ರಾಹುಲ್ ಗಾಂಧಿಗೆ ಸವಾಲು ಹಾಕಿದ ಸಿಎಂ ಶೆಟ್ಟರ್

ಗುರುರವಾರ ಸಂಜೆ ಕುಂದಾಪುರ ತಾಲೂಕಿನ ಉಪ್ಪುಂದದಲ್ಲಿ ಚುನಾವಣಾ ಪ್ರಚಾರ ಸಣೆ ಉದ್ದೇಶಿಸಿ ಮಾತನಾಡಿದ ಸಿಎಂ ಶೆಟ್ಟರ್, ಯಾವ ಸಾಧನೆ ಮಾಡದಿದ್ದರೂ ಬಿಜೆಪಿ ಸರ್ಕಾರವನ್ನು ಟೀಕಿಸುವ ಪ್ರವೃತ್ತಿಯನ್ನು ಕಾಂಗ್ರೆಸಿಗರು ರೂಢಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ದೆಹಲಿಯಿಂದ ಬಂದು ರಾಜ್ಯ ಸರ್ಕಾರದ ಬಗ್ಗೆ ಟೀಕಿಸುವ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾಡಿದ ಸಾಧನೆಯ ಅಂಕಿ-ಅಂಶ ತರಲಿ, ಬಿಜೆಪಿ ಸರ್ಕಾರದ ಸಾಧನೆ ನಾನು ವಿವರಿಸುತ್ತೇನೆ. ಬಹಿರಂಗವಾಗಿ ಒಂದೇ ವೇದಿಕೆಯಲ್ಲಿ ಈ ಚರ್ಚೆ ನಡೆಯಲಿ ಎಂದು ಸವಾಲು ಹಾಕಿದರು.
ರಾಜ್ಯ ಸರ್ಕಾರ ಗ್ರಾಮೀಣ ಭಾಗದ ರಸ್ತೆ ನಿರ್ಮಾಣ, ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಗ್ರಾಮ ಸಡಕ್ ಯೋಜನೆ ಅನ್ವಯ ಮಾಡಿಕೊಡಿ ಎಂದು ಐದು ವರ್ಷಗಳಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದೆ. 10,000 ಹಳ್ಳಿಗಳ ಒಂದು ಕಿ.ಮೀ ರಸ್ತೆಯನ್ನು ಸರ್ಕಾರ ನಿರ್ಮಿಸಿಕೊಟ್ಟಿಲ್ಲ ಎಂದು ದೂರಿದರು.
ರಾಜ್ಯ ಸರ್ಕಾರ ವಿವಿಧ ಯೋಜೆನಗಳ ಮೂಲಕ ಪ್ರತಿ ವಿಧಾನಸಭಾ ಕ್ಷೇತ್ರದ 50 ಕಿ.ಮೀ.ರಸ್ತೆಯನ್ನು ಅಭಿವೃದ್ಧಿ ಪಡಿಸಿದೆ ಇದು ಸಾಧನೆ ಅಲ್ಲವೇ ಎಂದು ಅವರು ಪ್ರಶ್ನಿಸಿದರು. ಕೆಲಸ ಮಾಡದ ಕಾಂಗ್ರೆಸ್ ಮುಖಂಡರು ಅಪಾದನೆಗಳನ್ನು ಚೆನ್ನಾಗಿ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.
ಮಾಜಿ ಮುಖ್ಯಮಂತ್ರಿ ಸದಾನಂ ಗೌಡ ಮತ್ತು ನನ್ನ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿವೆ. ರೈತರು ಸೇರಿದಂತೆ ಎಲ್ಲಾ ವರ್ಗಗಳ ಅಭಿವೃದ್ದಿಗೆ ಕ್ರಮ ಕೈಗೊಂಡಿದ್ದೇವೆ. ಚುನಾವಣೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ನೀಡುವಂತೆ ಅವರು ಮನವಿ ಮಾಡಿದರು.
ಮಹಿಳೆಯರಿಗೆ ಆದ್ಯತೆ ನೀಡಿಲ್ಲ : ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಪಡೆಯಲು ಮಹಿಳೆಯರು ಭಾರೀ ಪೈಪೋಟಿ ನಡೆಸಿದ್ದರು. ಸದ್ಯ ಬಿಜೆಪಿಯಲ್ಲಿ ಮಹಿಳಾ ಪರವಾದ ಕೂಗು ಬಿಜೆಪಿಯಲ್ಲಿ ಕೇಳಿಬಂದಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಟಿಕೆಟ್ ಹಂಚಿಕೆಯಲ್ಲಿ ಆದ್ಯತೆ ನೀಡಿಲ್ಲ ಎಂದು ಲೋಕಸಭೆ ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಎದುರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಆದ್ಯತೆ ನೀಡುತ್ತೇವೆ ಎಂದು ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಸುಷ್ಮಾ ಕೋಪ ಬಿಜೆಪಿ ಚುನಾವಣಾ ಪ್ರಚಾರದ ಮೇಲೆ ಬೀಳುವುದು ಬೇಡ. ಪ್ರಚಾರಕ್ಕೆ ಬರಲಿ ಎಂದು ರಾಜ್ಯ ನಾಯಕರು ಮನವಿ ಮಾಡಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications