ಸ್ಟಾರ್ ಪ್ರಚಾರಕಿ ಶೃತಿ ಪ್ರಾಣಾಪಯದಿಂದ ಪಾರು

ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಮತ ಗಳಿಕೆ ನಿರೀಕ್ಷೆ ಹೊಂದಿರುವ ಬಿಎಸ್ ಯಡಿಯೂರಪ್ಪ ಅವರ ಕರ್ನಾಟಕ ಜನತಾ ಪಕ್ಷ, ಸ್ಟಾರ್ ಪ್ರಚಾರಕಿಯಾಗಿ ಪಕ್ಷದ ಮಹಿಳಾ ಘಟಕದ ಉಪಾಧ್ಯಕ್ಷೆ ಹಾಗೂ ಜನಪ್ರಿಯ ನಟಿ ಶೃತಿ ಅವರನ್ನು ಕಳಿಸಿದೆ.
ನಟಿ ಶೃತಿ ಸೇರಿದಂತೆ ಕೆಲ ಮುಖಂಡರು ಧಾರವಾಡಕ್ಕೆ ಚುನಾವಣಾ ಪ್ರಚಾರಕ್ಕೆಂದು ಹೆಲಿಕಾಪ್ಟರ್ನಲ್ಲಿ ತೆರಳುತ್ತಿದ್ದರು. ತಾಂತ್ರಿಕ ದೋಷ ಉಂಟಾಗಿರುವುದು ಗೊತ್ತಾದ ಕೂಡಲೇ ಅನಿವಾರ್ಯವಾಗಿ ಪೈಲೆಟ್ನ ಜಾಗರೂಕತೆಯಿಂದ ಜಮೀನೊಂದರಲ್ಲಿ ಕಾಪ್ಟರನ್ನು ಸುರಕ್ಷಿತವಾಗಿ ಇಳಿಸಿದ್ದಾರೆ. ಇದರಿಂದ ಯಾವುದೇ ಅಪಾಯಗಳಾಗದೆ ನಿಟ್ಟುಸಿರು ಬಿಟ್ಟಿದ್ದಾರೆ.
ಗರಗ ಗ್ರಾಮದ ಶಾಲಾ ಮೈದಾನದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಸ್ಥಳ ಗುರುತಿಸಲಾಗಿತ್ತು. ಆದರೆ, ನಿಗದಿತ ಸ್ಥಳದಲ್ಲಿ ಇಳಿಸಲು ಆಗದೆ ಪಕ್ಕದ ಹೊಲದಲ್ಲಿ ಲ್ಯಾಂಡ ಮಾಡಲಾಯಿತು. ಪೈಲಟ್ ಗೆ ಯಾವ ತೊಂದರೆ ಎದುರಾಗಿತ್ತು, ಹೆಲಿಕಾಪ್ಟರ್ ನಲ್ಲಿ ಕಂಡ ಬಂದ ದೋಷ ಏನು ಎಂಬುದರ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರು ಪ್ರಶ್ನಿಸಿದ್ದಾರೆ.
ಸ್ಟಾರ್ ಪ್ರಚಾರಕಿ ಹಾಗೂ ಹೆಲಿಕಾಪ್ಟರ್ ಪ್ರಾಬ್ಲಂ : 2004ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಜನಪ್ರಿಯ ನಟಿ ಸೌಂದರ್ಯ ಅವರು ಅಕಾಲಿಕವಾಗಿ ಸಾವನ್ನಪ್ಪಿದ್ದ ಕರಾಳ ನೆನಪು ಎಲ್ಲರಿಗೂ ಇದೆ. ಆಂಧ್ರಪ್ರದೇಶದಲ್ಲಿ ಬಿಜೆಪಿ ಪರ ಪ್ರಚಾರಕ್ಕಾಗಿ ತೆರಳುತ್ತಿದ್ದ ಸೌಂದರ್ಯ ಅವರು ಜಕ್ಕೂರು ವಿಮಾನ ನಿಲ್ದಾಣದಲ್ಲಿ ದುರಂತ ಸಾವನ್ನಪ್ಪಿದ್ದರು.
ನಟಿ ಶೃತಿ ಈ ಘಟನೆಯಿಂದ ಕೊಂಚ ಗಾಬರಿಗೊಂಡರೂ, ಯಾವುದೇ ತೊಂದರೆಯಾಗದಂತೆ ಪಾರಾಗಿದ್ದಕ್ಕೆ ದೇವರಿಗೆ ಧನ್ಯವಾದ ಅರ್ಪಿಸಿದರು. ನಂತರ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಧಾರವಾಡದಲ್ಲಿನ ಚುನಾವಣಾ ಪ್ರಚಾರಕ್ಕೆ ತೆರಳಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications