ಸಿದ್ದುಜೀ ಯಾವ ಲೋಕಾಯುಕ್ತ ವರದಿ ಹೇಳ್ತೀರಾ?
ಅರಕಲಗೂಡು, ಏ.26: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೇ ಲೋಕಾಯುಕ್ತ ವರದಿ ಅನುಷ್ಠಾನಕ್ಕೆ ತಂದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಘೋಷಿಸಿದರು. ಆದರೆ, ಯಾವ ಕಾಲದ ವರದಿ ಎಂದರೆ ಉತ್ತರಿಸದೆ ನುಣಚಿಕೊಂಡರು. ಲೋಕಾಯುಕ್ತ ವರದಿ ಪ್ರಕಾರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿರುವ ಅಕ್ರಮ, ಭ್ರಷ್ಟಾಚಾರದ ಬಗ್ಗೆ ಕೂಡಾ ವಿಸ್ತಾರವಾಗಿ ವಿವರಿಸಲಾಗಿದೆ.
ಅಂದಿನ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರ ಕಾಲದಿಂದ ಯಡಿಯೂರಪ್ಪ ಅವರ ಕಾಲದ ತನಕ ಭ್ರಷ್ಟತನವನ್ನು ಬಯಲಿಗೆಳೆದು ವರದಿಯನ್ನು ಯುವಿ ಸಿಂಗ್, ಸಂತೋಷ್ ಹೆಗ್ಡೆ ಆವರ ತಂಡ ತಯಾರಿಸಿತ್ತು. ಈಗ ಲೋಕಾಯುಕ್ತ ವರದಿ ಜಾರಿಗೆ ತಂದರೆ ಕಾಂಗ್ರೆಸ್ ಸಿಎಂಗಳಾದ ಎಸ್ಸೆಂ ಕೃಷ್ಣ, ಧರಂ ಸಿಂಗ್ ಅವರಿಗೂ ಬಿಸಿ ತಟ್ಟಲಿದೆ ಎಂಬ ಕಾಮನ್ ಸೆನ್ಸ್ ಮರೆತು ಸಿದ್ದು ಹೇಳಿದ ಡೈಲಾಗ್ ಕಾಂಗ್ರೆಸ್ ನಾಯಕರಿಗೆ ಇರಸು ಮುರುಸು ತಂದಿರುವುದಂತೂ ನಿಜ.

ಅರಕಲಗೂಡು ಪಟ್ಟಣದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ಉದ್ಘಾಟಿಸಿ ಶುಕ್ರವಾರ (ಏ.26) ಸಿದ್ದರಾಮಯ್ಯ ಮಾತನಾಡಿದರು, ಕಳೆದ ಐದು ವರ್ಷಗಳಲ್ಲಿ ರಾಜ್ಯ ಆಳಿದ ಬಿಜೆಪಿ ಪಕ್ಷ ತನ್ನ ಸ್ವಾರ್ಥಕ್ಕಾಗಿ ದುರಾಡಳಿತ ನಡೆಸಿದೆ. ಇದರ ಪ್ರತಿಫಲವೇ ರಾಜ್ಯ ಒಂದು ಲಕ್ಷ ಕೋಟಿಗೂ ಮೀರಿ ಸಾಲ ಮಾಡಿದೆ. ಇದು ರಾಜ್ಯ ಜನತೆಯ ಮೇಲಿದೆ ಎಂದು ನೊಂದು ಕೊಂಡರು.
ರಾಜ್ಯಕ್ಕೆ ಅಂಟಿರುವ ಕೊಳೆಯನ್ನು ತೊಳೆಯಲು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕಲ್ಪಿಸಿ ಎಂದು ಮನವಿ ಮಾಡಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗಳಿಸಿರುವ ಅಕ್ರಮ ಆಸ್ತಿ ರಕ್ಷಿಸಿಕೊಳ್ಳುವ ಸಲುವಾಗಿ ಕೆಜೆಪಿ ಪಕ್ಷ ಕಟ್ಟಿದ್ದಾರೆ. ಈ ಪಕ್ಷದ ವತಿಯಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು ಎಷ್ಟರಮಟ್ಟಿಗೆ ಸಮರ್ಥರು, ಪ್ರಾಮಾಣಿಕರು ಎಂದು ಊಹಿಸಿಕೊಳ್ಳಿ ಎಂದರು.
ಪುಟ್ಟಸ್ವಾಮಿಗೆ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡು ಎಂದು ಹೇಳಿದ್ದೇನೆ ವಿನಹ ಟಿಕೆಟ್ ಕೊಡುವುದಾಗಿ ಯಾವುದೇ ಭರವಸೆ ನೀಡಿರಲಿಲ್ಲ. ಅದನ್ನು ದಿಕ್ಕರಿಸಿ ಕೆಜೆಪಿ ಪಕ್ಷದಲ್ಲಿ ಚುನಾವಣೆಗೆ ನಿಂತಿರುವ ಪುಟ್ಟಸ್ವಾಮಿ ಗೆಲುವು ಅಸಾಧ್ಯ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುಗೆ ಮತ ನೀಡಿ ಗೆಲುವು ತಂದುಕೊಟ್ಟರೇ ಅದು ಸಿದ್ಧರಾಮಯ್ಯನ ಗೆಲುವು ಆಗುತ್ತದೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಅವರು ಸ್ಪಷ್ಟಪಡಿಸಿದರು.
ಜೆಡಿಎಸ್ ಪಕ್ಷ ಪ್ರಾಬಲ್ಯಕ್ಕೆ ಬ್ರೇಕ್: ಜೆಡಿಎಸ್ ಅಧಿಕಾರದ ಕನಸು ಕಾಣುತ್ತಿದೆ. ಕೇವಲ ಅಪ್ಪಮಕ್ಕಳ ಪಕ್ಷಕ್ಕೆ ಜನತೆ ಮುಂದೆ ಬೆಂಬಲಿಸಲಾರರು. ರಾಜ್ಯದಲ್ಲಿ ಸುಮಾರು 20 ಸ್ಥಾನಗಳನ್ನು ಮಾತ್ರ ಜೆಡಿಎಸ್ ಪಡೆಯಲಿದೆ. ಹಾಸನ ಜಿಲ್ಲೆಯಲ್ಲಿಯೇ ಕೇವಲ ಇಬ್ಬರು ಶಾಸಕರಾಗುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.
ಶಾಸಕ ಮಂಜು ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ದೊಡ್ಡಪ್ರಮಾಣದ ಬೆಂಬಲ ವ್ಯಕ್ತವಾಗಿದ್ದು,ಈ ಗೆಲುವು ಸಿದ್ದರಾಮಯ್ಯನವರಿಗೆ ಸೇರಲಿದೆ.ಮುಂದಿನ ದಿನಗಳಲ್ಲಿಯೂ ಕೂಡ ಅವರ ಪರವಾಗಿ ನಿಂತು ಮುಖ್ಯಮಂತ್ರಿಮಾಡಲು ಶ್ರಮಿಸುವುದಾಗಿ ಭರವಸೆ ನೀಡಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications