ತಮ್ಮನನ್ನೆ ಸುತ್ತಿಗೆ ಯಿಂದ ಬಡಿದು ಕೊಂದ ಅಣ್ಣ

ಕೆನರಾ ಬ್ಯಾಂಕ್ ಬಡಾವಣೆಯ ನಂಜರಸಪ್ಪ ನಗರದ ನಿವಾಸಿ ಶ್ರೀಕಾಂತ್ (22) ಕೊಲೆಯಾವರು. ಹತ್ಯೆ ಮಾಡಿದ ಅಣ್ಣ ಶ್ರೀನಾಥ್ ಮಾನಸಿಕ ಅಸ್ವಸ್ಥನಾಗಿರುವುದು ಘಟನೆಗೆ ಕಾರಣವೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಶ್ರೀನಾಥ್ ಹಾಗೂ ಶ್ರೀಕಾಂತ್ ಮೂಲತಃ ತುಮಕೂರು ಜಿಲ್ಲೆ ಮಧುಗಿರಿಯವರು. ಮಧುಗಿರಿ ತಾಲೂಕು ಮಾಳೇನಹಳ್ಳಿ ನಿವಾಸಿ ಗೋವಿಂದರಾಜು ಹಾಗೂ ಲಕ್ಷ್ಮಮ್ಮ ಅವರ ಮಕ್ಕಳು. ದಂಪತಿಗಳೂ ಹನ್ನೆಡರು ವರ್ಷದಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ.
ಗೋವಿಂದರಾಜು ಎಲೆಕ್ಟ್ರಿಷಿಯನ್ ಆಗಿ ಹಾಗೂ ಲಕ್ಷ್ಮಮ್ಮ ಕಂಪನಿಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಶುಕ್ರವಾರ ಬೆಳಗ್ಗೆ ಗೋವಿಂದರಾಜು ಮತ್ತು ಲಕ್ಷ್ಮಮ್ಮ ಕೆಲಸಕ್ಕೆ ತರೆಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಜಗಳ ಕೊಲೆಯಲ್ಲಿ ಅಂತ್ಯ : ಸಹೋದರರ ನಡುವೆ ಕ್ಷುಲ್ಲಕ ಕಾರಣಕ್ಕೆ ಶುಕ್ರವಾರ ಜಗಳ ನಡೆದಿದೆ. ನಂತರ ಶ್ರೀಕಾಂತ್ ಹಾಡು ಕೇಳುತ್ತಾ, ಕೊಠಡಿಯಲ್ಲಿದ್ದ ಕಂಪ್ಯೂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಆಗಮಿಸಿದ ಶ್ರೀನಾಥ್ ಮನೆಯಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಹೋಗಿ ಸಹೋದರನ ತಲೆಗೆ ಹೊಡೆದಿದ್ದಾರೆ.
ಶ್ರೀಕಾಂತ್ ಪರಾರಿಯಾಗಲು ಯತ್ನಿಸುವ ಮುನ್ನವೇ ಶ್ರೀನಾಥ್ ಹಲವರು ಬಾರಿ ಶ್ರೀಕಾಂತ್ ಅವರಿಗೆ ಹೊಡೆದಿದ್ದಾರೆ. ಜೋರಾಗಿ ಕೂಗಿಕೊಂಡು ಶ್ರೀಕಾಂತ್ ಸ್ಥಳದಲ್ಲೇ ಕುಸಿದು ಬಿದಿದ್ದಾರೆ. ಸ್ಥಳಕ್ಕೆ ಧಾಮಿಸಿದ ನೆರೆಮನೆಯವರು ಪೋಷಕರಿಗೆ ಕರೆ ಮಾಡಿ ಘಟನೆಯ ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳಕ್ಕಾಗಮಿಸಿದಾಗ ಶ್ರೀನಾಥ್ ಪರಾರಿಯಾಗಿದ್ದರು. ತನಿಖೆ ನಡೆಸಿದ ಪೊಲೀಸರು ಒಂದೇ ಗಂಟೆಯಲ್ಲಿಯೇ ವಿಜಯನಗರದಲ್ಲಿ ಆತನನ್ನು ಬಳಿ ಬಂಧಿಸಿದ್ದಾರೆ.
ದುಶ್ಚಟಕ್ಕೆ ಬಲಿ : ಶ್ರೀನಾಥ್ 9 ತರಗತಿವರೆಗೆ ಮಾತ್ರ ವ್ಯಾಸಂಗ ಮಾಡಿದ್ದು, ನಂತರ ಶಾಲೆಗೆ ಹೋಗಲು ನಿರಾಸಕ್ತಿ ತೋರಿದ್ದ. ಪ್ರತಿನಿತ್ಯ ಮದ್ಯ ಹಾಗೂ ಗಾಂಜಾ ಸೇವಿಸಿ ಮನೆಗೆ ಬರುವುದು ಸಾಮಾನ್ಯವಾಗಿತ್ತು.
ಕ್ರಮೇಣವಾಗಿ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಈತನಿನನ್ನ್ನು ನಿಮ್ಹಾನ್ಸ್ ಆಸ್ಪತ್ರೆಗೂ ದಾಖಲಿಸಲಾಗಿತ್ತು. ಆತನ ಆರೋಗ್ಯ ಸ್ಥಿತಿ ಸುಧಾರಿಸದಿದ್ದರೂ ಮನೆಯಲ್ಲಿಯೇ ಇಟ್ಟುಕೊಂಡು, ನಾಗರಬಾವಿಯಲ್ಲಿರುವ ಕ್ಲಿನಿಕ್ವೊಂದರಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಎರಡು ವರ್ಷದಿಂದ ಮದ್ಯ ಮತ್ತು ಗಾಂಜಾ ಚಟ ಬಿಟ್ಟಿದ ಶ್ರೀನಾಥ್ ಖಿನ್ನತೆಗೊಳಗಾಗಿದ್ದ. ವಿಚಿತ್ರವಾಗಿ ವರ್ತಿಸುತ್ತಿದ್ದ, ಕೋಪಿಸಿಕೊಳ್ಳುತ್ತಿದ್ದ ಎಂದು ಕುಟುಂಬದವರು ತಿಳಿಸಿದ್ದಾರೆ. ಶ್ರೀಕಾಂತ್ ಡಿಪ್ಲೋಮೊ ಪದವಿ ಪಡೆದಿದ್ದು, ಆಂಧ್ರ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ. ಯುಗಾದಿಗೆ ಬೆಂಗಳೂರಿಗೆ ಮರಳಿದ್ದ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications