ಕರೆ ಬರುತ್ತಿದೆ.
ರಾಜ್ಯದ 900 ಸಿನಿಮಾ ಮಂದಿರದಲ್ಲಿ ವಿಶ್ರಾಂತಿ ಸಮಯದಲ್ಲಿ ಜನನಾಯಕ ಸಿಡಿ ಪ್ರದರ್ಶಿತವಾಗುತ್ತಿದೆ. 50 ಲಕ್ಷ ಇ-ಮೇಲ್ ಗಳಿಗೆ ಜೆಡಿಎಸ್ ಗೆ ಮತನೀಡಿ ಎಂಬ ಸಂದೇಶ ರವಾನೆಯಾಗಿದೆ. ಎಸ್ಎಂಎಸ್ ಜಾಹೀರಾತು ಆರಂಭವಾಗಿದೆ.
ಹೈಟೆಕ್ ಕಚೇರಿ : ಚುಣಾವಣೆಯ ಪ್ರಚಾರಕ್ಕಾಗಿಯೇ ಹೈಟೆಕ್ ಮಾಧ್ಯಮ ಕ್ಷೇಂದ್ರವನ್ನು ಜೆಡಿಎಸ್ ಪ್ರಾರಂಭಿಸಿದೆ. ಹದಿನೈದು ಮಂದಿಯ ತಂಡ ರಚಿಸಿ ಪ್ರಚಾರ ಕಾರ್ಯದ ಜವಾಬ್ದಾರಿ ವಹಿಸಿದೆ. ಅವರ ಉಸ್ತುವಾರಿಗಾಗಿ ಒಬ್ಬರನ್ನು ನೇಮಿಸಿದೆ.
ನಮ್ಮ ಪಕ್ಷದ ನಾಯಕರು ಪ್ರತಿ ಕ್ಷೇತ್ರಕ್ಕೂ ಸಾಗಿ ಪ್ರಚಾರ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಮೂಹ ಮಾಧ್ಯಮಗಳನ್ನು ಉಪಯೋಗಿಸಿಕೊಂಡು ಪ್ರಚಾರ ಮಾಡುತ್ತಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಗ್ರಾಮೀಣ ಭಾಗಕ್ಕೆ ಮಾತ್ರ ಜೆಡಿಎಸ್ ಸೀಮಿತ ಎಂಬ ಹಣೆಪಟ್ಟಿ ಕಳಚಿಟ್ಟು ಜೆಡಿಎಸ್ ಈ ಬಾರಿ ನಗರ ಮತ್ತು ಐಟಿ-ಬಿಟಿ ವಲಯದ ಜನರನ್ನು ಸೆಳೆಯಲು ಮುಂದಾಗಿದೆ. ಜೆಡಿಎಸ್ ಶ್ರಮ ಎಷ್ಟು ಫಲ ನೀಡಲಿದೆ ಎಂಬುದು ಮೇ 8ರಂದು ಬಹಿರಂಗಗೊಳ್ಳಲಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications