ಹೊಸ ಸರ್ಕಾರ ಬರುವ ಮೊದಲೇ ಕರೆಂಟ್ ಶಾಕ್

ವಿದ್ಯುತ್ ದರ ಏರಿಕೆ ಬಗ್ಗೆ ಮಾರ್ಚ್ ತಿಂಗಳಲ್ಲೇ ಪ್ರಸ್ತಾವನೆ ಇತ್ತು. ಆದರೆ, ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ ಪ್ರಸ್ತಾವನೆ ಮುಂದಾಡಲಾಗಿತ್ತು ಎಂದು ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಎಂ.ಆರ್. ಶ್ರೀನಿವಾಸಮೂರ್ತಿ ಹೇಳಿದ್ದಾರೆ.
ಮೇ 1ರಿಂದಲೇ ಜಾರಿಗೆ ಬರುವಂತೆ ದರ ಹೆಚ್ಚಿಸಲಾಗಿದೆ. ಏಪ್ರಿಲ್ ತಿಂಗಳ ಬಿಲ್ ಮೇ 10ರೊಳಗೆ ಕೈಗೆ ಬರುವುದರಿಂದ ಗ್ರಾಹಕರು ಈ ಬಾರಿಯ ಬಿಲ್ ಗಳಿಗೆ ನೂತನ ದರ ಪಾವತಿಸಬೇಕಾಗಿದೆ.
ಗೃಹ ಬಳಕೆ ಮಾತ್ರವಲ್ಲದೇ, ನೀರು ಸರಬರಾಜು ಸಂಬಂಧಿತ ಗ್ರಾಮೀಣ ವಿದ್ಯುತ್ ಸ್ಥಾವರ, ಎಲ್ಟಿ ಪ್ರವರ್ಗಕ್ಕೆ ಸೇರಿದ ಖಾಸಗಿ ವಿದ್ಯಾಸಂಸ್ಥೆ ಹೊರತುಪಡಿಸಿ ಇನ್ನುಳಿದ ಎಲ್ಲಾ ವರ್ಗದ ವಿದ್ಯುತ್ ಬಳಕೆದಾರರಿಗೂ ದರ ಏರಿಕೆಯ ಬಿಸಿ ತಟ್ಟಲಿದೆ.
ಎಷ್ಟು ಹೆಚ್ಚು : ಗೃಹಬಳಕೆ ಗ್ರಾಹಕರಿಗೆ ಮೊದಲ 100 ಯೂನಿಟ್ವರೆಗೆ ಪ್ರತಿ ಯೂನಿಟ್ಗೆ 20 ಪೈಸೆ ಹಾಗೂ ಅದಕ್ಕಿಂತ ಹೆಚ್ಚು ವಿದ್ಯುತ್ ಬಳಸಿದರೆ ಪ್ರತಿ ಯೂನಿಟ್ಗೆ 25 ಪೈಸೆಯಷ್ಟು ದರ ಹೆಚ್ಚಳ ಮಾಡಲಾಗಿದೆ.
ಅದೇ ರೀತಿ ಹೈಟೆನ್ಷನ್ (ಎಚ್ಟಿ) ಪ್ರವರ್ಗಕ್ಕೆ ಬರುವ ವಸತಿ ಸಂಕೀರ್ಣಗಳಿಗೆ (ರೆಸಿಡೆನ್ಷಿಯಲ್ ಅಪಾರ್ಟ್ಮೆಂಟ್ಸ್) ಸೇರಿದ ಬಳಕೆದಾರರಿಗೆ ಪ್ರತಿ ಯೂನಿಟ್ಗೆ ದರವನ್ನು 4.70 ರಿಂದ 4.90ಕ್ಕೆ (20 ಪೈಸೆ) ಹೆಚ್ಚಿಸಲಾಗಿದೆ.
ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆ ಹಾಗೂ 10 ಅಶ್ವಶಕ್ತಿಗಿಂತ ಕಡಿಮೆ ಸಾಮರ್ಥ್ಯದ ಕೃಷಿ ಪಂಪ್ಸೆಟ್ಗಳಿಗೆ ಬಳಸುವ ವಿದ್ಯುತ್ ದರವನ್ನು ಪ್ರತಿ ಯೂನಿಟ್ಗೆ 25 ಪೈಸೆ ಹೆಚ್ಚಿಸಲಾಗಿದೆ. ಕೈಗಾರಿಕೆಗಳು ಮತ್ತು ವಾಣಿಜ್ಯ ಉದ್ದೇಶಗಳಿಗೆ ಪ್ರತಿ ಯೂನಿಟ್ಗೆ 25 ಪೈಸೆ ದರ ಹೆಚ್ಚಳ ಮಾಡಲಾಗಿದೆ.
ಬೆಂಗಳೂರು ನಗರ : ನಗರ ಪ್ರದೇಶದ ಲೋ ಟೆನ್ಷನ್ (ಎಲ್ಟಿ) ಕೈಗಾರಿಕಾ ವಿದ್ಯುತ್ ಬಳಕೆದಾರರು ಮೊದಲ 500 ಯೂನಿಟ್ ಬಳಕೆಗೆ ಪ್ರತಿ ಯೂನಿಟ್ಗೆ 4.45 ರೂ, 500ಕ್ಕಿಂತ ಹೆಚ್ಚು ಯೂನಿಟ್ ಬಳಸುವವರು ಪ್ರತಿ ಯೂನಿಟ್ಗೆ 5.45 ರೂ ಪಾವತಿಸಬೇಕು.
ದರ ಏರಿಕೆಗಳು
* ಸರಾಸರಿ ದರ ಏರಿಕೆ 23 ಪೈಸೆ
* ಗೃಹಬಳಕೆ ವಿದ್ಯುತ್ 20-25 ಪೈಸೆ
* ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ 25 ಪೈಸೆ
* ಬೀದಿದೀಪ ಸ್ಥಾವರಗಳಿಗೆ 25 ಪೈಸೆ
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications