ಬಿಜೆಪಿ ಮೇಲೆ ಸಂಕೇಶ್ವರ್ ಎಸೆದ ಅವ್ಯವಹಾರದ ಬಾಂಬ್

ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರು ಯಡಿಯೂರಪ್ಪನವರಿಂದ ಹಣ ಕೇಳಿದ್ದರು ಎಂದು ಕೆಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಕುಮಾರ್ ಅವರು ಆರೋಪ ಮಾಡಿದ ಕೆಲ ದಿನಗಳಲ್ಲಿಯೇ ಕೆಜೆಪಿಯನ್ನು ಸೇರಿರುವ ಉದ್ಯಮಿ ವಿಜಯ ಸಂಕೇಶ್ವರ್ ಅವರು ಬಿಜೆಪಿಯಲ್ಲಿ ನಡೆದ ಹಣದ ಅವ್ಯವಹಾರದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದಾರೆ.
ಆ ಚೀಟಿಯಲ್ಲಿ, "ಅಶೋಕ್ ಅವರಿಗೆ, ಈಗಾಗಲೆ ತಮ್ಮ ಬಳಿ ಚರ್ಚಿಸಿದಂತೆ ಇವರಿಗೆ, ಅಧ್ಯಕ್ಷರು ಬಿಜೆಪಿ ಕರ್ನಾಟಕ, 5 ಕೋಟಿ ರು. ಉಳಿಕೆ ಹಣ ನೀಡುವುದು" ಎಂದು ಬರೆಯಲಾಗಿದ್ದು, ಕೆಳಗಡೆ ಸಹಿ ಇರುವುದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರದೇ ಎಂದು ಸಂಕೇಶ್ವರ್ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಇದು ಕೇವಲ ಒಂದು ಉದಾಹರಣೆ ಮಾತ್ರ. ಇಂತಹ ಅನೇಕ ಅವ್ಯವಹಾರಗಳು ಬಿಜೆಪಿ ನಾಯಕರ ನಡುವೆ ಡಿವಿಎಸ್ ಮುಖ್ಯಮಂತ್ರಿಯಾಗಿದ್ದಾಗ ನಡೆದಿದೆ. ಈ ಅವ್ಯವಹಾರಕ್ಕೆ ಯಾವುದೇ ದಾಖಲೆಗಳಿಲ್ಲ. ಒಂದು ಸುಳಿವು ಮಾತ್ರ ನೀಡಿದ್ದೇನೆ, ಉಳಿದವನ್ನೆಲ್ಲ ಕಂಡುಹಿಡಿಯಬೇಕಾದವರು ನೀವು ಎಂದು ಪತ್ರಕರ್ತರ ಮೇಲೆಯೇ ಜವಾಬ್ದಾರಿಯನ್ನು ಹೊರಿಸಿದ್ದಾರೆ.
ಈ ರೀತಿ ಆರೋಪವನ್ನು ಸಂಕೇಶ್ವರ್ ಅವರು ಮಾಡಿದ್ದಾರಾದರೂ, ಆ ಹಣ ಯಾರಿಗೆ ಸೇರಿದ್ದು, ಯಾವ ರೀತಿ ಯಾರಿಗೆ ನೀಡಲಾಗಿದೆ, ಹಣ ಎಲ್ಲಿಂದ ಬಂದಿದ್ದು, ಹಣವನ್ನು ಯಾಕೆ ನೀಡಿದ್ದು ಎಂಬ ಪ್ರಶ್ನೆಗಳಿಗೆ ಯಾವುದೇ ನಿಖರವಾದ ಉತ್ತರ ನೀಡಿಲ್ಲ. ಈ ಎಲ್ಲ ವಿವರಗಳನ್ನು ಸದಾನಂದ ಗೌಡ, ಅಶೋಕ್ ಮತ್ತು ಆಗ ರಾಜ್ಯಾಧ್ಯಕ್ಷರಾಗಿದ್ದ ಈಶ್ವರಪ್ಪನವರಿಗೆ ಕೇಳಿ ಎಂದು ನುಣುಚಿಕೊಳ್ಳುತ್ತಿದ್ದಾರೆ.
ಚುನಾವಣೆ ದಿನಾಂಕ (ಮೇ 5) ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಕೆಜೆಪಿ ನಾಯಕರು ಬಿಜೆಪಿ ನಾಯಕರ ಮೇಲೆ ಹಣದ ಅವ್ಯವಹಾರದ ನಡುವೆ ಆರೋಪಗಳನ್ನು ಹೊರಿಸುತ್ತಿದ್ದಾರೆ. ಧನಂಜಯ್ ಕುಮಾರ್ ಅವರು ಅಡ್ವಾಣಿ ವಿರುದ್ಧ ಮಾಡಿದ್ದ ಆರೋಪಕ್ಕೆ ಯಡಿಯೂರಪ್ಪನವರು ಕ್ಷಮೆ ಕೂಡ ಕೋರಿದ್ದರು. ಅಚ್ಚರಿಯೆಂಬಂತೆ, ಬಿಜೆಪಿ ನಾಯಕರು ಈ ಎಲ್ಲ ಆರೋಪಗಳಿಗೆ ಮೌನ ಉತ್ತರ ನೀಡುತ್ತಿದ್ದಾರೆ.
ಡಿವಿಎಸ್ ಪ್ರತಿಕ್ರಿಯೆ : ಸಂಕೇಶ್ವರ್ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಪ್ರತಿಕ್ರಿಯಿಸಿರುವ ಡಿವಿ ಸದಾನಂದ ಗೌಡ ಅವರು, ಬಿಜೆಪಿ ನಾಯಕರಿಂದ ಯಾವುದೇ ಹಣದ ದುರುಪಯೋಗ ಆಗಿಲ್ಲ. ಇದಕ್ಕೆ ಸಂಕೇಶ್ವರ್ ಅವರೇ ಸ್ಪಷ್ಟೀಕರಣ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪ ಮುಖ್ಯಮಂತ್ರಿ ಮತ್ತು ಮಾಜಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಅವರು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications