ಗಾರ್ಡನ್ ಸಿಟಿ ಗಾರ್ಬೇಜ್ ಸಿಟಿ ಮಾಡಿದ ಬಿಜೆಪಿ

ಬೆಂಗಳೂರು ಹಾಗೂ ಕರ್ನಾಟಕ ಅಭಿವೃದ್ಧಿಯತ್ತ ಸಾಗಬೇಕಾದರೆ ಕಾಂಗ್ರೆಸ್ನ್ನು ಅಧಿಕಾರಕ್ಕೆ ತರುವುದು ಅನಿವಾರ್ಯವಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಹಾಗೂ ತೆಲುಗು ನಟ ಚಿರಂಜೀವಿ ಹೇಳಿದ್ದಾರೆ.ಶಿಡ್ಲಘಟ್ಟದ ಟಿ.ಬಿ. ರಸ್ತೆಯಲ್ಲಿ ರೋಡ್ ಶೋ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ ವಿ.ಮುನಿಯಪ್ಪ ಪರ ಮತ ಯಾಚನೆ ನಡೆಸಿ, ನೆಹರೂ ಕ್ರೀಡಾಂಗಣದಲ್ಲಿ ಸೇರಿದ್ದ ಸಾವಿರಾರು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಬಿಜೆಪಿ, ಜೆಡಿಎಸ್ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಚಿರಂಜೀವಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಸರಕಾರಕ್ಕೆ ಕೊಟ್ಟ ಬಹುಮತವನ್ನು ಸದುಪಯೋಗಪಡಿಸಿಕೊಂಡು ರಾಜ್ಯದ ಅಭಿವೃದ್ಧಿಯನ್ನು ಮಾಡುವ ಬದಲಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದ ಬಿಜೆಪಿಯ ಮುಖ್ಯಮಂತ್ರಿ ಹಾಗೂ ಸಚಿವರು ಜೈಲಿಗೆ ಪೆರೇಡ್ ನಡೆಸಿದ್ದಾರೆ ಎಂದು ಟೀಕಿಸಿದರು.
ಯಥಾ ರಾಜ ತಥಾ ಪ್ರಜಾ ಎನ್ನುವಂತೆ ರಾಜ್ಯದ ಮುಖ್ಯಮಂತ್ರಿ ಭ್ರಷ್ಟಾಚಾರಕ್ಕೆ ಇಳಿದಿದ್ದರಿಂದ ಅವರ ಸಂಪುಟದಲ್ಲಿನ ಸಚಿವರೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಗ್ರಾಮೀಣ ಭಾಗಗಳ ಅಭಿವೃದ್ಧಿಗಾಗಿ ಕೇಂದ್ರ ಸರಕಾರವು ಬಡವರಿಗಾಗಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನೀಡಿರುವ ಕೋಟ್ಯಂತರ ರೂ.ಗಳ ಹಣವನ್ನು ಉಪಯೋಗಿಸಿಕೊಳ್ಳದೆ ದುರುಪಯೋಗ ಮಾಡಿಕೊಳ್ಳಲಾಗಿದೆ. ಬಡವರಿಗಾಗಿ ನೀಡಿರುವ ಹಣವನ್ನು ಕಸಿದುಕೊಳ್ಳಲಾಗಿದೆ ಎಂದು ಚಿರಂಜೀವಿ ಕಿಡಿಕಾರಿದರು.
ನೀರಾವರಿ ಯೋಜನೆ ಭರವಸೆ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಬಯಲು ಸೀಮೆಗಳಾದ ಈ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೆ ತರಲು ಕಾಂಗ್ರೆಸ್ ಬದ್ಧವಾಗಿದೆ, ರಾಜ್ಯದ ಜನತೆ ಕುಡಿಯುವ ನೀರಿಗೆ ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯಕ್ಕೆ ಬರುತ್ತಿರುವ ಸವಲತ್ತುಗಳು ನೆರೆ ರಾಜ್ಯಗಳ ಪಾಲಾಗುತ್ತಿವೆ. ರಾಜ್ಯದ ಹಿತವನ್ನು ಕಾಯಬೇಕಾಗಿದ್ದ ರಾಜ್ಯದ ಜನಪ್ರತಿನಿಧಿಗಳು ರಾಜ್ಯವನ್ನು ಕೊಳ್ಳೆ ಹೊಡೆಯುವುದರಲ್ಲಿ ತಲ್ಲೀನರಾಗಿದ್ದಾರೆ.
ಪವಿತ್ರವಾದ ವಿಧಾನಸೌಧದಲ್ಲಿ ಜನರ ಕಷ್ಟಸುಖಗಳ ಬಗ್ಗೆ ಚರ್ಚೆ ನಡೆಸಬೇಕಾದಂತಹ ಸಚಿವರು ಅಶ್ಲೀಲ ದೃಶ್ಯಗಳನ್ನು ನೋಡುವ ಮೂಲಕ ರಾಜ್ಯದ ಮಾನ ಮರ್ಯಾದೆಯನ್ನು ಗಾಳಿಗೆ ತೂರಿದ್ದಾರೆ. ಅಂಥ ಪಕ್ಷಕ್ಕೆ ಬೆಂಬಲ ನೀಡುತ್ತೀರಾ ಎಂದು ಅವರು ಪ್ರಶ್ನಿಸಿದರು. ಜೆಡಿಎಸ್ ಕೂಡಾ ಅಧಿಕಾರದ ಆಸೆಗಾಗಿ ರಾಜ್ಯವನ್ನು ತಮ್ಮ ಕುಟುಂಬದ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ.
ಕೇವಲ ಒಂದು ಕುಟುಂಬದಲ್ಲಿ ಐದು ಮಂದಿಗಿಂತಲೂ ಹೆಚ್ಚು ರಾಜಕಾರಣಿಗಳಿದ್ದು, ಅಧಿಕಾರವು ಒಂದೇ ಕುಟುಂಬಕ್ಕೆ ಸೀಮಿತವಾಗಿರಬೇಕು ಎನ್ನುವಂತಹ ಮನೋಭಾವನೆಯನ್ನು ಇಟ್ಟುಕೊಂಡಿರುವ ಪಕ್ಷವಾಗಿ ಜೆಡಿಎಸ್ ಮುಂದುವರಿಯುತ್ತಿದೆ ಎಂದು ಚಿರಂಜೀವಿ ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications