ಮಚ್ಚು-ಲಾಂಗು ವೀರರ ವಿರುದ್ಧ ಬಿತ್ತು ಗೂಂಡಾ ಕೇಸು
ಕೋಲಾರ, ಮೇ 7: ಮೊನ್ನೆ ಮತದಾನದ ವೇಳೆ ತಾನುಂಟು ಮೂರು ಲೋಕವುಂಟು ಎಂದು ಅಪ್ಪಟ ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ್ದ ಕಾಂಗ್ರೆಸ್ಸಿನ 5 ಮಂದಿ ಪುಡಿ ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ. ಘಟನೆಯನ್ನು ಕಣ್ಣಾರೆ ಕಂಡ ಕೋಲಾರದ ಜನತೆ ಇದೇನು ಭವಿಷ್ಯದ ಮುನ್ಸೂಚನೆಯಾ ಎಂದು ಬೆಚ್ಚಿಬಿದ್ದಿದ್ದಾರೆ.
ಮತದಾನದ ಸಂದಭರ್ದಲ್ಲಿ ಲಾಂಗು ಮತ್ತು ಕಬ್ಬಿಣದ ರಾಡುಗಳನ್ನು ಜಳಪಿಸುತ್ತಾ, ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ದಕ್ಕೆ ಉಂಟು ಮಾಡಿದ ಆ ರೌಡಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಜಿಲ್ಲಾ ರಕ್ಷಣಾಧಿಕಾರಿ ರಾಮ ನಿವಾಸ್ ಸೆಪಟ್ ಆದೇಶಿಸಿದ್ದಾರೆ.

ಮೊನ್ನೆ ಭಾನುವಾರ ಸರಕಾರಿ ಬಾಲಕರ ಕಾಲೇಜು ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದ್ದ ಸಮಯದಲ್ಲಿ ಕುರುಬರ ಪೇಟೆಯ ಕುಮಾರ್, ಈತನ ತಮ್ಮಂದಿರಾದ ನಗರಸಭಾ ಸದಸ್ಯ ಪ್ರಸಾದ್ ಬಾಬು, ಲಕ್ಷ್ಮಿನಾರಾಯಣ, ಸಂದೀಪ್, ಸಂತೋಷ್ ಮತ್ತು ಇತರರು ಗುಂಪು ಕಟ್ಟಿಕೊಂಡು, ಕೈಗಳಲ್ಲಿ ಲಾಂಗು ಮತ್ತು ಕಬ್ಬಿಣದ ರಾಡುಗಳನ್ನು ಹಿಡಿದುಕೊಂಡು, ಅಶ್ವಿನ್ ಎಂಬವನನ್ನು ಕೊಲೆ ಮಾಡುವುದಾಗಿ ಕೂಗಾಡಿಕೊಂಡು ರಸ್ತೆಯಲ್ಲಿ ನಡೆದಾಡಿದ್ದರು. ಅಶ್ವಿನ್, ಜಿಲ್ಲಾ ಸಚಿವ, ಪಕ್ಷೇತರ ಅಭ್ಯರ್ಥಿ ವರ್ತೂರು ಪ್ರಕಾಶ್ ಅವರ ಬೆಂಬಲಿಗ.
ಕೂಡಲೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತೆಗೆದು ಕೊಂಡರು ಎಂದು ಜಿಲ್ಲಾ ರಕ್ಷಾಣಾಧಿಕಾರಿ ತಿಳಿಸಿದರು.ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಮೊ.ಸಂ. 135/2013 ಕಲಂ 143, 144, 147, 148, 504, 506, 307, 224 ರೆ/ವಿ 149 ಐಪಿಸಿ ಮತ್ತು 130 ಆರ್ಪಿ ಆಕ್ಟ್ ರೀತ್ಯ ಕೇಸು ದಾಖಲು ಮಾಡಲಾಗಿದೆ ಎಂದು ಸೆಪಟ್ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನಗರಸಭೆ ಸದಸ್ಯ ಪ್ರಸಾದ್ ಬಾಬು, ಕುಮಾರ್, ಸಂದೀಪ್, ಸಂತೋಷ್, ಲಚ್ಚಿ ಆಲಿಯಾಸ್ ಲಕ್ಷ್ಮೀನಾರಾಯಣ ಹಾಗೂ ಇತರೆ ಮೂವರ ವಿರುದ್ದ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ನಗರಸಭೆ ಸದಸ್ಯಪ್ರಸಾದ್ ಬಾಬು ಹಾಗೂ ಸದರ ಕುಮಾರ್ನನ್ನು ಭಾನುವಾರವೇ ಬಂಧಿಸಲಾಗಿತ್ತು. ಆದರೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪ್ರಸಾದ್ ಬಾಬು ತಪ್ಪಿಸಿಕೊಂಡಿದ್ದ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications