ತಮ್ಮನನ್ನೆ ಸುತ್ತಿಗೆ ಯಿಂದ ಬಡಿದು ಕೊಂದ ಅಣ್ಣ

ಕೆನರಾ ಬ್ಯಾಂಕ್ ಬಡಾವಣೆಯ ನಂಜರಸಪ್ಪ ನಗರದ ನಿವಾಸಿ ಶ್ರೀಕಾಂತ್ (22) ಕೊಲೆಯಾವರು. ಹತ್ಯೆ ಮಾಡಿದ ಅಣ್ಣ ಶ್ರೀನಾಥ್ ಮಾನಸಿಕ ಅಸ್ವಸ್ಥನಾಗಿರುವುದು ಘಟನೆಗೆ ಕಾರಣವೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಶ್ರೀನಾಥ್ ಹಾಗೂ ಶ್ರೀಕಾಂತ್ ಮೂಲತಃ ತುಮಕೂರು ಜಿಲ್ಲೆ ಮಧುಗಿರಿಯವರು. ಮಧುಗಿರಿ ತಾಲೂಕು ಮಾಳೇನಹಳ್ಳಿ ನಿವಾಸಿ ಗೋವಿಂದರಾಜು ಹಾಗೂ ಲಕ್ಷ್ಮಮ್ಮ ಅವರ ಮಕ್ಕಳು. ದಂಪತಿಗಳೂ ಹನ್ನೆಡರು ವರ್ಷದಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ.
ಗೋವಿಂದರಾಜು ಎಲೆಕ್ಟ್ರಿಷಿಯನ್ ಆಗಿ ಹಾಗೂ ಲಕ್ಷ್ಮಮ್ಮ ಕಂಪನಿಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಶುಕ್ರವಾರ ಬೆಳಗ್ಗೆ ಗೋವಿಂದರಾಜು ಮತ್ತು ಲಕ್ಷ್ಮಮ್ಮ ಕೆಲಸಕ್ಕೆ ತರೆಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಜಗಳ ಕೊಲೆಯಲ್ಲಿ ಅಂತ್ಯ : ಸಹೋದರರ ನಡುವೆ ಕ್ಷುಲ್ಲಕ ಕಾರಣಕ್ಕೆ ಶುಕ್ರವಾರ ಜಗಳ ನಡೆದಿದೆ. ನಂತರ ಶ್ರೀಕಾಂತ್ ಹಾಡು ಕೇಳುತ್ತಾ, ಕೊಠಡಿಯಲ್ಲಿದ್ದ ಕಂಪ್ಯೂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಆಗಮಿಸಿದ ಶ್ರೀನಾಥ್ ಮನೆಯಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಹೋಗಿ ಸಹೋದರನ ತಲೆಗೆ ಹೊಡೆದಿದ್ದಾರೆ.
ಶ್ರೀಕಾಂತ್ ಪರಾರಿಯಾಗಲು ಯತ್ನಿಸುವ ಮುನ್ನವೇ ಶ್ರೀನಾಥ್ ಹಲವರು ಬಾರಿ ಶ್ರೀಕಾಂತ್ ಅವರಿಗೆ ಹೊಡೆದಿದ್ದಾರೆ. ಜೋರಾಗಿ ಕೂಗಿಕೊಂಡು ಶ್ರೀಕಾಂತ್ ಸ್ಥಳದಲ್ಲೇ ಕುಸಿದು ಬಿದಿದ್ದಾರೆ. ಸ್ಥಳಕ್ಕೆ ಧಾಮಿಸಿದ ನೆರೆಮನೆಯವರು ಪೋಷಕರಿಗೆ ಕರೆ ಮಾಡಿ ಘಟನೆಯ ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳಕ್ಕಾಗಮಿಸಿದಾಗ ಶ್ರೀನಾಥ್ ಪರಾರಿಯಾಗಿದ್ದರು. ತನಿಖೆ ನಡೆಸಿದ ಪೊಲೀಸರು ಒಂದೇ ಗಂಟೆಯಲ್ಲಿಯೇ ವಿಜಯನಗರದಲ್ಲಿ ಆತನನ್ನು ಬಳಿ ಬಂಧಿಸಿದ್ದಾರೆ.
ದುಶ್ಚಟಕ್ಕೆ ಬಲಿ : ಶ್ರೀನಾಥ್ 9 ತರಗತಿವರೆಗೆ ಮಾತ್ರ ವ್ಯಾಸಂಗ ಮಾಡಿದ್ದು, ನಂತರ ಶಾಲೆಗೆ ಹೋಗಲು ನಿರಾಸಕ್ತಿ ತೋರಿದ್ದ. ಪ್ರತಿನಿತ್ಯ ಮದ್ಯ ಹಾಗೂ ಗಾಂಜಾ ಸೇವಿಸಿ ಮನೆಗೆ ಬರುವುದು ಸಾಮಾನ್ಯವಾಗಿತ್ತು.
ಕ್ರಮೇಣವಾಗಿ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಈತನಿನನ್ನ್ನು ನಿಮ್ಹಾನ್ಸ್ ಆಸ್ಪತ್ರೆಗೂ ದಾಖಲಿಸಲಾಗಿತ್ತು. ಆತನ ಆರೋಗ್ಯ ಸ್ಥಿತಿ ಸುಧಾರಿಸದಿದ್ದರೂ ಮನೆಯಲ್ಲಿಯೇ ಇಟ್ಟುಕೊಂಡು, ನಾಗರಬಾವಿಯಲ್ಲಿರುವ ಕ್ಲಿನಿಕ್ವೊಂದರಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಎರಡು ವರ್ಷದಿಂದ ಮದ್ಯ ಮತ್ತು ಗಾಂಜಾ ಚಟ ಬಿಟ್ಟಿದ ಶ್ರೀನಾಥ್ ಖಿನ್ನತೆಗೊಳಗಾಗಿದ್ದ. ವಿಚಿತ್ರವಾಗಿ ವರ್ತಿಸುತ್ತಿದ್ದ, ಕೋಪಿಸಿಕೊಳ್ಳುತ್ತಿದ್ದ ಎಂದು ಕುಟುಂಬದವರು ತಿಳಿಸಿದ್ದಾರೆ. ಶ್ರೀಕಾಂತ್ ಡಿಪ್ಲೋಮೊ ಪದವಿ ಪಡೆದಿದ್ದು, ಆಂಧ್ರ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ. ಯುಗಾದಿಗೆ ಬೆಂಗಳೂರಿಗೆ ಮರಳಿದ್ದ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications