ಬಾಂಬ್ ಸ್ಫೋಟ: ಮತ್ತಷ್ಟು ಸ್ಫೋಟಕ ಮಾಹಿತಿಗಳು
ಬೆಂಗಳೂರು, ಎ.24: ಬೆಂಗಳೂರು ಸ್ಫೋಟದ ಕುಕೃತ್ಯ ಯಾರದು ಎಂಬುದನ್ನು ಪತ್ತೆಹಚ್ಚುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿರುವ ಬೆನ್ನಿಗೇ ಮತ್ತಷ್ಟು ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿವೆ. ನಿಷೇಧಿತ ಅಲ್ ಉಮ್ಮಾ ಸಂಘಟನೆಯ ಕೈವಾಡ ರುಜುವಾತಾಗಿದೆ.
* ಸ್ಪೋಟಕ್ಕೆ ಬಳಸಲಾಗಿದ್ದ ಸುಜುಕಿ ಬೈಕ್ ಮೂಲ ಮಾಲೀಕ ಪ್ರಕಾಶ್ 3 ವರ್ಷದ ಹಿಂದೆ ಅನ್ವರ್ ಪಾಷಾ ಎಂಬುವವನಿಗೆ ಅದನ್ನು ಮಾರಾಟ ಮಾಡಿದ್ದರು. ಸದರಿ ಅನ್ವರನನ್ನು ಪತ್ತೆ ಹಚ್ಚಿ, ವಿಚಾರಣೆಗೊಳಪಡಿಸಿದಾಗ ಒಂದು ಮೊಬೈಲ್ ನಂಬರ್ ನೀಡಿದ್ದಾನೆ. ತಕ್ಷಣ, ಪೊಲೀಸರು ಘಟನೆಯ ನಂತರ ಆ ಸ್ಥಳದಲ್ಲಿ ಚಾಲ್ತಿಯಲ್ಲಿದ್ದ ಅನುಮಾನಾಸ್ಪದ ಸಂಖ್ಯೆಯಗಳೊಂದಿಗೆ ತಾಳೆ ಹಾಕಿದಾಗ ... ಉಗ್ರರ ಜಾಡು ಗೋಚರವಾಗಿದೆ.

* ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿ ಸಮೀಪ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಶಂಕಿತ ಆರೋಪಿಗಳನ್ನು ನಗರದ ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದನ್ನು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ ಕರ್ ಖಚಿತಪಡಿಸಿದ್ದಾರೆ.
* ತಮಿಳುನಾಡಿನ ಚೆನ್ನೈ ಹಾಗೂ ಬೆಂಗಳೂರು ನಗರದಲ್ಲಿ ಶಂಕಿತರನ್ನು ವಶಕ್ಕೆ ಪಡೆದಿರುವ ಪೊಲೀಸರು ಅಜ್ಞಾತ ಸ್ಥಳವೊಂದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಶಂಕಿತರೆಲ್ಲ ತಮಿಳುನಾಡಿನ ಮೂಲದ ನಿಷೇಧಿತ ಉಗ್ರ ಸಂಘಟನೆಯೊಂದರ ಸದಸ್ಯರು ಎಂದು ಹೇಳಲಾಗಿದೆ.
* ಬಾಂಬ್ ತಯಾರಿಕೆ ಬಗ್ಗೆ ಮತ್ತು ಉಗ್ರವಾದಿ ಸಂಘಟನೆಗಳ ಜತೆ ನಂಟು ಹೊಂದಿರುವ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
* ಬಾಂಬ್ ಸ್ಫೋಟಕ್ಕೆ ಬಳಸಿದ್ದ ದ್ವಿಚಕ್ರ ವಾಹನದ ಸುಳಿವನ್ನಾಧರಿಸಿ ತಮಿಳುನಾಡಿಗೆ ತೆರಳಿದ ನಗರದ ಜಂಟಿ ಪೊಲೀಸ್ ಆಯುಕ್ತ ಎಸ್. ಮುರುಗನ್ ನೇತೃತ್ವದ ತಂಡ ಆರು ಮಂದಿಯನ್ನು ಬಂಧಿಸಿ, ನಗರಕ್ಕೆ ಕರೆತಂದಿದೆ. ಅವರನ್ನು ತೀವ್ರ ವಿಚಾರಣೆಗ ಒಳಪಡಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications