ಚಿಕ್ಕಮಗಳೂರಲ್ಲಿ ಚೊಕ್ಕ ಭಾಷಣ ಮಾಡಿದ ಸೋನಿಯಾ

Sonia Gandhi
ಚಿಕ್ಕಮಗಳೂರು, ಏ. 27 : "ಜನರ ಹಿತವನ್ನು ಕಡೆಗಣಿಸಿ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿಕೊಂಡು ಕಾಲ ಕಳೆಯುವ ಬಿಜೆಪಿ ಪಕ್ಷ ನಿಮಗೆ ಬೇಡ". ಜನರ ಸಂಕಷ್ಟ ಬಗೆಹರಿಸಿ ಸ್ಥಿರವಾದ ಸರ್ಕಾರವನ್ನು ನಾವು ನೀಡುತ್ತೇವೆ. ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ಬೆಂಬಲ ನೀಡಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ.

ವಿಧಾನಸಭೆ ಪ್ರಚಾರಕ್ಕಾಗಿ ಚಿಕ್ಕಮಗಳೂರಿಗೆ ಶನಿವಾರ ಆಗಮಿಸಿದ ಅವರು, "ಎಲ್ಲರಿಗೂ ನಮಸ್ಕಾರ" ಎಂದು ಕನ್ನಡ ಹೇಳುವ ಮೂಲಕ ಭಾಷಣ ಆರಂಭಿಸಿದರು. ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದ ದುರಾಡಳಿತ ತೊಗಿಲಸಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಕೋರಿದರು.

ಉದ್ಯೋಗ ಸೃಷ್ಠಿ, ಕೃಷಿಕರಿಗೆ ಪ್ರೋತ್ಸಾಹ, ಯುವಕರಿಗೆ ಆದ್ಯತೆ ಕಾಂಗ್ರೆಸ್ ಪಕ್ಷದ ಧ್ಯೇಯಗಳಾಗಿವೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವುದಾಗಿ ಅವರು ತಿಳಿಸಿದರು.

ಕೇಂದ್ರ ಯುಪಿಎ ಸರ್ಕಾರ ರೈತರಿಗೆ ಸಹಾಯ ಮಾಡಲು ಹಲವಾರು ಯೋಜನೆಗಳನ್ನು ಪ್ರಕಟಿಸಿತು ಆದರೆ, ರಾಜ್ಯ ರೈತರ ಹಿತ ಮರೆತ ರಾಜ್ಯ ಬಿಜೆಪಿ ಸರ್ಕಾರ ಅವುಗಳನ್ನು ಜಾರಿಗೆ ತರಲು ಆಸಕ್ತಿ ತೋರಲಿಲ್ಲ ಎಂದು ಸೋನಿಯಾ ಗಾಂಧಿ ಆರೋಪಿಸಿದರು.

ರಾಜ್ಯದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಇಂತಹ ಸರ್ಕಾರ ನಮಗೆ ಬೇಡ ರಾಜ್ಯದ ಅಭಿವೃದ್ಧಿ ಮಾಡುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಕರೆ ನೀಡಿದರು.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+