ಎಚ್ಎಸ್ ದೊರೆಸ್ವಾಮಿ ಓಟ್ ಮಾಡಲಿಲ್ಲ, ಯಾಕೆ?

ಯಾರಪ್ಪಾ ಆ ಹಿರಿಯ ಜೀವ ಅಂದರೆ ಈ ರಾಜಕಾರಣಿಗಳ ಮಂಗ್ಯಾಟಗಳ ಮಧ್ಯೆ ಸಾಕ್ಷೀಪ್ರಜ್ಞೆಯಂತಿರುವ ಸ್ವಾತಂತ್ರ್ಯ ಹೋರಾಟಗಾರ ಎಚ್ಎಸ್ ದೊರೆಸ್ವಾಮಿಗಳು. ಕಳೆದೈದು ವರ್ಷಗಳಲ್ಲಿನ ಭ್ರಷ್ಟ ಆಡಳಿತದಿಂದ ಬೇಸತ್ತಿರುವ ದೊರೆಸ್ವಾಮಿ ಅವರು 60 ವರ್ಷಗಳಲ್ಲಿ ಮೊದಲ ಬಾರಿಗೆ ಯಾರ ಪರವೂ ಮತ ಚಲಾಯಿಸಿಲ್ಲ!
ಹಾಗಂತ ಅವರು ಸಿನಿಕರಾಗಿ ಮನೆಯಲ್ಲಿ ಕುಳಿತು ಹೊಣೆಗೇಡಿತನ ಪ್ರದರ್ಶಿಸಿದರು ಅಂತಲ್ಲ. ನಿನ್ನೆ ಮಧ್ಯಾಹ್ನ ಮನೆಯಿಂದ ಹೊರಬಿದ್ದವರೆ ಜಯನಗರ ನಾಲ್ಕನೆಯ ಬಡಾವಣೆಯಲ್ಲಿರುವ ಮತಗಟ್ಟೆಗೆ ಸೀದಾ ತೆರಳಿದ್ದಾರೆ. ಅಲ್ಲಿ ಮತಪತ್ರವನ್ನು ಸ್ವೀಕರಿಸಿ, ತಮ್ಮ ಹೆಸರನ್ನು ಪುಸ್ತಕದಲ್ಲಿ ದಾಖಲಿಸಿದ್ದಾರೆ. ಬೆರಳಿಗೆ ಮಸಿಯನ್ನೂ ಹಾಕಿಸಿಕೊಂಡಿದ್ದಾರೆ.
ಬಳಿಕ, ಯಾರ ಪರವೂ ಮತ ಚಲಾಯಿಸಲು ತಮಗೆ ಇಷ್ಟವಿಲ್ಲ ಎಂದು ದಾಖಲಿಸಲು ಫಾರಂ 17 ನೀಡುವಂತೆ ಮತಗಟ್ಟೆ ಅಧಿಕಾರಿಯನ್ನು ಕೇಳಿದ್ದಾರೆ. ಆದರೆ ಅಂಥದ್ದು ಯಾವುದೂ ನಮ್ಮ ಬಳಿ ಇಲ್ಲ ಎಂದಿದ್ದಾರೆ. ಬಳಿಕ, ನಾನು ಯಾವುದೇ ಅಭ್ಯರ್ಥಿಗೂ ಮತ ಹಾಕುವುದಿಲ್ಲ ಎಂದ ದೊರೆಸ್ವಾಮಿ ಅವರು Since I am disillusioned with the political parties, I am not voting ಎಂದು ರಿಜಿಸ್ಟರ್ ಪುಸ್ತಕದಲ್ಲಿ ಬರೆದುಬಂದಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications