'ಹಸ್ತ'ಸಾಮುದ್ರಿಕಾ ಸ್ವಾಮಿ ಮನೆಯಲ್ಲಿ 15 ಕೆಜಿ ಚಿನ್ನ ಸಿಕ್ತು

ಬೆಂಗಳೂರಿನ ಆರ್ ಟಿ ನಗರದಲ್ಲಿರುವ ಎರಡನೇ ಬ್ಲಾಕಿನಲ್ಲಿರುವ ಖ್ಯಾತ ಜ್ಯೋತಿಷಿ, ಮುಲ್ಕಿ ಮೂಲದ ಚಂದ್ರಶೇಖರ ಸ್ವಾಮಿ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಶನಿವಾರ ಸಂಜೆ ದಾಳಿ ನಡೆಸಿದ್ದರು. ದಾಳಿಯ ಸಂದರ್ಭದಲ್ಲಿ ಸ್ವಾಮೀಜಿ ಮನೆಯಲ್ಲಿ ದೊರೆತ ದಾಖಲೆಗಳಲ್ಲಿ ಖ್ಯಾತ ರಾಜಕಾರಣಿಗಳ ಹೆಸರುಗಳೇ ಹೆಚ್ಚಾಗಿ ಕಂಡು ಬಂದಿದೆ. ಅಂದರೆ 'ಹಸ್ತ'ಸಾಮುದ್ರಿಕಾ ಸ್ವಾಮೀಜಿಯನ್ನು ಅಡ್ಡವಿಟ್ಟುಕೊಂಡು ಆ ಪ್ರಮಾಣದ ಚುನಾವಣಾ ದಂಧೆ ನಡೆಸಲಾಗಿದೆ.
ಹಾಗಾಗಿ ಇದು ಚುನಾವಣೆ ಸಂಬಂಧಿ ಅಕ್ರಮ ಎಂಬುದು ಮೇಲ್ನೋಟದಲ್ಲೇ ಸಾಬೀತಾಗಿದೆ. ಅಧಿಕಾರಿಗಳೂ ಹೆಚ್ಚು ಮುತುವರ್ಜಿ ತೋರಿಸಿ ಸ್ವಾಮೀಜಿಯ ಮನೆಯನ್ನು ಇಂಚಿಂಚೂ ಶೋಧಿಸಿದ್ದಾರೆ.
'ಪ್ರತಿಷ್ಠಿತ ಸ್ವಾಮೀಜಿ' ಮುಖವಾಡ ಧರಿಸಿದ್ದರಿಂದ ತನ್ನನ್ನು ಯಾರೇನೂ ಮಾಡಲಾರರು ಎಂದೇ ಚುನಾವಣೆ ಧಂಧೆಗೆ ಮುಂದಾಗಿದ್ದ ಸದರಿ ಸ್ವಾಮೀಜಿ, ತನ್ನ ಮನೆ ಮೇಲೆ ಅಧಿಕಾರಿಗಳು ಮುಗಿಬಿದ್ದಿದ್ದಾರೆ ಎಂಬುದು ತಿಳಿಯುತ್ತಿದ್ದಂತೆ ಕಂಗಾಲಾಗಿ, ಮನೆಯ ಬಾಗಿಲನ್ನೇ ತೆಗೆದಿಲ್ಲ. ನಂತರ ಅಧಿಕಾರಿಗಳು ಮನೆ ಮಹಡಿ ಮೇಲೆ ಹತ್ತಲು ಆರಂಭಿಸುತ್ತಿದ್ದಂತೆ Anantha Villa ಮನೆ ಬಾಗಿಲು ಓಪನ್ ಆಗಿದೆ. ಈ ಮಧ್ಯೆ ಸ್ವಾಮೀಜಿ ಪರಾರಿಯಾಗಲು ಯತ್ನಿಸಿದ್ದ ಎನ್ನಲಾಗಿದೆ.
ಅಧಿಕೃತ ಮಾಹಿತಿ ಪ್ರಕಾರ ವಾಸ್ತು ತಜ್ಞರೂ ಆದ ಚಂದ್ರಶೇಖರ ಸ್ವಾಮೀಜಿಯ ವಾರ್ಷಿಕ ಆದಾಯ ಕೇವಲ 6 ಲಕ್ಷ ರೂಪಾಯಿ. ಆದರೆ ದಾಳಿಯಲ್ಲಿ ಸಿಕ್ಕಿದ ಆಸ್ತಿಗಳ ಮೌಲ್ಯ ಬರೋಬ್ಬರಿ 200 ಕೋಟಿ ರೂಪಾಯಿಗೂ ಅಧಿಕ!
ಚಂದ್ರಶೇಖರ ಸ್ವಾಮೀಜಿ ಅವರ ಆರ್. ಟಿ. ನಗರದ ನಿವಾಸದಲ್ಲಿ ಭಾನುವಾರವೂ ಶೋಧ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 15 ಕೆ.ಜಿ. ಚಿನ್ನ, 55 ಕೆ.ಜಿ ಬೆಳ್ಳಿ, 60 ಕೋಟಿ ರೂ. ಬ್ಯಾಂಕ್ ವಹಿವಾಟಿನ ಲೆಕ್ಕಪತ್ರ, 200 ಕೋಟಿ ರೂ.ಮೌಲ್ಯದ ಆಸ್ತಿಗೆ ಸಂಬಂಧಿಸಿದ ದಾಖಲೆ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಚಂದ್ರಶೇಖರ್ ಸ್ವಾಮಿ ಅವರ ಬ್ಯಾಂಕ್ ಖಾತೆಯಿಂದ ರಾಜಕಾರಣಿಗಳಿಗೆ ಹಾಗೂ ವಿವಿಧ ರಾಜಕೀಯ ಪಕ್ಷಗಳಿಗೆ ಸುಮಾರು 60 ಕೋಟಿ ರು ವಿತರಣೆಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿ ಜಂಟಿ ಆಯುಕ್ತ ಕ್ಯಾ ಪ್ರದೀಪ್ ಆರ್ಯ ಅವರ ನೇತೃತ್ವದ 15 ಮಂದಿ ತಂಡ ಹಾಗೂ ಚುನಾವಣಾಧಿಕಾರಿಗಳ ತಂಡ ದಾಳಿ ನಡೆಸಿದ್ದರು. ಮಾಜಿ ಸಂಸದರೊಬ್ಬರಿಗೆ ಕಳೆದ ವಾರ 6.5 ಕೋಟಿ ರು ನೀಡಿರುವ ಬಗ್ಗೆ ಮಾಹಿತಿ ಸೇರಿದಂತೆ ಹಲವು ಮಹತ್ವದ ದಾಖಲೆಗಳು ದಾಳಿ ಸಂದರ್ಭದಲ್ಲಿ ಸಿಕ್ಕಿವೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications