ಮದ್ಯ, ಮಾಂಸ ತ್ಯಜಿಸಿದರೆ ಮಹಿಳೆ ಸೇಫ್

'ಕಾನೂನಿನಿಂದ ಮಾತ್ರ ರೇಪ್ ಕೇಸ್ ತಡೆಗಟ್ಟಲು ಸಾಧ್ಯವಿಲ್ಲ. ನನ್ನ ಪ್ರಕಾರ ರೇಪ್ ಪ್ರಕರಣಗಳು ಕಡಿಮೆಯಾಗಬೇಕಾದರೆ ಜನರು ಮಾಂಸಾಹಾರ ಸೇವಿಸದಿದ್ದರೆ ಹಾಗೂ ಮದ್ಯಪಾನ ಮಾಡುವುದನ್ನು ನಿಲ್ಲಿಸಿದರೆ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕುಸಿಯಲಿದೆ ಎಂದು ಸ್ವಾಮಿ ಅಗ್ನಿವೇಶ್ ಹೇಳಿದರು.
ಅನೇಕ ಕಡೆ ಕ್ರೈಂ ಪ್ರಮಾಣ ಹೆಚ್ಚಾಗಲು ಮದ್ಯಪಾನ ಸೇವನೆ ಕಾರಣ ಎಂಬುದು ಅಂಕಿ ಅಂಶಗಳಿಂದ ಸಾಬೀತಾಗಿದೆ. ಶಾಖಾಹಾರ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಇದರಿಂದ ಆರೋಗ್ಯ, ಆಯಸ್ಸು ವೃದ್ಧಿಸುತ್ತದೆ. ಜಪಾನ್ ನಲ್ಲಿ ದೀರ್ಘಾಯುಷ್ಯವುಳ್ಳ ವ್ಯಕ್ತಿಯ ಮೇಲೆ ನಡೆಸಿದ ಸಂಶೋಧನೆಯಿಂದ ತಿಳಿದು ಬಂದಿದೆ. ಆತ ಸಸ್ಯಾಹಾರಿ ಎಂಬುದು ವಿಶೇಷ.
ಹತ್ತು ಹಲವು ಕಾಯಿಲೆಗಳಿಗೆ ಮಾಂಸಾಹಾರ ದಾರಿ ಮಾಡಿಕೊಡುತ್ತದೆ. ಇದು ಸಂಶೋಧನೆಯಿಂದ ಸಾಬೀತಾಗಿರುವ ಅಂಶ ಎಂದರು.
ಮದ್ಯಪಾನ ನಿಲ್ಲಿಸಲು ಸರ್ಕಾರವೂ ತಯಾರಿಲ್ಲ. ಏಕೆಂದರೆ ಅದರಿಂದ ಅಪಾರ ಪ್ರಮಾಣದ ಹಣ ಬೊಕ್ಕಸಕ್ಕೆ ಸಿಗುತ್ತದೆ. ಅಲ್ಲದೆ ಅಮಾಯಕ ಪ್ರಾಣಿಗಳನ್ನು ಹಿಂಸಿಸಿ ಹತ್ಯೆ ಮಾಡಿ ಮಾಂಸ ದಂಧೆ ನಡೆಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಯಾವುದೇ ಕೈಂ ಇರಲಿ ವೈಯಕ್ತಿಕವಾಗಿ ಯಾರನ್ನು ದೂಷಿಸುವುದು ಸರಿಯಲ್ಲ. ಅವರು ಬೆಳೆದು ಬಂದ ಪರಿಸ್ಥಿತಿ, ಸಮಾಜಿಕ ನೆಲೆಗಟ್ಟು ಇದಕ್ಕೆ ಕಾರಣವಾಗಿರುತ್ತದೆ. ಶಾಲಾ ದಿನಗಳಲ್ಲಿ ಮಕ್ಕಳಿಗೆ ಮದ್ಯಪಾನದ ದುಷ್ಪರಿಣಾಮದ ಬಗ್ಗೆ ವಿವರಿಸದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಯಾರನ್ನು ಹೊಣೆ ಎನ್ನಬೇಕು ಎಂದು ಅಗ್ನಿವೇಶ್ ಕೇಳಿದ್ದಾರೆ.
ದೆಹಲಿಯಲ್ಲಿನ ಅತ್ಯಾಚಾರ ಪ್ರಕರಣಗಳ ಆರೋಪಿಗಳು ಮದ್ಯಪಾನ ಮಾಡಿದ್ದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ, ಯಾವುದೇ ಅಪರಾಧಿಗೆ ಗಲ್ಲು ಶಿಕ್ಷೆ ನೀಡುವ ಮೂಲಕ ಕ್ರೈಂ ಹತ್ತಿಕ್ಕಲು ಸಾಧ್ಯವಿಲ್ಲ. ನಾನು ಇದನ್ನು ವಿರೋಧಿಸುತ್ತೇನೆ. ಸಂಸತ್ತಿನ ಮೇಲೆ ದಾಳಿ ನಡೆಸಿದವರಿರಬಹುದು ಅಥವಾ ಉಗ್ರ ಕಸಬ್ ಇರಬಹುದು ಗಲ್ಲುಶಿಕ್ಷೆ ನೀಡುವುದರಿಂದ ಏನು ಪ್ರಯೋಜನವಿಲ್ಲ ಎಂದು ಅಗ್ನಿವೇಶ್ ಅಭಿಪ್ರಾಯಪಟ್ಟಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications