ಖಿನ್ನತೆ: ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ

techie-basavaraj-suicide-basaveshwara-nagar-bangalore
ಬೆಂಗಳೂರು, ಮೇ 7: ಜೀವನದಲ್ಲಿ ಜಿಗುಪ್ಸೆಗೊಂಡ ಸಾಫ್ಟ್ ವೇರ್‌ ಇಂಜಿನಿಯರ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಸವೇಶ್ವರನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ.

ಮಾನಸಿಕ ಖಿನ್ನತೆಗೊಳಗಾಗಿದ್ದ ಟೆಕ್ಕಿ ಬಸವರಾಜ್ ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ 36 ವರ್ಷ ವಯಸ್ಸಾಗಿತ್ತು. ಇಲ್ಲಿನ ಕಿರ್ಲೋಸ್ಕರ್ ಕಾಲನಿಯಲ್ಲಿ ವಾಸವಾಗಿದ್ದ ಬಸವರಾಜ್, ನಿನ್ನೆ ಬೆಳಗ್ಗೆ ಮನೆಯವರ ಜತೆಗೂಡಿ ತಿಂಡಿ ಶಾಸ್ತ್ರ ಮುಗಿಸಿದ್ದಾರೆ. ಬಳಿಕ ಅದೇನನ್ನಿಸಿತೋ ಸೀದಾ ತಮ್ಮ ಮಲಗುವ ಕೋಣೆಗೆ ತೆರಳಿ ನೇಣು ಬಿಗಿದುಕೊಂಡು ಸತ್ತಿದ್ದಾರೆ.

ಟೆಕ್ಕಿ ಬಸವರಾಜ್ 3 ತಿಂಗಳಿಂದ ತೀವ್ರ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ನಿಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಬಸವರಾಜ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಆತನ ಸೋದರಿ ಚೆನ್ನಮ್ಮ ಪೊಲೀಸರಿಗೆ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಬಸವೇಶ್ವರನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+