ಅಧಿಕಾರ ಕಾಂಗೈಗೇ; ಆದ್ರೂ ಕುಮಾರಸ್ವಾಮಿಯೇ ಸಿಎಂ!
ನವದೆಹಲಿ, ಏ.26: ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಕರ್ನಾಟಕದ ರಾಜಕೀಯದ ಬಗ್ಗೆ 'ಸಿಎನ್ಎನ್-ಐಬಿಎನ್ ಮತ್ತು ದಿ ವೀಕ್' ಸಮ್ಮಿಶ್ರ ಸಮೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. Centre for the Study of Developing Societies (CSDS) ಸಂಸ್ಥೆಯು ಈ ಸಮೀಕ್ಷೆಯನ್ನು ನಡೆಸಿದೆ.
ಮೇ 5ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಬಿಜೆಪಿಗೆ ಭಾರೀ ಸೋಲು ಎನ್ನುತ್ತಿದೆ ತಾಜಾ ಸಮೀಕ್ಷೆ. ಇದು ಇತ್ತೀಚಿಗೆ ಪ್ರಕಟಗೊಂಡ ಕೆಲ ಸಮೀಕ್ಷೆಗಳು ಘೋಷಿಸಿದ್ದ ಫಲಿತಾಂಶವನ್ನೇ ಮುಂದುವರಿಸಿದ್ದು, ಟ್ರೆಂಡ್ ಹಾಗೇ ಇದೆ.
ಆದರೆ ಒಂದೇ ವ್ಯತ್ಯಾಸ, ಮುಖ್ಯಮಂತ್ರಿ ಹುದ್ದೆಯಲ್ಲಿ ಜೆಡಿಎಸ್ ಪಕ್ಷದ ಎಚ್ಡಿ ಕುಮಾರಸ್ವಾಮಿಯನ್ನು ಪ್ರತಿಷ್ಠಾಪಿಸಿದ್ದು, ಅವರೇ ಸಿಎಂ ಸೀಟಿಗೆ ಫೇವರಿಟ್ ಎಂದಿದೆ. ಕುತೂಹಲಕಾರಿ ಸಂಗತಿಯೆಂದರೆ ಕೆಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಎರಡನೇ ನೆಚ್ಚಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಇನ್ನು, ಸಿದ್ದರಾಮಯ್ಯನವರು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.
ಈ ಸಮೀಕ್ಷೆಯ ಸಂಬಂಧ ಕೆಲವೊಂದು ಮುಖ್ಯಾಂಶಗಳು ಹೀಗಿವೆ: ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಮುನ್ನವೇ ನಡೆಸಲಾದ ಸಮೀಕ್ಷೆಯಿದು. ಈ ಸಮೀಕ್ಷೆಯನ್ನು ರಾಜ್ಯದ 75 ವಿಧಾನಸಭಾ ಕ್ಷೇತ್ರಗಳ 294 ಸ್ಥಳಗಳಲ್ಲಿ 4198 ಜನರನ್ನು ಮಾತ್ರವೇ ಸಂದರ್ಶಿಸಿ ಸಿದ್ಧಪಡಿಸಲಾಗಿದೆ. ಆದರೆ ಅದನ್ನೇ ಆಧಾರವಾಗಿಸಿಕೊಂಡು, ಎಲ್ಲ 224 ಸ್ಥಾನಗಳಿಗೂ ಅನ್ವಯಿಸಿಕೊಂಡು ಫಲಿತಾಂಶ ಪ್ರಕಟಿಸಲಾಗಿದೆ.

ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ?
ಕಾಂಗ್ರೆಸ್ ಸ್ಥಾನ ಗಳಿಕೆ 117 - 129

ಆಡಳಿತಾರೂಢ ಬಿಜೆಪಿ ಪಾಲಿಗೆ ಎಷ್ಟು?
ಬಿಜೆಪಿಗೆ 39-49

ಜೆಡಿಎಸ್ ಎಷ್ಟು ಗೆಲ್ಲಬಹುದು?
ಜೆಡಿಎಸ್ 34- 44

ಕಣದಲ್ಲಿರುವ ಇನ್ನಿತರೆ ಪಕ್ಷಗಳ ಸಾಧನೆ ಏನು?
ಕೆಜೆಪಿ ಸೇರಿದಂತೆ ಇತರೆ ಪಕ್ಷಗಳು: 14-22

ಇನ್ನೂ ಒಂದಷ್ಟು ಹೈಲೈಟ್ಸ್:
ಸಮೀಕ್ಷೆಯಲ್ಲಿ ನೆಚ್ಚಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಶೇ. 18ರಷ್ಟು ಜನ ಕುಮಾರಸ್ವಾಮಿಗೆ ಜೈ ಎಂದಿದ್ದರೆ, ಶೇ. 10ರಷ್ಟು ಮಂದಿಯ ಬೆಂಬಲ ಕೆಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಪಾಲಾಗಿದೆ. ಶೇ. 8 ರಷ್ಟು ಮಂದಿ ಸಿದ್ದರಾಮಯ್ಯ ಜತೆಗಿದ್ದಾರೆ.
ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಕಾಂಗ್ರೆಸ್ ಶೇ. 2ರಷ್ಟು ಹೆಚ್ಚು ಮತ ಪಡೆದುಕೊಳ್ಳಲಿದೆ. ಬಿಜೆಪಿಗೆ ಶೇ. 11ರಷ್ಟು ಮತ ನಷ್ಟ. ಜೆಡಿಎಸ್ ಗೆ ಶೇ. 1ರಷ್ಟು ಹೆಚ್ಚು ಮತ ಪ್ರಾಪ್ತಿಯಾಗಲಿದೆ. ಇನ್ನು ಕೆಜೆಪಿ ಶೇ. 7 ಮತ ಪಡೆದು ಬಿಜೆಪಿಗೆ ಅಡ್ಡಗಾಲಾಗಲಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications