ಬೆಂಗಳೂರು : 267 ಬೂತ್ ಗಳಲ್ಲಿ ಸಿಸಿಟಿವಿ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಕೈಗೊಂಡಿರುವ ಪೊಲೀಸ್ ಬಂದೋಬಸ್ತ್ ಬಗ್ಗೆ ಮಾಹಿತಿ ನೀಡಿದ ಅವರು, ನಗರದ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಾಕಷ್ಟು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮುಂಜಾಗ್ರತೆ ಕ್ರಮವಾಗಿ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು ಹಾಗೂ ರೌಡಿಗಳನ್ನು ವಶಕ್ಕೆ ತೆಗೆದುಕೊಂಡು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.
ಒಟ್ಟು ಮತಗಟ್ಟೆಗಳು : ನಗರದಲ್ಲಿ ಸುಮಾರು 6,200 ಮತಗಟ್ಟೆಗಳಿವೆ. ಅವುಗಳಲ್ಲಿ ಎರಡೂವರೆ ಸಾವಿರ ಅತಿ ಸೂಕ್ಷ್ಮ ಮತ್ತು ಎರಡು ಸಾವಿರ ಸೂಕ್ಷ್ಮ ಮತಗಟ್ಟೆಗಳಾಗಿವೆ.
ದೊಂಬಿ ಅಥವಾ ಘರ್ಷಣೆ ಸಂಭವಿಸುವ ಸಾಧ್ಯತೆ ಇರುವಂತಹ 276 ಅತಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿದ್ದೇವೆ. ಈ ಪ್ರದೇಶದಲ್ಲಿ ಅರೆಸೇನಾ ಪಡೆ ಸಿಬ್ಬಂದಿ ಪಥಸಂಚಲನ ನಡೆಸಿದ್ದಾರೆ. ಮತದಾನದ ದಿನ ಅವರು ಆ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಸಿಸಿಟಿವಿ ಕಾವಲು : ಚುನಾವಣಾ ಅಕ್ರಮಗಳನ್ನು ತಡೆಯುವ ಉದ್ದೇಶಕ್ಕಾಗಿ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ 267 ಸಿಸಿ ಟಿವಿ ಕ್ಯಾಮೆರಾ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಪ್ರಮುಖ ಟ್ರಾಫಿಕ್ ಜಂಕ್ಷನ್ಗಳು ಮತ್ತು ವೃತ್ತಗಳಲ್ಲಿನ ಕ್ಯಾಮೆರಾಗಳ ನೆರವನ್ನು ಪಡೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಪೊಲೀಸರು : ನಗರದ 18 ಸಾವಿರ ಪೊಲೀಸರು, ಹೈದರಾಬಾದ್ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಹಂತದಲ್ಲಿರುವ ರಾಜ್ಯದ 20 ಐಪಿಎಸ್ ಅಧಿಕಾರಿಗಳು, ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಅರೆಸೇನಾ ಪಡೆಯ 35 ತುಕಡಿ.
ರಾಜ್ಯ ಮೀಸಲು ಪೊಲೀಸ್ ಪಡೆಯ 40 ತುಕಡಿ ಹಾಗೂ ನಗರ ಸಶಸ್ತ್ರ ಮೀಸಲು ಪೊಲೀಸ್ (ಸಿಎಆರ್) ಪಡೆಯ ಮೂರು ಸಾವಿರ ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ.
ಜವಾಬ್ದಾರಿ : ಎಸಿಪಿ ದರ್ಜೆಯ ಅಧಿಕಾರಿಗೆ ಪ್ರತಿ ವಿಧಾನಸಭಾ ಕ್ಷೇತ್ರದ ಭದ್ರತೆಯ ಜವಾಬ್ದಾರಿ ವಹಿಸಲಾಗಿದೆ. ಅದೇ ರೀತಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಒಬ್ಬ ಡಿಸಿಪಿ ದರ್ಜೆಯ ಅಧಿಕಾರಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದರು.
ಮತದಾನ ಪ್ರಕ್ರಿಯೆ ಮುಗಿದ ಬಳಿಕ ಮತಯಂತ್ರಗಳನ್ನು ಸಂಗ್ರಹಿಸಿಡುವ ಭದ್ರತಾ ಕೊಠಡಿಗಳ (ಸ್ಟ್ರಾಂಗ್ ರೂಂ) ಬಳಿ ಮೂರು ಹಂತದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗುತ್ತದೆ.
ಅರೆಸೇನಾ ಪಡೆ ಸಿಬ್ಬಂದಿ ಭದ್ರತಾ ಕೊಠಡಿಗಳ ಸಮೀಪ, ಸಿಎಆರ್ ಸಿಬ್ಬಂದಿ ಭದ್ರತಾ ಕೊಠಡಿ ಇರುವ ಕಟ್ಟಡದ ಬಳಿ ಹಾಗೂ ಸಿವಿಲ್ ಪೊಲೀಸರು ಆ ಕಟ್ಟಡದ ಸುತ್ತಮುತ್ತ ಭದ್ರತಾ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications