ಬಿಜೆಪಿ ಮೇಲೆ ಸಂಕೇಶ್ವರ್ ಎಸೆದ ಅವ್ಯವಹಾರದ ಬಾಂಬ್

ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರು ಯಡಿಯೂರಪ್ಪನವರಿಂದ ಹಣ ಕೇಳಿದ್ದರು ಎಂದು ಕೆಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಕುಮಾರ್ ಅವರು ಆರೋಪ ಮಾಡಿದ ಕೆಲ ದಿನಗಳಲ್ಲಿಯೇ ಕೆಜೆಪಿಯನ್ನು ಸೇರಿರುವ ಉದ್ಯಮಿ ವಿಜಯ ಸಂಕೇಶ್ವರ್ ಅವರು ಬಿಜೆಪಿಯಲ್ಲಿ ನಡೆದ ಹಣದ ಅವ್ಯವಹಾರದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದಾರೆ.
ಆ ಚೀಟಿಯಲ್ಲಿ, "ಅಶೋಕ್ ಅವರಿಗೆ, ಈಗಾಗಲೆ ತಮ್ಮ ಬಳಿ ಚರ್ಚಿಸಿದಂತೆ ಇವರಿಗೆ, ಅಧ್ಯಕ್ಷರು ಬಿಜೆಪಿ ಕರ್ನಾಟಕ, 5 ಕೋಟಿ ರು. ಉಳಿಕೆ ಹಣ ನೀಡುವುದು" ಎಂದು ಬರೆಯಲಾಗಿದ್ದು, ಕೆಳಗಡೆ ಸಹಿ ಇರುವುದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರದೇ ಎಂದು ಸಂಕೇಶ್ವರ್ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಇದು ಕೇವಲ ಒಂದು ಉದಾಹರಣೆ ಮಾತ್ರ. ಇಂತಹ ಅನೇಕ ಅವ್ಯವಹಾರಗಳು ಬಿಜೆಪಿ ನಾಯಕರ ನಡುವೆ ಡಿವಿಎಸ್ ಮುಖ್ಯಮಂತ್ರಿಯಾಗಿದ್ದಾಗ ನಡೆದಿದೆ. ಈ ಅವ್ಯವಹಾರಕ್ಕೆ ಯಾವುದೇ ದಾಖಲೆಗಳಿಲ್ಲ. ಒಂದು ಸುಳಿವು ಮಾತ್ರ ನೀಡಿದ್ದೇನೆ, ಉಳಿದವನ್ನೆಲ್ಲ ಕಂಡುಹಿಡಿಯಬೇಕಾದವರು ನೀವು ಎಂದು ಪತ್ರಕರ್ತರ ಮೇಲೆಯೇ ಜವಾಬ್ದಾರಿಯನ್ನು ಹೊರಿಸಿದ್ದಾರೆ.
ಈ ರೀತಿ ಆರೋಪವನ್ನು ಸಂಕೇಶ್ವರ್ ಅವರು ಮಾಡಿದ್ದಾರಾದರೂ, ಆ ಹಣ ಯಾರಿಗೆ ಸೇರಿದ್ದು, ಯಾವ ರೀತಿ ಯಾರಿಗೆ ನೀಡಲಾಗಿದೆ, ಹಣ ಎಲ್ಲಿಂದ ಬಂದಿದ್ದು, ಹಣವನ್ನು ಯಾಕೆ ನೀಡಿದ್ದು ಎಂಬ ಪ್ರಶ್ನೆಗಳಿಗೆ ಯಾವುದೇ ನಿಖರವಾದ ಉತ್ತರ ನೀಡಿಲ್ಲ. ಈ ಎಲ್ಲ ವಿವರಗಳನ್ನು ಸದಾನಂದ ಗೌಡ, ಅಶೋಕ್ ಮತ್ತು ಆಗ ರಾಜ್ಯಾಧ್ಯಕ್ಷರಾಗಿದ್ದ ಈಶ್ವರಪ್ಪನವರಿಗೆ ಕೇಳಿ ಎಂದು ನುಣುಚಿಕೊಳ್ಳುತ್ತಿದ್ದಾರೆ.
ಚುನಾವಣೆ ದಿನಾಂಕ (ಮೇ 5) ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಕೆಜೆಪಿ ನಾಯಕರು ಬಿಜೆಪಿ ನಾಯಕರ ಮೇಲೆ ಹಣದ ಅವ್ಯವಹಾರದ ನಡುವೆ ಆರೋಪಗಳನ್ನು ಹೊರಿಸುತ್ತಿದ್ದಾರೆ. ಧನಂಜಯ್ ಕುಮಾರ್ ಅವರು ಅಡ್ವಾಣಿ ವಿರುದ್ಧ ಮಾಡಿದ್ದ ಆರೋಪಕ್ಕೆ ಯಡಿಯೂರಪ್ಪನವರು ಕ್ಷಮೆ ಕೂಡ ಕೋರಿದ್ದರು. ಅಚ್ಚರಿಯೆಂಬಂತೆ, ಬಿಜೆಪಿ ನಾಯಕರು ಈ ಎಲ್ಲ ಆರೋಪಗಳಿಗೆ ಮೌನ ಉತ್ತರ ನೀಡುತ್ತಿದ್ದಾರೆ.
ಡಿವಿಎಸ್ ಪ್ರತಿಕ್ರಿಯೆ : ಸಂಕೇಶ್ವರ್ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಪ್ರತಿಕ್ರಿಯಿಸಿರುವ ಡಿವಿ ಸದಾನಂದ ಗೌಡ ಅವರು, ಬಿಜೆಪಿ ನಾಯಕರಿಂದ ಯಾವುದೇ ಹಣದ ದುರುಪಯೋಗ ಆಗಿಲ್ಲ. ಇದಕ್ಕೆ ಸಂಕೇಶ್ವರ್ ಅವರೇ ಸ್ಪಷ್ಟೀಕರಣ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪ ಮುಖ್ಯಮಂತ್ರಿ ಮತ್ತು ಮಾಜಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಅವರು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications