ಗದಗ : ತಮ್ಮನಿಂದಲೇ ಅಣ್ಣ, ಅತ್ತಿಗೆ ಭೀಕರ ಕೊಲೆ

ಮಂಗಳವಾರ ಬೆಳಗ್ಗೆ ಬಸಪ್ಪ ಎಂಬವವರು ದೊಡ್ಡಪ್ಪನ ಮಗನಾದ ಶಿವಪ್ಪ ಹೊಸೂರು (೫೦) ಮತ್ತು ಅವಕ್ಕ (೪೮) ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆಮಾಡಿ ಪರಾರಿಯಾಗಿದ್ದಾನೆ. ತನ್ನ ಮಕ್ಕಳೊಂದಿಗೆ ಜಗಳವಾಡುತ್ತಿದ್ದ, ಬಸಪ್ಪ ಅವರನ್ನು ಶಿವಪ್ಪ ದಂಪತಿ ಬಿಡಿಸಲು ಹೋಗಿದ್ದರಿಂದ ಕೋಪಗೊಂಡು ಕೊಲೆ ಮಾಡಲಾಗಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ನಿವಾಸಿಯಾದ ಬಸಪ್ಪ ತನ್ನ ದೊಡ್ಡಪ್ಪನ ಮನೆಯ ಪಕ್ಕದಲ್ಲೇ ವಾಸವಾಗಿದ್ದಾರೆ. ಇತನಿಗೆ ಎರಡು ಮದುವೆಯಾಗಿದ್ದು, ಮೊದಲ ಪತ್ನಿ ಈತನ ಜಗಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಎರಡನೇ ಹೆಂಡತಿಯು ಮಕ್ಕಳನ್ನು ಬಸಪ್ಪ ಬಳಿ ಬಿಟ್ಟು ಗಂಡನಿಂದ ದೂರವಾಗಿದ್ದಾಳೆ. ಕುಡಿತದ ದಾಸನಾಗಿರುವ ಈತ ತನ್ನ ಜೊತೆ ವಾಸಿಸುತ್ತಿರುವ ಮಕ್ಕಳೊಂದಿಗೆ ದಿನವೂ ಜಗಳವಾಡುತ್ತಿದ್ದ ಎಂದು ತಿಳಿದುಬಂದಿದೆ.
ಮಂಗಳವಾರ ಬೆಳಗ್ಗೆಯೂ ಬಸಪ್ಪ ಮಕ್ಕಳೊಂದಿಗೆ ಜಗಳ ಪ್ರಾರಂಭಿಸಿದ್ದಾನೆ. ಜಗಳ ವಿಕೋಪಕ್ಕೆ ಹೋದಾಗ ಪಕ್ಕದ ಮನೆಯ ಶಿವಪ್ಪ ಬೆಳಗ್ಗೆ ಏಕೆ ಮಕ್ಕಳೊಂದಿಗೆ ಜಗಳವಾಡುತ್ತಿಯಾ? ಎಂದು ಬಸಪ್ಪನನ್ನು ಪ್ರಶ್ನಿಸಿದ್ದಾರೆ.
ಇದರಿಂದ ಕೋಪಗೊಂಡ ಆತ ಮಚ್ಚಿನಿಂದ ಹಲ್ಲೆಮಾಡಿ ಶಿವಪ್ಪನನ್ನು ಕೊಲೆ ಮಾಡಿದ್ದಾನೆ. ಗಂಡನ ಮೇಲೆ ಹಲ್ಲೆ ಆಗುವುದನ್ನು ತಪ್ಪಿಸಲು ಬಂದ ಅತ್ತಿಗೆಯನ್ನು ಕೊಲೆ ಮಾಡಿ, ಸ್ಥಳದಿಂದ ಪರಾರಿಯಾಗಿದ್ದಾನೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೋಣ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಶೀಘ್ರದಲ್ಲೇ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications