ಮತದಾನ : ಇತಿಹಾಸ ಬರೆದ ಮಂಗಳ ಮುಖಿಯರು

ಕರ್ನಾಟಕ ಚುನಾವಣೆಯ ಒಟ್ಟು ಮತದಾರರ ಸಂಖ್ಯೆ ಪ್ರಕಟಿಸುವಾಗಲೇ ಚುನಾವಣಾ ಆಯೋಗ 2919 ಲೈಗಿಂಕ ಅಲ್ಪ ಸಂಖ್ಯಾತರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಿತ್ತು. ಆದರೆ, ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎಂಬ ವಿವರಗಳು ಲಭ್ಯವಾಗಿಲ್ಲ.
ಮತದಾನದ ಹಕ್ಕಿಗಾಗಿ ಲೈಗಿಂಕ ಅಲ್ಪಸಂಖ್ಯಾತರು ಸುಮಾರು 50 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು. ಕರ್ನಾಟಕದ ಚುನಾವಣೆಯಲ್ಲಿ ಇವರಿಗೆ ಮತದಾನದ ಹಕ್ಕು ನೀಡಬೇಕು ಎಂದು ತಯಾರಿ ನಡೆಸಿದ್ದ ಚುನಾವಣಾ ಆಯೋಗ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇವರಿಗೆ ಅವಕಾಶ ಕಲ್ಪಿಸಿತ್ತು.
ಲೈಗಿಂಕ ಅಲ್ಪ ಸಂಖ್ಯಾತರು, ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಅರ್ಜಿಯಲ್ಲಿ ಲಿಂಗ ಪರಿವರ್ತಕ ಎಂದು ನಮೂದಿಸಿದ್ದರು. ಅವರನ್ನು ಲೈಂಗಿಕ ಅಲ್ಪಸಂಖ್ಯಾತರು ಎಂದು ಪರಿಗಣಿಸಿ ರಾಜ್ಯಾದ್ಯಂತ ಒಟ್ಟು 2919 ಜನರಿಗೆ ಮತದಾನಕ್ಕೆ ಮಾಡಲು ಅವಕಾಶ ನೀಡಲಾಗಿತ್ತು.
ಎರಡು ಸಾವಿರ ಲೈಗಿಂಕ ಅಲ್ಪಸಂಖ್ಯಾತರಲ್ಲಿ 875 ಜನರು ಬೆಂಗಳೂರು ನಗರದಲ್ಲಿ ವಾಸಿಸುತ್ತಿದ್ದಾರೆ ಎಂದು ಆಯೋಗ ಮಾಹಿತಿ ಸಂಗ್ರಹಿಸಿತ್ತು. ಇವರಲ್ಲಿ 118 ಮಂದಿ ಮಹದೇವಪುರ ಕ್ಷೇತ್ರದಲ್ಲಿ ವಾಸವಾಗಿದ್ದಾರೆ. ಆದರೆ, ಎಷ್ಟು ಜನ ಭಾನುವಾರ ಮತ ಚಲಾಯಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ.
ಹಲವು ವರ್ಷಗಳ ಹೋರಾಟದ ಬಳಿಕ ಚುನಾವಣಾ ಆಯೋಗ ಮತದಾನಕ್ಕೆ ಅವಕಾಶ ಕಲ್ಪಿಸಿತ್ತು. ಯಾವುದೇ ಸರ್ಕಾರಗಳು ನಮಗೆ ಸೂಕ್ತ ಸೌಲಭ್ಯ ಒದಗಿಸಲು ಶ್ರಮಿಸುವುದಿಲ್ಲ. ನಾವು ಮತ ಹಾಕುವುದಿಲ್ಲ ಎಂದು ರಾಜಕೀಯ ಪಕ್ಷಗಳು ಹೀಗೆ ಮಾಡುತ್ತವೆ ಎಂದು ಲೈಂಗಿಕ ಅಲ್ಪಸಂಖ್ಯಾತರು ಆರೋಪಿಸುತ್ತಿದ್ದರು.
ಮೈಸೂರಿನಲ್ಲಿ ಅಭ್ಯರ್ಥಿಯಾಗಿದ್ದರು : ಮೈಸೂರಿನ ನರಸಿಂಹರಾಜ ಕ್ಷೇತ್ರದಿಂದ ಲೈಂಗಿಕ ಅಲ್ಪ ಸಂಖ್ಯಾತರಾದ ಚಾಂದಿನಿ (35) ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಬಳ್ಳಾರಿಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಲೈಂಗಿಕ ಅಲ್ಪಸಂಖ್ಯಾತರೊಬ್ಬರು ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ್ದಾರೆ.
ಲೈಂಗಿಕ ಅಲ್ಪಸಂಖ್ಯಾತರಿಗೆ ಮತದಾನದ ಹಕ್ಕು ನೀಡಬೇಕೆಂಬ ಹಲವು ವರ್ಷಗಳ ಕೂಗಿಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬರುವ ಸರ್ಕಾರ ಇವರಿಗೆ ಸೂಕ್ತ ವ್ಯವಸ್ಥೆ ಒದಗಿಸಿ ಕೊಡಲಿದೆಯೇ ಎಂದು ಕಾದು ನೋಡಬೇಕು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications